<p class="title"><strong>ನವದೆಹಲಿ:</strong>ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದೇ 27 ರಂದು ಭಾರತ-ಮಧ್ಯ ಏಷ್ಯಾದ ಮೊದಲ ಶೃಂಗಸಭೆಯನ್ನು ವರ್ಚುವಲ್ ಸ್ವರೂಪದ ಮೂಲಕ ಆಯೋಜಿಸಿದ್ದಾರೆ.</p>.<p class="title">ಈ ಸಂದರ್ಭದಲ್ಲಿ ವಿವಿಧ ದೇಶಗಳ ನಾಯಕರು ತಮ್ಮಲ್ಲಿನ ಬಾಂಧವ್ಯವನ್ನು ಮತ್ತಷ್ಟು ವಿಸ್ತರಿಸುವ ಮತ್ತು ಪ್ರಾದೇಶಿಕ ಭದ್ರತಾ ಪರಿಸ್ಥಿತಿಯನ್ನು ಕಾಪಾಡುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p class="bodytext">ವರ್ಚುವಲ್ ಶೃಂಗಸಭೆಯಲ್ಲಿಕಝಕಿಸ್ತಾನದ ಅಧ್ಯಕ್ಷರಾದ ಕಾಸಿಮ್-ಜೋಮಾರ್ಟ್ ಟೊಕಾಯೆವ್, ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್, ತಜಿಕಿಸ್ತಾನದ ಅಧ್ಯಕ್ಷ ಎಮೋಮಾಲಿ ರಹ್ಮನ್, ತುರ್ಕಮೆನಿಸ್ತಾನದ ಅಧ್ಯಕ್ಷ ಗುರ್ಬಂಗುಲಿ ಬರ್ಡಿಮುಹಮೆಡೋವ್ ಮತ್ತು ಕಿರ್ಜಿಸ್ ರಿಪಬ್ಲಿಕ್ನ ಅಧ್ಯಕ್ಷ ಸಾದಿರ್ ಜಾಪರೋವ್ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಹೇಳಿಕೆಯಲ್ಲಿ ತಿಳಿಸಿದೆ.</p>.<p>ಶೃಂಗಸಭೆಯು, ಭಾರತದ ‘ವಿಸ್ತೃತ ನೆರೆಹೊರೆಯ’ ಭಾಗವಾಗಿರುವ ಮಧ್ಯ ಏಷ್ಯಾದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯದ ಪ್ರತಿಬಿಂಬವಾಗಿದೆ ಎಂದು ಎಂಇಎ ಹೇಳಿದೆ.</p>.<p>ಈ ಶೃಂಗಸಭೆಯು ಭಾರತ ಮತ್ತು ಮಧ್ಯ ಏಷ್ಯಾದ ದೇಶಗಳ ನಾಯಕರು ಸಮಗ್ರ ಮತ್ತು ನಿರಂತರವಾದ ಭಾರತ-ಮಧ್ಯ ಏಷ್ಯಾ ಪಾಲುದಾರಿಕೆಗೆ ನೀಡಿದ ಪ್ರಾಮುಖ್ಯತೆಯ ಸಂಕೇತವಾಗಿದೆ ಎಂದೂ ಹೇಳಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದೇ 27 ರಂದು ಭಾರತ-ಮಧ್ಯ ಏಷ್ಯಾದ ಮೊದಲ ಶೃಂಗಸಭೆಯನ್ನು ವರ್ಚುವಲ್ ಸ್ವರೂಪದ ಮೂಲಕ ಆಯೋಜಿಸಿದ್ದಾರೆ.</p>.<p class="title">ಈ ಸಂದರ್ಭದಲ್ಲಿ ವಿವಿಧ ದೇಶಗಳ ನಾಯಕರು ತಮ್ಮಲ್ಲಿನ ಬಾಂಧವ್ಯವನ್ನು ಮತ್ತಷ್ಟು ವಿಸ್ತರಿಸುವ ಮತ್ತು ಪ್ರಾದೇಶಿಕ ಭದ್ರತಾ ಪರಿಸ್ಥಿತಿಯನ್ನು ಕಾಪಾಡುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p class="bodytext">ವರ್ಚುವಲ್ ಶೃಂಗಸಭೆಯಲ್ಲಿಕಝಕಿಸ್ತಾನದ ಅಧ್ಯಕ್ಷರಾದ ಕಾಸಿಮ್-ಜೋಮಾರ್ಟ್ ಟೊಕಾಯೆವ್, ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್, ತಜಿಕಿಸ್ತಾನದ ಅಧ್ಯಕ್ಷ ಎಮೋಮಾಲಿ ರಹ್ಮನ್, ತುರ್ಕಮೆನಿಸ್ತಾನದ ಅಧ್ಯಕ್ಷ ಗುರ್ಬಂಗುಲಿ ಬರ್ಡಿಮುಹಮೆಡೋವ್ ಮತ್ತು ಕಿರ್ಜಿಸ್ ರಿಪಬ್ಲಿಕ್ನ ಅಧ್ಯಕ್ಷ ಸಾದಿರ್ ಜಾಪರೋವ್ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಹೇಳಿಕೆಯಲ್ಲಿ ತಿಳಿಸಿದೆ.</p>.<p>ಶೃಂಗಸಭೆಯು, ಭಾರತದ ‘ವಿಸ್ತೃತ ನೆರೆಹೊರೆಯ’ ಭಾಗವಾಗಿರುವ ಮಧ್ಯ ಏಷ್ಯಾದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯದ ಪ್ರತಿಬಿಂಬವಾಗಿದೆ ಎಂದು ಎಂಇಎ ಹೇಳಿದೆ.</p>.<p>ಈ ಶೃಂಗಸಭೆಯು ಭಾರತ ಮತ್ತು ಮಧ್ಯ ಏಷ್ಯಾದ ದೇಶಗಳ ನಾಯಕರು ಸಮಗ್ರ ಮತ್ತು ನಿರಂತರವಾದ ಭಾರತ-ಮಧ್ಯ ಏಷ್ಯಾ ಪಾಲುದಾರಿಕೆಗೆ ನೀಡಿದ ಪ್ರಾಮುಖ್ಯತೆಯ ಸಂಕೇತವಾಗಿದೆ ಎಂದೂ ಹೇಳಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>