<p><strong>ಪಾಟ್ನಾ: </strong>ಬಿಹಾರದ ಖಗರಿಯಾ ಜಿಲ್ಲೆಯ ವ್ಯಕ್ತಿಯೊಬ್ಬ ಬ್ಯಾಂಕ್ ದೋಷದಿಂದ ತನ್ನ ಖಾತೆಗೆ ಜಮೆಯಾದ ₹ 5.5 ಲಕ್ಷ ಹಣವನ್ನು ಹಿಂದಿರುಗಿಸದೆ ‘ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ್ದಾರೆ’ ಎಂದು ಪಟ್ಟು ಹಿಡಿದಿದ್ದಾನೆ.</p>.<p>ಖಗರಿಯಾದ ಗ್ರಾಮೀಣ ಬ್ಯಾಂಕ್ನಿಂದ ಹಣವನ್ನು ಮಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ತಿಯಾರ್ಪುರ್ ಗ್ರಾಮದ ರಂಜಿತ್ ದಾಸ್ ಎಂಬವರಿಗೆ ತಪ್ಪಾಗಿ ವರ್ಗಾವಣೆ ಮಾಡಲಾಗಿದೆ. ಹಲವು ನೋಟಿಸ್ಗಳ ಹೊರತಾಗಿಯೂ ಹಣವನ್ನು ಹಿಂದಿರುಗಿಸದ ದಾಸ್, ಹಣವನ್ನು ಖರ್ಚು ಮಾಡಿದ್ದೇನೆ ಎಂದು ಹೇಳುತ್ತಿದ್ದಾನೆ.</p>.<p>‘ಈ ವರ್ಷದ ಮಾರ್ಚ್ನಲ್ಲಿ ನಾನು ಹಣವನ್ನು ಸ್ವೀಕರಿಸಿದಾಗ ನನಗೆ ತುಂಬಾ ಸಂತೋಷವಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ₹ 15 ಲಕ್ಷ ಹಣವನ್ನು ಹಾಕುತ್ತಿದ್ದಾರೆ. ಅದರ ಮೊದಲ ಕಂತು ಇದಾಗಿರಬಹುದು ಎಂದು ಭಾವಿಸಿ ಎಲ್ಲ ಹಣವನ್ನು ಖರ್ಚು ಮಾಡಿದೆ. ಈಗ, ನನ್ನ ಬ್ಯಾಂಕ್ ಖಾತೆಯಲ್ಲಿ ಮತ್ತು ನನ್ನ ಬಳಿ ಹಣವಿಲ್ಲ’ ಎಂದು ಬಂಧಿತನಾಗಿರುವ ದಾಸ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾನೆ.</p>.<p>‘ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ನಾವು ರಂಜಿತ್ ದಾಸ್ ಅವರನ್ನು ಬಂಧಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಮಾನ್ಸಿ ಪೊಲೀಸ್ ಠಾಣೆಯ ಠಾಣಾಧಿಕಾರಿ ದೀಪಕ್ ಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಟ್ನಾ: </strong>ಬಿಹಾರದ ಖಗರಿಯಾ ಜಿಲ್ಲೆಯ ವ್ಯಕ್ತಿಯೊಬ್ಬ ಬ್ಯಾಂಕ್ ದೋಷದಿಂದ ತನ್ನ ಖಾತೆಗೆ ಜಮೆಯಾದ ₹ 5.5 ಲಕ್ಷ ಹಣವನ್ನು ಹಿಂದಿರುಗಿಸದೆ ‘ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ್ದಾರೆ’ ಎಂದು ಪಟ್ಟು ಹಿಡಿದಿದ್ದಾನೆ.</p>.<p>ಖಗರಿಯಾದ ಗ್ರಾಮೀಣ ಬ್ಯಾಂಕ್ನಿಂದ ಹಣವನ್ನು ಮಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ತಿಯಾರ್ಪುರ್ ಗ್ರಾಮದ ರಂಜಿತ್ ದಾಸ್ ಎಂಬವರಿಗೆ ತಪ್ಪಾಗಿ ವರ್ಗಾವಣೆ ಮಾಡಲಾಗಿದೆ. ಹಲವು ನೋಟಿಸ್ಗಳ ಹೊರತಾಗಿಯೂ ಹಣವನ್ನು ಹಿಂದಿರುಗಿಸದ ದಾಸ್, ಹಣವನ್ನು ಖರ್ಚು ಮಾಡಿದ್ದೇನೆ ಎಂದು ಹೇಳುತ್ತಿದ್ದಾನೆ.</p>.<p>‘ಈ ವರ್ಷದ ಮಾರ್ಚ್ನಲ್ಲಿ ನಾನು ಹಣವನ್ನು ಸ್ವೀಕರಿಸಿದಾಗ ನನಗೆ ತುಂಬಾ ಸಂತೋಷವಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ₹ 15 ಲಕ್ಷ ಹಣವನ್ನು ಹಾಕುತ್ತಿದ್ದಾರೆ. ಅದರ ಮೊದಲ ಕಂತು ಇದಾಗಿರಬಹುದು ಎಂದು ಭಾವಿಸಿ ಎಲ್ಲ ಹಣವನ್ನು ಖರ್ಚು ಮಾಡಿದೆ. ಈಗ, ನನ್ನ ಬ್ಯಾಂಕ್ ಖಾತೆಯಲ್ಲಿ ಮತ್ತು ನನ್ನ ಬಳಿ ಹಣವಿಲ್ಲ’ ಎಂದು ಬಂಧಿತನಾಗಿರುವ ದಾಸ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾನೆ.</p>.<p>‘ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ನಾವು ರಂಜಿತ್ ದಾಸ್ ಅವರನ್ನು ಬಂಧಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಮಾನ್ಸಿ ಪೊಲೀಸ್ ಠಾಣೆಯ ಠಾಣಾಧಿಕಾರಿ ದೀಪಕ್ ಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>