<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಡೆಯಲಿರುವ ‘ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್’ ಕಾರ್ಯಕ್ರಮದಲ್ಲಿ ಇಡೀ ದಿನ ಭಾಗವಹಿಸಲಿದ್ದಾರೆ.</p>.<p>ರಾಜಕೀಯ ನಂಟು ಇಲ್ಲದ ಒಂದು ಲಕ್ಷ ಯುವ ಜನತೆಯನ್ನು ರಾಜಕೀಯಕ್ಕೆ ಕರೆತರುವ ಅವರ ಪ್ರಯತ್ನದ ಭಾಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಸ್ವಾಮಿ ವಿವೇಕಾನಂದ ಅವರ ಜನ್ಮ ದಿನೋತ್ಸವವನ್ನು ‘ರಾಷ್ಟ್ರೀಯ ಯುವ ದಿನ’ ಎಂದು ಆಚರಿಸಲಾಗುತ್ತಿದ್ದು, ಅಂದೇ ಈ ಕಾರ್ಯಕ್ರಮ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ ಬರಲಿರುವ 3 ಸಾವಿರ ‘ಉತ್ಸಾಹಿ ಯುವ ಜನತೆ’ಯೊಂದಿಗೆ ಪ್ರಧಾನಿ ಸಂವಾದ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p>‘ನನ್ನ ಯುವ ಸ್ನೇಹಿತರೊಂದಿಗೆ ಇಡೀ ದಿನ ಕಳೆಯಲಿದ್ದೇನೆ. ಭೋಜನದ ಜೊತೆಗೆ, ‘ವಿಕಸಿತ ಭಾರತ’ ನಿರ್ಮಾಣ ಉದ್ದೇಶದ ಹಲವು ವಿಷಯಗಳ ಕುರಿತು ಅವರೊಂದಿಗೆ ಚರ್ಚೆ, ಸಂವಾದ ನಡೆಸಲಿದ್ದೇನೆ’ ಎಂದು ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p><strong>ಹೊಸ ಸಂಪ್ರದಾಯ:</strong> ಸ್ವಾಮಿ ವಿವೇಕಾನಂದ ಜಯಂತ್ಯುತ್ಸವದ ಅಂಗವಾಗಿ ಪ್ರತಿ ವರ್ಷ ರಾಷ್ಟ್ರೀಯ ಯುವ ಜನೋತ್ಸವ ಹಮ್ಮಿಕೊಳ್ಳಲಾಗುತ್ತಿತ್ತು. 25 ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಈ ಸಂಪ್ರದಾಯಕ್ಕೆ ಕೊನೆ ಹಾಡಿ, ‘ಯುವ ನಾಯಕ’ರೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಕಾರ್ಯಕ್ರಮದ ವಿಶೇಷತೆಗಳು</strong></p><p>* ದೇಶದ ಭವಿಷ್ಯದ ನಾಯಕರಿಗೆ ಪ್ರೇರೇಪಿಸಲು ಉತ್ತೇಜನ ನೀಡುವುದಕ್ಕಾಗಿ ರೂಪಿಸಿದ ವಿವಿಧ ಚಟುವಟಿಕೆಗಳಲ್ಲಿ ಮೋದಿ ಭಾಗಿ</p><p>* ‘ಯುವ ನಾಯಕ’ರಿಂದ 10 ವಿಷಯಗಳ ಕುರಿತು 10 ಪವರ್ ಪಾಯಿಂಟ್ ಪ್ರಸ್ತುತಿ</p><p>* 10 ವಿಷಯಗಳ ಕುರಿತು ಸ್ಪರ್ಧಿಗಳು ರಚಿಸಿರುವ ಅತ್ಯುತ್ತಮ ಪ್ರಬಂಧಗಳ ಸಂಕಲನವನ್ನು ಮೋದಿ ಬಿಡುಗಡೆ ಮಾಡುವರು </p><p>* ವಿವಿಧ ಸ್ಪರ್ಧೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶದ ಕಲಾ ಪರಂಪರೆ ಬಿಂಬಿಸುವ ಪ್ರದರ್ಶನಗಳು ನಡೆಯಲಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಡೆಯಲಿರುವ ‘ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್’ ಕಾರ್ಯಕ್ರಮದಲ್ಲಿ ಇಡೀ ದಿನ ಭಾಗವಹಿಸಲಿದ್ದಾರೆ.</p>.<p>ರಾಜಕೀಯ ನಂಟು ಇಲ್ಲದ ಒಂದು ಲಕ್ಷ ಯುವ ಜನತೆಯನ್ನು ರಾಜಕೀಯಕ್ಕೆ ಕರೆತರುವ ಅವರ ಪ್ರಯತ್ನದ ಭಾಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಸ್ವಾಮಿ ವಿವೇಕಾನಂದ ಅವರ ಜನ್ಮ ದಿನೋತ್ಸವವನ್ನು ‘ರಾಷ್ಟ್ರೀಯ ಯುವ ದಿನ’ ಎಂದು ಆಚರಿಸಲಾಗುತ್ತಿದ್ದು, ಅಂದೇ ಈ ಕಾರ್ಯಕ್ರಮ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ ಬರಲಿರುವ 3 ಸಾವಿರ ‘ಉತ್ಸಾಹಿ ಯುವ ಜನತೆ’ಯೊಂದಿಗೆ ಪ್ರಧಾನಿ ಸಂವಾದ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p>‘ನನ್ನ ಯುವ ಸ್ನೇಹಿತರೊಂದಿಗೆ ಇಡೀ ದಿನ ಕಳೆಯಲಿದ್ದೇನೆ. ಭೋಜನದ ಜೊತೆಗೆ, ‘ವಿಕಸಿತ ಭಾರತ’ ನಿರ್ಮಾಣ ಉದ್ದೇಶದ ಹಲವು ವಿಷಯಗಳ ಕುರಿತು ಅವರೊಂದಿಗೆ ಚರ್ಚೆ, ಸಂವಾದ ನಡೆಸಲಿದ್ದೇನೆ’ ಎಂದು ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p><strong>ಹೊಸ ಸಂಪ್ರದಾಯ:</strong> ಸ್ವಾಮಿ ವಿವೇಕಾನಂದ ಜಯಂತ್ಯುತ್ಸವದ ಅಂಗವಾಗಿ ಪ್ರತಿ ವರ್ಷ ರಾಷ್ಟ್ರೀಯ ಯುವ ಜನೋತ್ಸವ ಹಮ್ಮಿಕೊಳ್ಳಲಾಗುತ್ತಿತ್ತು. 25 ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಈ ಸಂಪ್ರದಾಯಕ್ಕೆ ಕೊನೆ ಹಾಡಿ, ‘ಯುವ ನಾಯಕ’ರೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಕಾರ್ಯಕ್ರಮದ ವಿಶೇಷತೆಗಳು</strong></p><p>* ದೇಶದ ಭವಿಷ್ಯದ ನಾಯಕರಿಗೆ ಪ್ರೇರೇಪಿಸಲು ಉತ್ತೇಜನ ನೀಡುವುದಕ್ಕಾಗಿ ರೂಪಿಸಿದ ವಿವಿಧ ಚಟುವಟಿಕೆಗಳಲ್ಲಿ ಮೋದಿ ಭಾಗಿ</p><p>* ‘ಯುವ ನಾಯಕ’ರಿಂದ 10 ವಿಷಯಗಳ ಕುರಿತು 10 ಪವರ್ ಪಾಯಿಂಟ್ ಪ್ರಸ್ತುತಿ</p><p>* 10 ವಿಷಯಗಳ ಕುರಿತು ಸ್ಪರ್ಧಿಗಳು ರಚಿಸಿರುವ ಅತ್ಯುತ್ತಮ ಪ್ರಬಂಧಗಳ ಸಂಕಲನವನ್ನು ಮೋದಿ ಬಿಡುಗಡೆ ಮಾಡುವರು </p><p>* ವಿವಿಧ ಸ್ಪರ್ಧೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶದ ಕಲಾ ಪರಂಪರೆ ಬಿಂಬಿಸುವ ಪ್ರದರ್ಶನಗಳು ನಡೆಯಲಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>