<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿ ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ .</p><p>ಪಕ್ಷದ ‘ಮೇರಾ ಬೂತ್ ಸಬ್ಸೆ ಮಜ್ಬೂತ್‘ ಕಾರ್ಯಕ್ರಮದಡಿಯಲ್ಲಿ ವಿಡಿಯೊ-ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p><p>ಬುಧವಾರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿಯವರು ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರೊಂದಗೆ ಸಂವಾದ ನಡೆಸಲಿದ್ದಾರೆ ಎಂದು ನಮೋ ಅಪ್ಲಿಕೇಶನ್ನ ರಾಷ್ಟ್ರೀಯ ಸಂಯೋಜಕ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲ್ಜೀತ್ ಸಿಂಗ್ ಚಹಲ್ ಮಾಹಿತಿ ನೀಡಿದ್ದಾರೆ.</p><p>ಮೇರಾ ಬೂತ್ ಸಬ್ಸೆ ಮಜ್ಬೂತ್ ಕಾರ್ಯಕ್ರಮದಡಿಯಲ್ಲಿ, ದೆಹಲಿಯ ಎಲ್ಲಾ 256 ವಾರ್ಡ್ಗಳಲ್ಲಿರುವ 13,033 ಬೂತ್ಗಳ ಪಕ್ಷದ ಕಾರ್ಯಕರ್ತರು ವೀಡಿಯೊ ಕರೆ ಮೂಲಕ ಪ್ರಧಾನ ಮಂತ್ರಿಯ ಸಂದೇಶವನ್ನು ಆಲಿಸುತ್ತಾರೆ. ಅವರಲ್ಲಿ ಕೆಲವರು ಸಂಭಾಷಣೆಯಲ್ಲಿ ಮೋದಿಯೊಂದಿಗೆ ತೊಡಗಿಸಿಕೊಳ್ಳಲು ಅವಕಾಶವನ್ನು ಪಡೆಯಲಿದ್ದಾರೆ ಎಂದು ಚಹಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿ ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ .</p><p>ಪಕ್ಷದ ‘ಮೇರಾ ಬೂತ್ ಸಬ್ಸೆ ಮಜ್ಬೂತ್‘ ಕಾರ್ಯಕ್ರಮದಡಿಯಲ್ಲಿ ವಿಡಿಯೊ-ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p><p>ಬುಧವಾರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿಯವರು ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರೊಂದಗೆ ಸಂವಾದ ನಡೆಸಲಿದ್ದಾರೆ ಎಂದು ನಮೋ ಅಪ್ಲಿಕೇಶನ್ನ ರಾಷ್ಟ್ರೀಯ ಸಂಯೋಜಕ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲ್ಜೀತ್ ಸಿಂಗ್ ಚಹಲ್ ಮಾಹಿತಿ ನೀಡಿದ್ದಾರೆ.</p><p>ಮೇರಾ ಬೂತ್ ಸಬ್ಸೆ ಮಜ್ಬೂತ್ ಕಾರ್ಯಕ್ರಮದಡಿಯಲ್ಲಿ, ದೆಹಲಿಯ ಎಲ್ಲಾ 256 ವಾರ್ಡ್ಗಳಲ್ಲಿರುವ 13,033 ಬೂತ್ಗಳ ಪಕ್ಷದ ಕಾರ್ಯಕರ್ತರು ವೀಡಿಯೊ ಕರೆ ಮೂಲಕ ಪ್ರಧಾನ ಮಂತ್ರಿಯ ಸಂದೇಶವನ್ನು ಆಲಿಸುತ್ತಾರೆ. ಅವರಲ್ಲಿ ಕೆಲವರು ಸಂಭಾಷಣೆಯಲ್ಲಿ ಮೋದಿಯೊಂದಿಗೆ ತೊಡಗಿಸಿಕೊಳ್ಳಲು ಅವಕಾಶವನ್ನು ಪಡೆಯಲಿದ್ದಾರೆ ಎಂದು ಚಹಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>