ಮಹಾರಾಷ್ಟ್ರದಲ್ಲಿ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರು ಬಿಜೆಪಿ–ಶಿವಸೇನೆ(ಶಿಂದೆ ಬಣ) ಸರ್ಕಾರದ ಜೊತೆ ಕೈಜೋಡಿಸಿದ್ದಾರೆ. ಮತ್ತೊಂದೆಡೆ ಎನ್ಸಿಪಿ ಸಂಸದ ಪ್ರಫುಲ್ ಪಟೇಲ್ ಅವರು ತನ್ನ ದೀರ್ಘಕಾಲದ ರಾಜಕೀಯ ಮಾರ್ಗದರ್ಶಕರಾದ ಶರದ್ ಪವಾರ್ ಅವರನ್ನು ಬದಿಗೊತ್ತಿ ಅಜಿತ್ ಅವರ ಜೊತೆಗೂಡಿದ್ದಾರೆ. ಹಾಗಾಗಿ, ಕೇಂದ್ರ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಅವರು, ಹೊಸದಾಗಿ ಸಂಪುಟಕ್ಕೆ ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.