ಕೋವಿಡ್ ಸಮಯದಲ್ಲಿ ದೇಶದಲ್ಲಿ ಆರೋಗ್ಯ ಹಾಗೂ ಮುಂಚೂಣಿಯ ಕಾರ್ಯಕರ್ತರು ಮಾಡಿದ ಅದ್ಭುತ ಕೆಲಸವು ಅವರ ಕೌಶಲ್ಯ ಮತ್ತು ಅರ್ಪಣೆಯನ್ನು ತೋರಿಸುತ್ತದೆ. ಇದು ನಮ್ಮ ಸೇವೆ ಮತ್ತು ಸಹಾನುಭೂತಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ವಾಸ್ತವವಾಗಿ, ವಿಶ್ವಕ್ಕೆ ನುರಿತ ಉದ್ಯೋಗಿಗಳ ಪೂರೈಕೆದಾರರಲ್ಲಿ ಒಂದಾಗುವ ಸಾಮರ್ಥ್ಯವನ್ನು ಭಾರತವು ಹೊಂದಿದೆ ಎಂದು ಉಲ್ಲೇಖಿಸಿದರು.
ಪ್ರತಿಯೊಂದು ದೇಶದ ವಿಶಿಷ್ಟ ಆರ್ಥಿಕ ಸಾಮರ್ಥ್ಯ, ಬಲ ಮತ್ತು ಸವಾಲುಗಳನ್ನು ನಾವು ಪರಿಗಣಿಸಬೇಕು. ಸಾಮಾಜಿಕ ಭದ್ರತೆಯ ಸುಸ್ಥಿರ ಹಣಕಾಸಿಗಾಗಿ ಒಂದೇ ನೀತಿ ಆಳವಡಿಸಿಕೊಳ್ಳುವುದು ಸಮಂಜಸವಲ್ಲ ಎಂದು ಹೇಳಿದ್ದಾರೆ.