<p><strong>ನವದೆಹಲಿ: </strong>‘ಸ್ವಾತಂತ್ರ್ಯ ಅಮೃತ ಮಹೋತ್ಸವದ ವರ್ಷದಲ್ಲೇ ಭಾರತವು ಜಿ–20 ಗುಂಪಿನ ಅಧ್ಯಕ್ಷತೆ ವಹಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ದೇಶದ ಪಾಲಿಗೆ ಇದೊಂದು ಉತ್ತಮ ಅವಕಾಶ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕಭಾರತದ ‘ಜಿ–20’ ಅಧ್ಯಕ್ಷತೆ ಕುರಿತಾದ ಲಾಂಛನ, ಥೀಮ್ ಹಾಗೂ ವೆಬ್ಸೈಟ್ ಅನಾವರಣಗೊಳಿಸಿ ಮಾತನಾಡಿದರು.</p>.<p>‘ಸ್ವಾತಂತ್ರ್ಯ ನಂತರ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗಲು ಎಲ್ಲಾ ಸರ್ಕಾರಗಳು ಹಾಗೂ ಪ್ರತಿಯೊಬ್ಬ ನಾಗರಿಕರೂ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಪ್ರಜಾಪ್ರಭುತ್ವವು ಸಂಸ್ಕೃತಿಯಾದಾಗ ಸಂಘರ್ಷ ಕೊನೆಗೊಳ್ಳುತ್ತದೆ ಎಂಬುದನ್ನು ಭಾರತವು ಇಡೀ ಜಗತ್ತಿಗೆ ತೋರಿಸಿಕೊಡಲಿದೆ’ ಎಂದು ಮೋದಿ ತಿಳಿಸಿದ್ದಾರೆ.</p>.<p>‘ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುವಾಗ ಅಭಿವೃದ್ಧಿ ಮತ್ತು ಪ್ರಕೃತಿ ಜೊತೆಯಾಗಿ ಸಾಗಬೇಕು’ ಎಂದಿದ್ದಾರೆ.</p>.<p>ಭಾರತವು ಡಿಸೆಂಬರ್ 1ರಂದು ಜಿ–20 ಗುಂಪಿನ ಅಧ್ಯಕ್ಷತೆ ವಹಿಸಿಕೊಳ್ಳಲಿದೆ.ಸದ್ಯ ಇಂಡೊನೇಷ್ಯಾ ಈ ಗುಂಪಿನ ಅಧ್ಯಕ್ಷತೆ ಹೊಂದಿದೆ. ಈ ತಿಂಗಳ 15 ಮತ್ತು 16ರಂದು ಬಾಲಿಯಲ್ಲಿ ಜಿ–20 ಸಮ್ಮೇಳನ ನಡೆಯಲಿದ್ದು, ಇದರಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಸ್ವಾತಂತ್ರ್ಯ ಅಮೃತ ಮಹೋತ್ಸವದ ವರ್ಷದಲ್ಲೇ ಭಾರತವು ಜಿ–20 ಗುಂಪಿನ ಅಧ್ಯಕ್ಷತೆ ವಹಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ದೇಶದ ಪಾಲಿಗೆ ಇದೊಂದು ಉತ್ತಮ ಅವಕಾಶ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕಭಾರತದ ‘ಜಿ–20’ ಅಧ್ಯಕ್ಷತೆ ಕುರಿತಾದ ಲಾಂಛನ, ಥೀಮ್ ಹಾಗೂ ವೆಬ್ಸೈಟ್ ಅನಾವರಣಗೊಳಿಸಿ ಮಾತನಾಡಿದರು.</p>.<p>‘ಸ್ವಾತಂತ್ರ್ಯ ನಂತರ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗಲು ಎಲ್ಲಾ ಸರ್ಕಾರಗಳು ಹಾಗೂ ಪ್ರತಿಯೊಬ್ಬ ನಾಗರಿಕರೂ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಪ್ರಜಾಪ್ರಭುತ್ವವು ಸಂಸ್ಕೃತಿಯಾದಾಗ ಸಂಘರ್ಷ ಕೊನೆಗೊಳ್ಳುತ್ತದೆ ಎಂಬುದನ್ನು ಭಾರತವು ಇಡೀ ಜಗತ್ತಿಗೆ ತೋರಿಸಿಕೊಡಲಿದೆ’ ಎಂದು ಮೋದಿ ತಿಳಿಸಿದ್ದಾರೆ.</p>.<p>‘ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುವಾಗ ಅಭಿವೃದ್ಧಿ ಮತ್ತು ಪ್ರಕೃತಿ ಜೊತೆಯಾಗಿ ಸಾಗಬೇಕು’ ಎಂದಿದ್ದಾರೆ.</p>.<p>ಭಾರತವು ಡಿಸೆಂಬರ್ 1ರಂದು ಜಿ–20 ಗುಂಪಿನ ಅಧ್ಯಕ್ಷತೆ ವಹಿಸಿಕೊಳ್ಳಲಿದೆ.ಸದ್ಯ ಇಂಡೊನೇಷ್ಯಾ ಈ ಗುಂಪಿನ ಅಧ್ಯಕ್ಷತೆ ಹೊಂದಿದೆ. ಈ ತಿಂಗಳ 15 ಮತ್ತು 16ರಂದು ಬಾಲಿಯಲ್ಲಿ ಜಿ–20 ಸಮ್ಮೇಳನ ನಡೆಯಲಿದ್ದು, ಇದರಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>