<p><strong>ನವದೆಹಲಿ:</strong> ಬಾಂಗ್ಲಾದೇಶದಲ್ಲಿ ದೇಶದ್ರೋಹದ ಆರೋಪದಡಿ ಬಂಧನಕ್ಕೊಳಗಾಗಿರುವ ಇಸ್ಕಾನ್ನ ಸನ್ಯಾಸಿ ಚಿನ್ಮಯ್ ಕೃಷ್ಣದಾಸ್ ಅವರ ಬಿಡುಗಡೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ಸಂಸದರು ಲೋಕಸಭೆಯಲ್ಲಿ ಬುಧವಾರ ಆಗ್ರಹಿಸಿದರು.</p><p>ಶೂನ್ಯವೇಳೆಯಲ್ಲಿ ಮಾತನಾಡಿದ ಉಜ್ಜೈನಿ ಸಂಸದ ಅನಿಲ್ ಫಿರೊಜಿಯಾ ಅವರು ಈ ಒತ್ತಾಯವನ್ನು ಮಂಡಿಸಿದರು. ‘ಚಿನ್ಮಯ್ ಬಿಡುಗಡೆಗಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಯಾವ ವಕೀಲರೂ ಮುಂದೆ ಬಾರದಿರುವುದೂ ವಿಪರ್ಯಾಸ’ ಎಂದರು.</p><p>ಬಿಜೆಪಿ ಮಥುರಾ ಸಂಸದೆ ಹೇಮಾ ಮಾಲಿನಿ ಮಾತನಾಡಿ, ‘ಸನ್ಯಾಸಿ ಬಂಧನ ವಿಷಯ ಇಡೀ ಧರ್ಮಕ್ಕೆ ಆಗಿರುವ ಅವಮಾನ. ಹಿಂಸೆ ಹಾಗೂ ಅನ್ಯಾಯವನ್ನು ಎಂದಿಗೂ ಸಹಿಸಲಾಗದು. ಈ ವಿಷಯದಲ್ಲಿ ಮೌನವಾಗಿರಲು ಸಾಧ್ಯವಿಲ್ಲ. ಇದು ರಾಜತಾಂತ್ರಿಕ ವಿಷಯವಲ್ಲ. ಶ್ರೀಕೃಷ್ಣನ ಮೇಲಿನ ಭಕ್ತಿ ಹಾಗೂ ಭಾವನೆಗಳ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿರುವ ಮಧ್ಯಂತರ ಸರ್ಕಾರವು ಚಿನ್ಮಯ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.</p><p>ಬಿಜೆಪಿ ಸಂಸದ ದಿಲೀಪ್ ಸೈಕಿಯಾ ಮಾತನಾಡಿ, ‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಇದನ್ನು ಸ್ಥಗಿತಗೊಳಿಸಲು ಆಗ್ರಹಿಸಿ ಲೋಕಸಭೆಯು ನಿರ್ಣಯ ಅಂಗೀಕರಿಸಬೇಕು. ಆ ಸಂದೇಶವನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಳುಹಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p><p>‘1971ರಲ್ಲಿ ಬಾಂಗ್ಲಾದೇಶ ರಚನೆಯಾದ ಸಂದರ್ಭದಲ್ಲಿ ಲಕ್ಷಗಟ್ಟಲೆ ಬಾಂಗ್ಲಾದೇಶದ ಮುಸ್ಲೀಮರು ಅಸ್ಸಾಂ ಒಳಗೆ ನುಸುಳಿದ್ದರು. ಹೀಗಾಗಿ ಅವರು ನಮ್ಮ ಚುನಾವಣಾ ವ್ಯವಸ್ಥೆಯ ಒಳ ಸೇರಿದ್ದು, ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಾಂಗ್ಲಾದೇಶದಲ್ಲಿ ದೇಶದ್ರೋಹದ ಆರೋಪದಡಿ ಬಂಧನಕ್ಕೊಳಗಾಗಿರುವ ಇಸ್ಕಾನ್ನ ಸನ್ಯಾಸಿ ಚಿನ್ಮಯ್ ಕೃಷ್ಣದಾಸ್ ಅವರ ಬಿಡುಗಡೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ಸಂಸದರು ಲೋಕಸಭೆಯಲ್ಲಿ ಬುಧವಾರ ಆಗ್ರಹಿಸಿದರು.</p><p>ಶೂನ್ಯವೇಳೆಯಲ್ಲಿ ಮಾತನಾಡಿದ ಉಜ್ಜೈನಿ ಸಂಸದ ಅನಿಲ್ ಫಿರೊಜಿಯಾ ಅವರು ಈ ಒತ್ತಾಯವನ್ನು ಮಂಡಿಸಿದರು. ‘ಚಿನ್ಮಯ್ ಬಿಡುಗಡೆಗಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಯಾವ ವಕೀಲರೂ ಮುಂದೆ ಬಾರದಿರುವುದೂ ವಿಪರ್ಯಾಸ’ ಎಂದರು.</p><p>ಬಿಜೆಪಿ ಮಥುರಾ ಸಂಸದೆ ಹೇಮಾ ಮಾಲಿನಿ ಮಾತನಾಡಿ, ‘ಸನ್ಯಾಸಿ ಬಂಧನ ವಿಷಯ ಇಡೀ ಧರ್ಮಕ್ಕೆ ಆಗಿರುವ ಅವಮಾನ. ಹಿಂಸೆ ಹಾಗೂ ಅನ್ಯಾಯವನ್ನು ಎಂದಿಗೂ ಸಹಿಸಲಾಗದು. ಈ ವಿಷಯದಲ್ಲಿ ಮೌನವಾಗಿರಲು ಸಾಧ್ಯವಿಲ್ಲ. ಇದು ರಾಜತಾಂತ್ರಿಕ ವಿಷಯವಲ್ಲ. ಶ್ರೀಕೃಷ್ಣನ ಮೇಲಿನ ಭಕ್ತಿ ಹಾಗೂ ಭಾವನೆಗಳ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿರುವ ಮಧ್ಯಂತರ ಸರ್ಕಾರವು ಚಿನ್ಮಯ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.</p><p>ಬಿಜೆಪಿ ಸಂಸದ ದಿಲೀಪ್ ಸೈಕಿಯಾ ಮಾತನಾಡಿ, ‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಇದನ್ನು ಸ್ಥಗಿತಗೊಳಿಸಲು ಆಗ್ರಹಿಸಿ ಲೋಕಸಭೆಯು ನಿರ್ಣಯ ಅಂಗೀಕರಿಸಬೇಕು. ಆ ಸಂದೇಶವನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಳುಹಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p><p>‘1971ರಲ್ಲಿ ಬಾಂಗ್ಲಾದೇಶ ರಚನೆಯಾದ ಸಂದರ್ಭದಲ್ಲಿ ಲಕ್ಷಗಟ್ಟಲೆ ಬಾಂಗ್ಲಾದೇಶದ ಮುಸ್ಲೀಮರು ಅಸ್ಸಾಂ ಒಳಗೆ ನುಸುಳಿದ್ದರು. ಹೀಗಾಗಿ ಅವರು ನಮ್ಮ ಚುನಾವಣಾ ವ್ಯವಸ್ಥೆಯ ಒಳ ಸೇರಿದ್ದು, ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>