<p><strong>ಮಾಲದಾ:</strong> ‘ಅಕ್ರಮ ವಲಸಿಗರ ನುಸುಳುವಿಕೆಯಿಂದಾಗಿ ಪಶ್ಚಿಮ ಬಂಗಾಳದ ಜನಸಂಖ್ಯೆಯ ಸ್ವರೂಪವೇ ಬದಲಾಗಿದೆ. ಆಡಳಿತ ಪಕ್ಷದ ‘ಪೋಷಣೆ ಮತ್ತು ಸಿಂಡಿಕೇಟ್ ರಾಜ್’ನಿಂದಾಗಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.</p>.<p>ಇಲ್ಲಿ ಶನಿವಾರ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, ‘ಬಂಗಾಳಕ್ಕೆ ಒಳನುಸುಳುವಿಕೆಯು ದೊಡ್ಡ ಸವಾಲಾಗಿದೆ. ಜಗತ್ತಿನಾದ್ಯಂತ ಶ್ರೀಮಂತ ರಾಷ್ಟ್ರಗಳು ಸಹ ಅಕ್ರಮ ವಲಸಿಗರನ್ನು ಪತ್ತೆ ಮಾಡಿ ಗಡೀಪಾರು ಮಾಡಲು ದೃಢ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ’ ಎಂದು ಪ್ರತಿಪಾದಿಸಿದರು.</p>.<p>‘ಅಭಿವೃದ್ಧಿ ಹೊಂದಿದ ದೇಶಗಳಿಗೆ ಹಣದ ಕೊರತೆಯಿಲ್ಲ. ಆದರೂ ಅವು ಅಕ್ರಮ ವಲಸಿಗರನ್ನು ಹೊರ ಹಾಕುತ್ತಿವೆ. ಪಶ್ಚಿಮ ಬಂಗಾಳದಿಂದಲೂ ಅಕ್ರಮ ವಲಸಿಗರನ್ನು ಹೊರ ಹಾಕುವುದು ಅವಶ್ಯವಾಗಿದೆ’ ಎಂದು ಹೇಳಿದರು.</p>.<p>‘ಮಾಲದಾ ಮತ್ತು ಮುರ್ಷಿದಾಬಾದ್ ಸೇರಿದಂತೆ ವಿವಿಧೆಡೆ ಅಕ್ರಮ ವಲಸಿಗರಿಂದಾಗಿ ಗಲಭೆಗಳು ಭುಗಿಲೆದ್ದಿವೆ. ಈ ವಲಸಿಗರು ನೆಲೆಗೊಳ್ಳುವಂತೆ ಮಾಡಲು ಟಿಎಂಸಿಯ ‘ಸಿಂಡಿಕೇಟ್’ ವ್ಯವಸ್ಥೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಇದು ಅನೇಕ ಪ್ರದೇಶಗಳಲ್ಲಿ ಜನಸಂಖ್ಯೆಯ ಬದಲಾವಣೆಗೆ ಕಾರಣವಾಗಿದೆ’ ಎಂದು ಆರೋಪಿಸಿದರು.</p>.<p>‘ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳ ಎದುರಿಸಿ ಭಾರತಕ್ಕೆ ವಲಸೆ ಬಂದಿರುವ ಮತುವಾ ಸಮುದಾಯದವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಗ್ಗೆ ಚಿಂತಿಸಬೇಕಾಗಿಲ್ಲ. ಧಾರ್ಮಿಕವಾಗಿ ಕಿರುಕುಳಕ್ಕೆ ಒಳಗಾಗಿರುವ ಎಲ್ಲ ನಿರಾಶ್ರಿತರಿಗೂ ದೇಶದಲ್ಲಿ ಆಶ್ರಯ ನೀಡಲಾಗುವುದು’ ಎಂದು ಧೈರ್ಯ ತುಂಬಿದರು.</p>.<p>‘ಟಿಎಂಸಿ ನಡೆಸುತ್ತಿರುವ ಗೂಂಡಾಗಿರಿ ಮತ್ತು ಬೆದರಿಕೆ ರಾಜಕೀಯವು ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಉತ್ತಮ ಆಡಳಿತವನ್ನು ಖಾತರಿಪಡಿಸಿದ ಬಿಜೆಪಿ ಆಡಳಿತದ ರಾಜ್ಯಗಳಿಂದ ಬಂಗಾಳವು ಸುತ್ತುವರಿದಿದೆ. ಈಗ ಇಲ್ಲೂ ಉತ್ತಮ ಆಡಳಿತ ದೊರೆಯುವ ಸಮಯ ಬಂದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲದಾ:</strong> ‘ಅಕ್ರಮ ವಲಸಿಗರ ನುಸುಳುವಿಕೆಯಿಂದಾಗಿ ಪಶ್ಚಿಮ ಬಂಗಾಳದ ಜನಸಂಖ್ಯೆಯ ಸ್ವರೂಪವೇ ಬದಲಾಗಿದೆ. ಆಡಳಿತ ಪಕ್ಷದ ‘ಪೋಷಣೆ ಮತ್ತು ಸಿಂಡಿಕೇಟ್ ರಾಜ್’ನಿಂದಾಗಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.</p>.<p>ಇಲ್ಲಿ ಶನಿವಾರ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, ‘ಬಂಗಾಳಕ್ಕೆ ಒಳನುಸುಳುವಿಕೆಯು ದೊಡ್ಡ ಸವಾಲಾಗಿದೆ. ಜಗತ್ತಿನಾದ್ಯಂತ ಶ್ರೀಮಂತ ರಾಷ್ಟ್ರಗಳು ಸಹ ಅಕ್ರಮ ವಲಸಿಗರನ್ನು ಪತ್ತೆ ಮಾಡಿ ಗಡೀಪಾರು ಮಾಡಲು ದೃಢ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ’ ಎಂದು ಪ್ರತಿಪಾದಿಸಿದರು.</p>.<p>‘ಅಭಿವೃದ್ಧಿ ಹೊಂದಿದ ದೇಶಗಳಿಗೆ ಹಣದ ಕೊರತೆಯಿಲ್ಲ. ಆದರೂ ಅವು ಅಕ್ರಮ ವಲಸಿಗರನ್ನು ಹೊರ ಹಾಕುತ್ತಿವೆ. ಪಶ್ಚಿಮ ಬಂಗಾಳದಿಂದಲೂ ಅಕ್ರಮ ವಲಸಿಗರನ್ನು ಹೊರ ಹಾಕುವುದು ಅವಶ್ಯವಾಗಿದೆ’ ಎಂದು ಹೇಳಿದರು.</p>.<p>‘ಮಾಲದಾ ಮತ್ತು ಮುರ್ಷಿದಾಬಾದ್ ಸೇರಿದಂತೆ ವಿವಿಧೆಡೆ ಅಕ್ರಮ ವಲಸಿಗರಿಂದಾಗಿ ಗಲಭೆಗಳು ಭುಗಿಲೆದ್ದಿವೆ. ಈ ವಲಸಿಗರು ನೆಲೆಗೊಳ್ಳುವಂತೆ ಮಾಡಲು ಟಿಎಂಸಿಯ ‘ಸಿಂಡಿಕೇಟ್’ ವ್ಯವಸ್ಥೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಇದು ಅನೇಕ ಪ್ರದೇಶಗಳಲ್ಲಿ ಜನಸಂಖ್ಯೆಯ ಬದಲಾವಣೆಗೆ ಕಾರಣವಾಗಿದೆ’ ಎಂದು ಆರೋಪಿಸಿದರು.</p>.<p>‘ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳ ಎದುರಿಸಿ ಭಾರತಕ್ಕೆ ವಲಸೆ ಬಂದಿರುವ ಮತುವಾ ಸಮುದಾಯದವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಗ್ಗೆ ಚಿಂತಿಸಬೇಕಾಗಿಲ್ಲ. ಧಾರ್ಮಿಕವಾಗಿ ಕಿರುಕುಳಕ್ಕೆ ಒಳಗಾಗಿರುವ ಎಲ್ಲ ನಿರಾಶ್ರಿತರಿಗೂ ದೇಶದಲ್ಲಿ ಆಶ್ರಯ ನೀಡಲಾಗುವುದು’ ಎಂದು ಧೈರ್ಯ ತುಂಬಿದರು.</p>.<p>‘ಟಿಎಂಸಿ ನಡೆಸುತ್ತಿರುವ ಗೂಂಡಾಗಿರಿ ಮತ್ತು ಬೆದರಿಕೆ ರಾಜಕೀಯವು ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಉತ್ತಮ ಆಡಳಿತವನ್ನು ಖಾತರಿಪಡಿಸಿದ ಬಿಜೆಪಿ ಆಡಳಿತದ ರಾಜ್ಯಗಳಿಂದ ಬಂಗಾಳವು ಸುತ್ತುವರಿದಿದೆ. ಈಗ ಇಲ್ಲೂ ಉತ್ತಮ ಆಡಳಿತ ದೊರೆಯುವ ಸಮಯ ಬಂದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>