<p><strong>ಅಮರಾವತಿ:</strong> ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಸಂಜೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಮೊದಲ ಚುನಾವಣಾ ರ್ಯಾಲಿ ಆರಂಭಿಸಲಿದ್ದಾರೆ. </p> <p>ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರೊಂದಿಗೆ ಪ್ರಧಾನಿ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮೂವರೂ ನಾಯಕರು ವೇದಿಕೆ ಹಂಚಿಕೊಳ್ಳುತ್ತಿರುವುದು ಇದೇ ಮೊದಲು.</p> <p>'ಪ್ರಜಾಗಳಂ' ಎಂದು ಹೆಸರಿಸಲಾಗಿರುವ ಈ ರ್ಯಾಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಎನ್ಡಿಎ ಮೈತ್ರಿಕೂಟದ ಮೊದಲ ಸಾರ್ವಜನಿಕ ಸಭೆಯಾಗಿದೆ.</p> <p>'ಆಂಧ್ರಪ್ರದೇಶದ ಉಜ್ವಲ ಭವಿಷ್ಯಕ್ಕಾಗಿ ಕ್ರೂರ ರಾಜಕಾರಣವನ್ನು ಅಂತ್ಯಗೊಳಿಸುವ ಗುರಿಯನ್ನು ಪ್ರಜಾಗಳಂ ಹೊಂದಿದೆ‘ ಎಂದು ಜನಸೇನೆ ಹೇಳಿದೆ. ಸಭೆಯಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ.</p>.ಲೋಕಸಭಾ ಚುನಾವಣೆ 2024: ನೀವು ತಿಳಿದಿರಬೇಕಾದ ಅಂಕಿಅಂಶ.<p>ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ, ಜನಸೇನಾ ಮತ್ತು ಟಿಡಿಪಿ ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲು ನಿರ್ಧರಿಸಿವೆ ಎಂದು ನಾಯ್ಡು ಹಿಂದೆ ಹೇಳಿದ್ದರು.</p> <p>ಬಿಜೆಪಿ 6 ಲೋಕಸಭಾ ಮತ್ತು 10 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಟಿಡಿಪಿ 17 ಲೋಕಸಭಾ ಮತ್ತು 144 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಪವನ್ ಕಲ್ಯಾಣ್ ಅವರ ಜನಸೇನಾ 2 ಲೋಕಸಭಾ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.</p> <p>ನಾಯ್ಡು ಅವರು ವಿಧಾನಸಭೆ ಚುನಾವಣೆಗೆ 128 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಇನ್ನೂ 16 ಅಭ್ಯರ್ಥಿಗಳ ಹೆಸರು ಬಾಕಿ ಉಳಿದಿವೆ.</p> <p>ಜನಸೇನಾ ಇದುವರೆಗೆ 7 ಅಭ್ಯರ್ಥಿಗಳನ್ನು ಘೋಷಿಸಿದ್ದು, ಪವನ್ ಕಲ್ಯಾಣ್ ಪಿಠಾಪುರಂ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ.</p> <p>ಟಿಡಿಪಿ ಹಂಚಿಕೊಂಡ ಮಾಹಿತಿ ಪ್ರಕಾರ, ಪ್ರಧಾನಿ ಮೋದಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಸಂಜೆ 4.10ಕ್ಕೆ ಗನ್ನಾವರಂ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. </p> <p>ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಪಲ್ನಾಡು ಜಿಲ್ಲೆಗೆ ಆಗಮಿಸಲಿದ್ದು , ಸಂಜೆ 5 ಗಂಟೆ ಸುಮಾರಿಗೆ ಬೊಪ್ಪುಡಿ ಗ್ರಾಮದಲ್ಲಿರುವ ಆಯೋಜಿಸಲಾಗಿರುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ರಿಂದ 6 ಗಂಟೆಯವರೆಗೆ ಪ್ರಧಾನಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲಿದ್ದು , ಬಳಿಕ ಹೈದರಾಬಾದ್ಗೆ ತೆರಳಲಿದ್ದಾರೆ.</p>.ಲೋಕಸಭಾ ಚುನಾವಣೆ 2024: ಕಾಂಗ್ರೆಸ್ಗೆ ಭ್ರಷ್ಟಾಚಾರವೇ ಆಕ್ಸಿಜನ್- ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಸಂಜೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಮೊದಲ ಚುನಾವಣಾ ರ್ಯಾಲಿ ಆರಂಭಿಸಲಿದ್ದಾರೆ. </p> <p>ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರೊಂದಿಗೆ ಪ್ರಧಾನಿ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮೂವರೂ ನಾಯಕರು ವೇದಿಕೆ ಹಂಚಿಕೊಳ್ಳುತ್ತಿರುವುದು ಇದೇ ಮೊದಲು.</p> <p>'ಪ್ರಜಾಗಳಂ' ಎಂದು ಹೆಸರಿಸಲಾಗಿರುವ ಈ ರ್ಯಾಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಎನ್ಡಿಎ ಮೈತ್ರಿಕೂಟದ ಮೊದಲ ಸಾರ್ವಜನಿಕ ಸಭೆಯಾಗಿದೆ.</p> <p>'ಆಂಧ್ರಪ್ರದೇಶದ ಉಜ್ವಲ ಭವಿಷ್ಯಕ್ಕಾಗಿ ಕ್ರೂರ ರಾಜಕಾರಣವನ್ನು ಅಂತ್ಯಗೊಳಿಸುವ ಗುರಿಯನ್ನು ಪ್ರಜಾಗಳಂ ಹೊಂದಿದೆ‘ ಎಂದು ಜನಸೇನೆ ಹೇಳಿದೆ. ಸಭೆಯಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ.</p>.ಲೋಕಸಭಾ ಚುನಾವಣೆ 2024: ನೀವು ತಿಳಿದಿರಬೇಕಾದ ಅಂಕಿಅಂಶ.<p>ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ, ಜನಸೇನಾ ಮತ್ತು ಟಿಡಿಪಿ ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲು ನಿರ್ಧರಿಸಿವೆ ಎಂದು ನಾಯ್ಡು ಹಿಂದೆ ಹೇಳಿದ್ದರು.</p> <p>ಬಿಜೆಪಿ 6 ಲೋಕಸಭಾ ಮತ್ತು 10 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಟಿಡಿಪಿ 17 ಲೋಕಸಭಾ ಮತ್ತು 144 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಪವನ್ ಕಲ್ಯಾಣ್ ಅವರ ಜನಸೇನಾ 2 ಲೋಕಸಭಾ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.</p> <p>ನಾಯ್ಡು ಅವರು ವಿಧಾನಸಭೆ ಚುನಾವಣೆಗೆ 128 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಇನ್ನೂ 16 ಅಭ್ಯರ್ಥಿಗಳ ಹೆಸರು ಬಾಕಿ ಉಳಿದಿವೆ.</p> <p>ಜನಸೇನಾ ಇದುವರೆಗೆ 7 ಅಭ್ಯರ್ಥಿಗಳನ್ನು ಘೋಷಿಸಿದ್ದು, ಪವನ್ ಕಲ್ಯಾಣ್ ಪಿಠಾಪುರಂ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ.</p> <p>ಟಿಡಿಪಿ ಹಂಚಿಕೊಂಡ ಮಾಹಿತಿ ಪ್ರಕಾರ, ಪ್ರಧಾನಿ ಮೋದಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಸಂಜೆ 4.10ಕ್ಕೆ ಗನ್ನಾವರಂ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. </p> <p>ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಪಲ್ನಾಡು ಜಿಲ್ಲೆಗೆ ಆಗಮಿಸಲಿದ್ದು , ಸಂಜೆ 5 ಗಂಟೆ ಸುಮಾರಿಗೆ ಬೊಪ್ಪುಡಿ ಗ್ರಾಮದಲ್ಲಿರುವ ಆಯೋಜಿಸಲಾಗಿರುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ರಿಂದ 6 ಗಂಟೆಯವರೆಗೆ ಪ್ರಧಾನಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲಿದ್ದು , ಬಳಿಕ ಹೈದರಾಬಾದ್ಗೆ ತೆರಳಲಿದ್ದಾರೆ.</p>.ಲೋಕಸಭಾ ಚುನಾವಣೆ 2024: ಕಾಂಗ್ರೆಸ್ಗೆ ಭ್ರಷ್ಟಾಚಾರವೇ ಆಕ್ಸಿಜನ್- ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>