<p><strong>ನವದೆಹಲಿ:</strong> ದೇಶದ ಮೂಲಭೂತ ಆರ್ಥಿಕ ಸಮಸ್ಯೆಗಳತ್ತ ಗಮನಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>'ಕಳೆದ 10 ವರ್ಷಗಳಲ್ಲಿ ಜನರ ಮೂಲಭೂತ ಸಮಸ್ಯೆಗಳಿಂದ ಸರ್ಕಾರ ಪಲಾಯನ ಮಾಡಲು 'ಪಿಆರ್' ಅನ್ನು ಚೆನ್ನಾಗಿ ಬಳಸಿದ್ದೀರಿ. ಆದರೆ ಮುಂದೆ ಹೀಗಾಗುವುದಿಲ್ಲ. ಜನರು ಉತ್ತರವನ್ನು ಬಯಸುತ್ತಿದ್ದಾರೆ' ಎಂದು ಅವರು ಹೇಳಿದ್ದಾರೆ. </p><p>ಮುಂಬರುವ ಕೇಂದ್ರ ಬಜೆಟ್ಗಾಗಿ ಕ್ಯಾಮರಾದ ನೆರಳಿನಲ್ಲಿ ಸಭೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೂಲಭೂತ ಆರ್ಥಿಕ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. </p><p>'ಪ್ರಧಾನಿ ಮೋದಿ ಅವರ ಸರ್ಕಾರ ಕೋಟ್ಯಂತರ ಜನರ ಬದುಕನ್ನು ಹಾಳು ಮಾಡಿದ್ದು, ನಿರುದ್ಯೋಗ, ಹಣದುಬ್ಬರ ಹಾಗೂ ಅಸಮಾನತೆಯ ಕೂಪಕ್ಕೆ ತಳ್ಳಿಹಾಕಿದೆ. ನಿರುದ್ಯೋಗ ದರ ಶೇ 9.2ರಷ್ಟಿದ್ದು, ಯುವಜನರ ಭವಿಷ್ಯ ಡೋಲಾಯಮಾನವಾಗಿದೆ' ಎಂದು ಹೇಳಿದ್ದಾರೆ. </p><p>'20ರಿಂದ 24 ವರ್ಷದವರಲ್ಲಿ ನಿರುದ್ಯೋಗ ದರವು ಶೇ 40ರಷ್ಟುಏರಿಕೆ ಕಂಡಿದೆ. ಇದು ಗಂಭೀರ ಬಿಕ್ಕಟ್ಟನ್ನು ಎತ್ತಿ ತೋರಿಸುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದಲ್ಲಿ (ಪಿಎಸ್ಯು) 3.84 ಲಕ್ಷ ಉದ್ಯೋಗ ಕಡಿತಗೊಂಡಿದೆ' ಎಂದು ಅವರು ಉಲ್ಲೇಖಿಸಿದ್ದಾರೆ. </p><p>'ಹಣದುಬ್ಬರದ ಕೆಟ್ಟ ಪರಿಣಾಮದಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಪರಿಣಾಮ ಕುಟುಂಬಗಳ ಉಳಿತಾಯವು 50 ವರ್ಷಗಳಲ್ಲೇ ಅತ್ಯಂತ ಕೆಳ ಮಟ್ಟಕ್ಕೆ ಕುಸಿದಿದೆ' ಎಂದು ಅವರು ಹೇಳಿದ್ದಾರೆ. </p>.ಇಷ್ಟು ಸಂಕಷ್ಟ ಸೃಷ್ಟಿಯಾಗಲು ಪ್ರಧಾನಿ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ.ಯುವ ಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡುವುದೇ ಮೋದಿ ಸರ್ಕಾರದ ಗುರಿ: ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ಮೂಲಭೂತ ಆರ್ಥಿಕ ಸಮಸ್ಯೆಗಳತ್ತ ಗಮನಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>'ಕಳೆದ 10 ವರ್ಷಗಳಲ್ಲಿ ಜನರ ಮೂಲಭೂತ ಸಮಸ್ಯೆಗಳಿಂದ ಸರ್ಕಾರ ಪಲಾಯನ ಮಾಡಲು 'ಪಿಆರ್' ಅನ್ನು ಚೆನ್ನಾಗಿ ಬಳಸಿದ್ದೀರಿ. ಆದರೆ ಮುಂದೆ ಹೀಗಾಗುವುದಿಲ್ಲ. ಜನರು ಉತ್ತರವನ್ನು ಬಯಸುತ್ತಿದ್ದಾರೆ' ಎಂದು ಅವರು ಹೇಳಿದ್ದಾರೆ. </p><p>ಮುಂಬರುವ ಕೇಂದ್ರ ಬಜೆಟ್ಗಾಗಿ ಕ್ಯಾಮರಾದ ನೆರಳಿನಲ್ಲಿ ಸಭೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೂಲಭೂತ ಆರ್ಥಿಕ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. </p><p>'ಪ್ರಧಾನಿ ಮೋದಿ ಅವರ ಸರ್ಕಾರ ಕೋಟ್ಯಂತರ ಜನರ ಬದುಕನ್ನು ಹಾಳು ಮಾಡಿದ್ದು, ನಿರುದ್ಯೋಗ, ಹಣದುಬ್ಬರ ಹಾಗೂ ಅಸಮಾನತೆಯ ಕೂಪಕ್ಕೆ ತಳ್ಳಿಹಾಕಿದೆ. ನಿರುದ್ಯೋಗ ದರ ಶೇ 9.2ರಷ್ಟಿದ್ದು, ಯುವಜನರ ಭವಿಷ್ಯ ಡೋಲಾಯಮಾನವಾಗಿದೆ' ಎಂದು ಹೇಳಿದ್ದಾರೆ. </p><p>'20ರಿಂದ 24 ವರ್ಷದವರಲ್ಲಿ ನಿರುದ್ಯೋಗ ದರವು ಶೇ 40ರಷ್ಟುಏರಿಕೆ ಕಂಡಿದೆ. ಇದು ಗಂಭೀರ ಬಿಕ್ಕಟ್ಟನ್ನು ಎತ್ತಿ ತೋರಿಸುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದಲ್ಲಿ (ಪಿಎಸ್ಯು) 3.84 ಲಕ್ಷ ಉದ್ಯೋಗ ಕಡಿತಗೊಂಡಿದೆ' ಎಂದು ಅವರು ಉಲ್ಲೇಖಿಸಿದ್ದಾರೆ. </p><p>'ಹಣದುಬ್ಬರದ ಕೆಟ್ಟ ಪರಿಣಾಮದಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಪರಿಣಾಮ ಕುಟುಂಬಗಳ ಉಳಿತಾಯವು 50 ವರ್ಷಗಳಲ್ಲೇ ಅತ್ಯಂತ ಕೆಳ ಮಟ್ಟಕ್ಕೆ ಕುಸಿದಿದೆ' ಎಂದು ಅವರು ಹೇಳಿದ್ದಾರೆ. </p>.ಇಷ್ಟು ಸಂಕಷ್ಟ ಸೃಷ್ಟಿಯಾಗಲು ಪ್ರಧಾನಿ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ.ಯುವ ಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡುವುದೇ ಮೋದಿ ಸರ್ಕಾರದ ಗುರಿ: ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>