<p><strong>ಗುವಾಹಟಿ:</strong> ‘ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ಅಸ್ಸಾಂನಲ್ಲಿ ಅಧಿಕಾರದಿಂದ ದೂರವುಳಿದಿದೆ. ಅಧಿಕಾರದಲ್ಲಿ ಇದ್ದ ಅವಧಿಗಿಂತಲೂ ಈಗ ಹೆಚ್ಚು ಅಪಾಯಕಾರಿ. ಆ ಪಕ್ಷದ ನಾಯಕರು ನೀಡಿದ ವಿಷಪೂರಿತ ಹೇಳಿಕೆಗಳಿಂದ ಇದು ಸ್ಪಷ್ಟವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.</p><p>ಇಲ್ಲಿನ ಖಾನಾಪಾರಾದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕಾಂಗ್ರೆಸ್ ಯಾವಾಗಲೂ ದೇಶದ ಭದ್ರತೆಗೆ ಅಪಾಯ ಉಂಟು ಮಾಡಿದೆ. ಅಸ್ಸಾಂನಲ್ಲಿಯೂ ಕೂಡ ತನ್ನ ಅಧಿಕಾರದ ಅವಧಿಯಲ್ಲಿ ಅಭದ್ರತೆ ಹಾಗೂ ಭಯವನ್ನು ಸೃಷ್ಟಿಸಿತ್ತು’ ಎಂದು ಆರೋಪಿಸಿದ್ದಾರೆ.</p><p>‘ಕಾಂಗ್ರೆಸ್ ಆಡಳಿತದಲ್ಲಿ ಅಸ್ಸಾಂ ರಾಜ್ಯವನ್ನು ಬಂದ್, ಹಿಂಸಾಚಾರ ಹಾಗೂ ಸಂಘರ್ಷಕ್ಕೆ ತಳ್ಳಿತ್ತು. ಪ್ರತಿ ವರ್ಷ ಇದರಿಂದ 1 ಸಾವಿರ ಮಂದಿ ಮೃತಪಟ್ಟಿದ್ದು, ಇದರ ಹೊಣೆಯನ್ನು ಕಾಂಗ್ರೆಸ್ ಪಕ್ಷ ಹೊರಬೇಕು. ಈಗ ಹಲವಾರು ಯುವಕರು ಶಸ್ತ್ರಾಸ್ತ್ರ ತ್ಯಜಿಸಿ, ಸಂವಿಧಾನದ ಮಾರ್ಗ ಅನುಸರಿಸಿದ್ದು, ಅಭಿವೃದ್ಧಿ ಹಾಗೂ ಶಾಂತಿಯ ಮಾರ್ಗದಲ್ಲಿ ಮುನ್ನಡೆಯುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.</p><p>‘ಮತ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದ್ದ ಕಾಂಗ್ರೆಸ್ ಧ್ರುವೀಕರಣಕ್ಕೆ ಮುಂದಾಗಿತ್ತು, ಇವುಗಳನ್ನು ಉತ್ತೇಜಿಸುವ ನಿರ್ಧಾರವನ್ನು ತೆಗೆದುಕೊಂಡಿತ್ತು’ ಎಂದು ಆರೋಪಿಸಿದ್ದಾರೆ. </p><p>‘ಮುಸ್ಲಿಂ ಲೀಗ್ನಿಂದ ದೇಶ ವಿಭಜನೆಯಾಯಿತು. ಈಗ ಮಾವೋವಾದಿ, ಮುಸ್ಲಿಂ ಲೀಗ್ ಹಾಗೂ ಕಾಂಗ್ರೆಸ್ (ಎಂಎಂಸಿ) ಕುರಿತು ಜನರು ಎಚ್ಚರಿಕೆಯಿಂದ ಇರಬೇಕು’ ಎಂದು ಮೋದಿ ಕರೆ ನೀಡಿದ್ದಾರೆ.</p><p>‘ನುಸುಳುಕೋರರಿಗೆ ಕಾಂಗ್ರೆಸ್ ಪಕ್ಷವು ನೆರವು ನೀಡುತ್ತಿದ್ದು, ಅಕ್ರಮ ನುಸುಳುಕೋರರನ್ನು ಬಿಜೆಪಿಯು ಮಟ್ಟ ಹಾಕಲಿದೆ. ಹೀಗಾಗಿ, ಮುಂದಿನ ಐದು ವರ್ಷ ರಾಜ್ಯದ ಪಾಲಿಗೆ ನಿರ್ಣಾಯಕವಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ‘ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ಅಸ್ಸಾಂನಲ್ಲಿ ಅಧಿಕಾರದಿಂದ ದೂರವುಳಿದಿದೆ. ಅಧಿಕಾರದಲ್ಲಿ ಇದ್ದ ಅವಧಿಗಿಂತಲೂ ಈಗ ಹೆಚ್ಚು ಅಪಾಯಕಾರಿ. ಆ ಪಕ್ಷದ ನಾಯಕರು ನೀಡಿದ ವಿಷಪೂರಿತ ಹೇಳಿಕೆಗಳಿಂದ ಇದು ಸ್ಪಷ್ಟವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.</p><p>ಇಲ್ಲಿನ ಖಾನಾಪಾರಾದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕಾಂಗ್ರೆಸ್ ಯಾವಾಗಲೂ ದೇಶದ ಭದ್ರತೆಗೆ ಅಪಾಯ ಉಂಟು ಮಾಡಿದೆ. ಅಸ್ಸಾಂನಲ್ಲಿಯೂ ಕೂಡ ತನ್ನ ಅಧಿಕಾರದ ಅವಧಿಯಲ್ಲಿ ಅಭದ್ರತೆ ಹಾಗೂ ಭಯವನ್ನು ಸೃಷ್ಟಿಸಿತ್ತು’ ಎಂದು ಆರೋಪಿಸಿದ್ದಾರೆ.</p><p>‘ಕಾಂಗ್ರೆಸ್ ಆಡಳಿತದಲ್ಲಿ ಅಸ್ಸಾಂ ರಾಜ್ಯವನ್ನು ಬಂದ್, ಹಿಂಸಾಚಾರ ಹಾಗೂ ಸಂಘರ್ಷಕ್ಕೆ ತಳ್ಳಿತ್ತು. ಪ್ರತಿ ವರ್ಷ ಇದರಿಂದ 1 ಸಾವಿರ ಮಂದಿ ಮೃತಪಟ್ಟಿದ್ದು, ಇದರ ಹೊಣೆಯನ್ನು ಕಾಂಗ್ರೆಸ್ ಪಕ್ಷ ಹೊರಬೇಕು. ಈಗ ಹಲವಾರು ಯುವಕರು ಶಸ್ತ್ರಾಸ್ತ್ರ ತ್ಯಜಿಸಿ, ಸಂವಿಧಾನದ ಮಾರ್ಗ ಅನುಸರಿಸಿದ್ದು, ಅಭಿವೃದ್ಧಿ ಹಾಗೂ ಶಾಂತಿಯ ಮಾರ್ಗದಲ್ಲಿ ಮುನ್ನಡೆಯುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.</p><p>‘ಮತ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದ್ದ ಕಾಂಗ್ರೆಸ್ ಧ್ರುವೀಕರಣಕ್ಕೆ ಮುಂದಾಗಿತ್ತು, ಇವುಗಳನ್ನು ಉತ್ತೇಜಿಸುವ ನಿರ್ಧಾರವನ್ನು ತೆಗೆದುಕೊಂಡಿತ್ತು’ ಎಂದು ಆರೋಪಿಸಿದ್ದಾರೆ. </p><p>‘ಮುಸ್ಲಿಂ ಲೀಗ್ನಿಂದ ದೇಶ ವಿಭಜನೆಯಾಯಿತು. ಈಗ ಮಾವೋವಾದಿ, ಮುಸ್ಲಿಂ ಲೀಗ್ ಹಾಗೂ ಕಾಂಗ್ರೆಸ್ (ಎಂಎಂಸಿ) ಕುರಿತು ಜನರು ಎಚ್ಚರಿಕೆಯಿಂದ ಇರಬೇಕು’ ಎಂದು ಮೋದಿ ಕರೆ ನೀಡಿದ್ದಾರೆ.</p><p>‘ನುಸುಳುಕೋರರಿಗೆ ಕಾಂಗ್ರೆಸ್ ಪಕ್ಷವು ನೆರವು ನೀಡುತ್ತಿದ್ದು, ಅಕ್ರಮ ನುಸುಳುಕೋರರನ್ನು ಬಿಜೆಪಿಯು ಮಟ್ಟ ಹಾಕಲಿದೆ. ಹೀಗಾಗಿ, ಮುಂದಿನ ಐದು ವರ್ಷ ರಾಜ್ಯದ ಪಾಲಿಗೆ ನಿರ್ಣಾಯಕವಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>