<p><strong>ನವದೆಹಲಿ</strong>: ಕುವೈತ್ನಲ್ಲಿ ಅನಾರೋಗ್ಯಕ್ಕೆ ಈಡಾಗಿ ಆಸ್ಪತ್ರೆಗೆ ದಾಖಲಾಗಿರುವ ಡಿಪಿಎಪಿ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ, ದೂರವಾಣಿ ಮೂಲಕ ಮಾತನಾಡಿದ್ದಾರೆ.</p><p>ಪಾಕಿಸ್ತಾನದಿಂದ ಭಯೋತ್ಪಾದನೆಗೆ ಕುಮ್ಮಕ್ಕು ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಿಶ್ವದ ಪ್ರಮುಖ ದೇಶಗಳಿಗೆ ಮನವರಿಕೆ ಮಾಡಿಕೊಡಲು ತೆರಳಿರುವ ನಿಯೋಗದಲ್ಲಿ ಗುಲಾಮ್ ನಬಿ ಆಜಾದ್ ಇದ್ದಾರೆ.</p><p>ಆಜಾದ್ ಅವರಿಗೆ ಕರೆ ಮಾಡಿದ್ದ ಮೋದಿ, ಆರೋಗ್ಯದ ಬಗ್ಗೆ ವಿಚಾರಿಸಿದರು. ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ನಿಯೋಗದ ನೇತೃತ್ವ ವಹಿಸಿರುವ ಬಿಜೆಪಿ ಸಂಸದ ವೈಜಯಂತ್ ಜಯ್ ಪಾಂಡಾ, ಆಜಾದ್ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.</p><p>ಬಹ್ರೇನ್ ಮತ್ತು ಕುವೈತ್ನಲ್ಲಿ ನಡೆದ ಸಭೆಗಳಲ್ಲಿ ಆಜಾದ್ ಅವರ ಮಾತು ಹೆಚ್ಚು ಪ್ರಭಾವಶಾಲಿಯಾಗಿತ್ತು. ಅವರು ಹಾಸಿಗೆ ಹಿಡಿದಿರುವುದು ನಿರಾಶೆ ಮೂಡಿಸಿದೆ ಎಂದು ಪಾಂಡಾ ಹೇಳಿದ್ದಾರೆ.</p><p>ಪಾಕಿಸ್ತಾನದಿಂದ ಭಯೋತ್ಪಾದನೆಗೆ ಪ್ರೋತ್ಸಾಹ ಮತ್ತು ಭಯೋತ್ಪಾದನೆ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಸಂಕಲ್ಪವನ್ನು ತಿಳಿಸಲು ಏಳು ಬಹು ಪಕ್ಷ ನಿಯೋಗಗಳು ವಿವಿಧ ದೇಶಗಳಿಗೆ ತೆರಳಿವೆ.</p><p>ಪಾಂಡಾ ನೇತೃತ್ವದ ನಿಯೋಗವು ಸೌದಿ ಅರೇಬಿಯಾ, ಕುವೈತ್, ಬಹ್ರೇನ್ ಮತ್ತು ಅಲ್ಜೀರಿಯಾಗಳಿಗೆ ತೆರಳಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕುವೈತ್ನಲ್ಲಿ ಅನಾರೋಗ್ಯಕ್ಕೆ ಈಡಾಗಿ ಆಸ್ಪತ್ರೆಗೆ ದಾಖಲಾಗಿರುವ ಡಿಪಿಎಪಿ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ, ದೂರವಾಣಿ ಮೂಲಕ ಮಾತನಾಡಿದ್ದಾರೆ.</p><p>ಪಾಕಿಸ್ತಾನದಿಂದ ಭಯೋತ್ಪಾದನೆಗೆ ಕುಮ್ಮಕ್ಕು ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಿಶ್ವದ ಪ್ರಮುಖ ದೇಶಗಳಿಗೆ ಮನವರಿಕೆ ಮಾಡಿಕೊಡಲು ತೆರಳಿರುವ ನಿಯೋಗದಲ್ಲಿ ಗುಲಾಮ್ ನಬಿ ಆಜಾದ್ ಇದ್ದಾರೆ.</p><p>ಆಜಾದ್ ಅವರಿಗೆ ಕರೆ ಮಾಡಿದ್ದ ಮೋದಿ, ಆರೋಗ್ಯದ ಬಗ್ಗೆ ವಿಚಾರಿಸಿದರು. ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ನಿಯೋಗದ ನೇತೃತ್ವ ವಹಿಸಿರುವ ಬಿಜೆಪಿ ಸಂಸದ ವೈಜಯಂತ್ ಜಯ್ ಪಾಂಡಾ, ಆಜಾದ್ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.</p><p>ಬಹ್ರೇನ್ ಮತ್ತು ಕುವೈತ್ನಲ್ಲಿ ನಡೆದ ಸಭೆಗಳಲ್ಲಿ ಆಜಾದ್ ಅವರ ಮಾತು ಹೆಚ್ಚು ಪ್ರಭಾವಶಾಲಿಯಾಗಿತ್ತು. ಅವರು ಹಾಸಿಗೆ ಹಿಡಿದಿರುವುದು ನಿರಾಶೆ ಮೂಡಿಸಿದೆ ಎಂದು ಪಾಂಡಾ ಹೇಳಿದ್ದಾರೆ.</p><p>ಪಾಕಿಸ್ತಾನದಿಂದ ಭಯೋತ್ಪಾದನೆಗೆ ಪ್ರೋತ್ಸಾಹ ಮತ್ತು ಭಯೋತ್ಪಾದನೆ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಸಂಕಲ್ಪವನ್ನು ತಿಳಿಸಲು ಏಳು ಬಹು ಪಕ್ಷ ನಿಯೋಗಗಳು ವಿವಿಧ ದೇಶಗಳಿಗೆ ತೆರಳಿವೆ.</p><p>ಪಾಂಡಾ ನೇತೃತ್ವದ ನಿಯೋಗವು ಸೌದಿ ಅರೇಬಿಯಾ, ಕುವೈತ್, ಬಹ್ರೇನ್ ಮತ್ತು ಅಲ್ಜೀರಿಯಾಗಳಿಗೆ ತೆರಳಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>