ಪಟ್ನಾ (ಪಿಟಿಐ): ‘ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಿಂದ ಈ ವರ್ಷ, ಕಡೆಯ ಬಾರಿಗೆ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ‘ ಎಂದು ರಾಷ್ಟ್ರೀಯ ಜನತಾದಳದ ಅಧ್ಯಕ್ಷ ಲಾಲು ಪ್ರಸಾದ್ ಹೇಳಿದ್ದಾರೆ.
ಮಂಗಳವಾರ ತಮ್ಮ ನಿವಾಸದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಬಳಿಕ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿಯೂ ಆಗಿರುವ ಪತ್ನಿ ರಾಬ್ಡಿದೇವಿ ಅವರ ಜೊತೆಗೂಡಿ ಲಾಲು ಪ್ರಸಾದ್ ಧ್ವಜಾರೋಹಣ ಮಾಡಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಲಘುದಾಟಿಯಲ್ಲಿ ಮಾತಿಗಿಳಿದ ಅವರು, ಮುಂದಿನ ವರ್ಷ ಲೋಕಸಭೆ ಚುನಾವಣೆ ಬಳಿಕ ಬರುವ ಸ್ವಾತಂತ್ರ್ಯೋತ್ಸವದಂದು ಪ್ರಧಾನಿ ಮೋದಿ ದ್ವಜಾರೋಹಣ ಮಾಡುವರೇ ಎಂಬ ಪ್ರಶ್ನೆಗೆ, ‘ಖಂಡಿತವಾಗಿ ಇಲ್ಲ’ ಎಂದು ಹೇಳಿದರು.
‘ಇದು, ಅವರ ಕಡೆಯ ಅವಕಾಶ. ಮುಂದಿನ ಬಾರಿ ನಾವುಗಳೇ ಬರುತ್ತೇವೆ’ ಎಂದು ‘ಇಂಡಿಯಾ’ ಮೈತ್ರಿಕೂಟದ ಭಾಗವೂ ಆಗಿರುವ ಅವರು ಪ್ರತಿಕ್ರಿಯಿಸಿದರು.