<p><strong>ನವದೆಹಲಿ:</strong> ಎಲ್ಲಾ ರಾಜಕೀಯ ಪಕ್ಷಗಳು ಮುಕ್ತ ಮನಸ್ಸಿನಿಂದ ಸಂಸತ್ ಅಧಿವೇಶನದಲ್ಲಿ ಗುಣಮಟ್ಟದ ಚರ್ಚೆ ನಡೆಸುತ್ತವೆ ಎಂದು ನಾನು ಭಾವಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಸಂಸತ್ನ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ಮಂಗಳವಾರ ಬಜೆಟ್ ಮಂಡನೆಯಾಗಲಿದ್ದು, ಸುಗಮ ಕಲಾಪಕ್ಕೆ ಪ್ರಧಾನಿ ಮನವಿ ಮಾಡಿದ್ದಾರೆ.</p>.<p>‘ಇಂದಿನಿಂದ ಬಜೆಟ್ ಅಧಿವೇಶನ ಆರಂಭ. ನಾನು ನಿಮ್ಮನ್ನು ಮತ್ತು ಎಲ್ಲಾ ಸಂಸದರನ್ನು ಈ ಅಧಿವೇಶನಕ್ಕೆ ಸ್ವಾಗತಿಸುತ್ತೇನೆ. ಭಾರತಕ್ಕೆ ಜಾಗತಿಕವಾಗಿ ಸಾಕಷ್ಟು ಅವಕಾಶಗಳಿವೆ. ಈ ಅಧಿವೇಶನವು ದೇಶದ ಆರ್ಥಿಕ ಪ್ರಗತಿಗೆ ನೆರವಾಗಲಿ. ಲಸಿಕೆ ಕಾರ್ಯಕ್ರಮ, ‘ಮೇಡ್ ಇನ್ ಇಂಡಿಯಾ’ ಲಸಿಕೆ ವಿಶ್ವದಲ್ಲೇ ವಿಶ್ವಾಸ ಮೂಡಿಸುತ್ತಿದೆ’ ಎಂದು ಪ್ರಧಾನಿ ಹೇಳಿದ್ದಾರೆ.</p>.<p>ಈ ಅಧಿವೇಶನದಲ್ಲಿ ನಡೆಯುವ ಮುಕ್ತ ಚರ್ಚೆಗಳು ಭಾರತದ ಜಾಗತಿಕ ಪ್ರಭಾವಕ್ಕೆ ಪ್ರಮುಖ ಅವಕಾಶವಾಗಬಹುದು. ಎಲ್ಲಾ ರಾಜಕೀಯ ಪಕ್ಷಗಳು ಮುಕ್ತ ಮನಸ್ಸಿನಿಂದ ಗುಣಮಟ್ಟದ ಚರ್ಚೆಗಳನ್ನು ನಡೆತ್ತಾರೆ ಎಂದು ಭಾವಿಸಿದ್ದೇನೆ ಎಂದು ಅವರು ಹೇಳಿದ್ದಾರೆ.</p>.<p>‘ಚುನಾವಣೆಗಳು ಅಧಿವೇಶನ ಮತ್ತು ಚರ್ಚೆಯ ಮೇಲೆ ಪರಿಣಾಮ ಬೀರುವುದು ನಿಜ. ಆದರೆ, ಚುನಾವಣೆಗಳು ನಡೆಯಲಿ. ಇಡೀ ವರ್ಷಕ್ಕೆ ನೀಲನಕ್ಷೆಯನ್ನು ಒದಗಿಸಿಕೊಡುವ ಈ ಅಧಿವೇಶವು ಫಲಪ್ರದವಾಗಲಿ ಎಂದು ನಾನು ಎಲ್ಲ ಸಂಸದರಲ್ಲಿ ಮನವಿ ಮಾಡುತ್ತೇನೆ. ಈ ವರ್ಷವು ದೇಶವನ್ನು ಆರ್ಥಿಕತೆಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಉತ್ತಮ ಅವಕಾಶ ಕಲ್ಪಿಸಲಿ’ ಎಂದು ಪ್ರಧಾನಿ ಆಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಎಲ್ಲಾ ರಾಜಕೀಯ ಪಕ್ಷಗಳು ಮುಕ್ತ ಮನಸ್ಸಿನಿಂದ ಸಂಸತ್ ಅಧಿವೇಶನದಲ್ಲಿ ಗುಣಮಟ್ಟದ ಚರ್ಚೆ ನಡೆಸುತ್ತವೆ ಎಂದು ನಾನು ಭಾವಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಸಂಸತ್ನ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ಮಂಗಳವಾರ ಬಜೆಟ್ ಮಂಡನೆಯಾಗಲಿದ್ದು, ಸುಗಮ ಕಲಾಪಕ್ಕೆ ಪ್ರಧಾನಿ ಮನವಿ ಮಾಡಿದ್ದಾರೆ.</p>.<p>‘ಇಂದಿನಿಂದ ಬಜೆಟ್ ಅಧಿವೇಶನ ಆರಂಭ. ನಾನು ನಿಮ್ಮನ್ನು ಮತ್ತು ಎಲ್ಲಾ ಸಂಸದರನ್ನು ಈ ಅಧಿವೇಶನಕ್ಕೆ ಸ್ವಾಗತಿಸುತ್ತೇನೆ. ಭಾರತಕ್ಕೆ ಜಾಗತಿಕವಾಗಿ ಸಾಕಷ್ಟು ಅವಕಾಶಗಳಿವೆ. ಈ ಅಧಿವೇಶನವು ದೇಶದ ಆರ್ಥಿಕ ಪ್ರಗತಿಗೆ ನೆರವಾಗಲಿ. ಲಸಿಕೆ ಕಾರ್ಯಕ್ರಮ, ‘ಮೇಡ್ ಇನ್ ಇಂಡಿಯಾ’ ಲಸಿಕೆ ವಿಶ್ವದಲ್ಲೇ ವಿಶ್ವಾಸ ಮೂಡಿಸುತ್ತಿದೆ’ ಎಂದು ಪ್ರಧಾನಿ ಹೇಳಿದ್ದಾರೆ.</p>.<p>ಈ ಅಧಿವೇಶನದಲ್ಲಿ ನಡೆಯುವ ಮುಕ್ತ ಚರ್ಚೆಗಳು ಭಾರತದ ಜಾಗತಿಕ ಪ್ರಭಾವಕ್ಕೆ ಪ್ರಮುಖ ಅವಕಾಶವಾಗಬಹುದು. ಎಲ್ಲಾ ರಾಜಕೀಯ ಪಕ್ಷಗಳು ಮುಕ್ತ ಮನಸ್ಸಿನಿಂದ ಗುಣಮಟ್ಟದ ಚರ್ಚೆಗಳನ್ನು ನಡೆತ್ತಾರೆ ಎಂದು ಭಾವಿಸಿದ್ದೇನೆ ಎಂದು ಅವರು ಹೇಳಿದ್ದಾರೆ.</p>.<p>‘ಚುನಾವಣೆಗಳು ಅಧಿವೇಶನ ಮತ್ತು ಚರ್ಚೆಯ ಮೇಲೆ ಪರಿಣಾಮ ಬೀರುವುದು ನಿಜ. ಆದರೆ, ಚುನಾವಣೆಗಳು ನಡೆಯಲಿ. ಇಡೀ ವರ್ಷಕ್ಕೆ ನೀಲನಕ್ಷೆಯನ್ನು ಒದಗಿಸಿಕೊಡುವ ಈ ಅಧಿವೇಶವು ಫಲಪ್ರದವಾಗಲಿ ಎಂದು ನಾನು ಎಲ್ಲ ಸಂಸದರಲ್ಲಿ ಮನವಿ ಮಾಡುತ್ತೇನೆ. ಈ ವರ್ಷವು ದೇಶವನ್ನು ಆರ್ಥಿಕತೆಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಉತ್ತಮ ಅವಕಾಶ ಕಲ್ಪಿಸಲಿ’ ಎಂದು ಪ್ರಧಾನಿ ಆಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>