<p><strong>ನವದೆಹಲಿ: </strong>ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.</p>.<p>ಇಂದು (ಬುಧವಾರ) ನಡೆದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ರಾಜ್ಯಗಳಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಹೇಳಿದ್ದಾರೆ.</p>.<p>ಓಮೈಕ್ರಾನ್ ರೂಪಾಂತರ ತಳಿಯ ಹೊಸ ಪ್ರಕರಣಗಳು ಕಂಡುಬಂದರೆ ಹೆಚ್ಚು ಗಂಭೀರವಾಗಿ ಪರಿಗಣಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ.</p>.<p>‘ಕೋವಿಡ್ ಸೋಂಕು ಇನ್ನು ಸಂಪೂರ್ಣವಾಗಿ ದೂರವಾಗಿಲ್ಲ. ಕೋವಿಡ್ ಬಿಕ್ಕಟ್ಟು ನಿರ್ವಹಣೆಗೆ ಸಂಬಂಧಿಸಿ ಇತರ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೆಲವು ರಾಜ್ಯಗಳಲ್ಲಿ ಮಾತ್ರ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಸೋಂಕು ಹರಡುವಿಕೆ ಬಗ್ಗೆ ಜಾಗರೂಕರಾಗಿರಬೇಕು’ ಎಂದು ಹೇಳಿದ್ದಾರೆ.</p>.<p>ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ಲಸಿಕೆಯನ್ನು ತ್ವರಿತವಾಗಿ ನೀಡುವಂತೆ ರಾಜ್ಯಗಳನ್ನು ಒತ್ತಾಯಿಸಿದ ಮೋದಿ, ಅರ್ಹ ಮಕ್ಕಳಿಗೆ ಸಾಧ್ಯವಾದಷ್ಟು ಬೇಗ ಲಸಿಕೆ ವಿತರಿಸುವಂತೆ ಮನವಿ ಮಾಡಿದ್ದಾರೆ.</p>.<p>ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಕೆಲವು ನಿರ್ಬಂಧನೆಗಳನ್ನು ಜಾರಿಗೆ ತರಲಾಗಿದೆ.</p>.<p><strong>ಓದಿ...<a href="https://www.prajavani.net/india-news/covid-updates-india-records-2927-fresh-covid-casesand-32-deaths-in-a-day-931916.html" target="_blank">Covid Updates India: 2,927 ಹೊಸ ಪ್ರಕರಣಗಳು ದೃಢ, 32 ಮಂದಿ ಸಾವು</a></strong></p>.<p><strong>ಇಂಧನದ ಮೇಲಿನ ಅಬಕಾರಿ ಸುಂಕಕಡಿತ:</strong>ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವಂತೆ ನಾನು ರಾಜ್ಯಗಳನ್ನು ಒತ್ತಾಯಿಸಿದ್ದೇನೆ. ಆದರೆ, ಕೆಲವು ರಾಜ್ಯಗಳು ನಿಯಮ ಪಾಲಿಸಿಲ್ಲ ಎಂದು ಮೋದಿ ಹೇಳಿದ್ದಾರೆ.<br /><br />ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಜನರ ಮೇಲಿನ ಹೊರೆಯನ್ನು ನಿವಾರಿಸುವಉದ್ದೇಶದಿಂದ ರಾಜ್ಯಗಳು ಕೂಡಲೇ ಅಬಕಾರಿ ಸುಂಕವನ್ನು ಕಡಿತ ಮಾಡುವಂತೆ ಮೋದಿ ಅವರು ಪುನರುಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.</p>.<p>ಇಂದು (ಬುಧವಾರ) ನಡೆದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ರಾಜ್ಯಗಳಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಹೇಳಿದ್ದಾರೆ.</p>.<p>ಓಮೈಕ್ರಾನ್ ರೂಪಾಂತರ ತಳಿಯ ಹೊಸ ಪ್ರಕರಣಗಳು ಕಂಡುಬಂದರೆ ಹೆಚ್ಚು ಗಂಭೀರವಾಗಿ ಪರಿಗಣಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ.</p>.<p>‘ಕೋವಿಡ್ ಸೋಂಕು ಇನ್ನು ಸಂಪೂರ್ಣವಾಗಿ ದೂರವಾಗಿಲ್ಲ. ಕೋವಿಡ್ ಬಿಕ್ಕಟ್ಟು ನಿರ್ವಹಣೆಗೆ ಸಂಬಂಧಿಸಿ ಇತರ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೆಲವು ರಾಜ್ಯಗಳಲ್ಲಿ ಮಾತ್ರ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಸೋಂಕು ಹರಡುವಿಕೆ ಬಗ್ಗೆ ಜಾಗರೂಕರಾಗಿರಬೇಕು’ ಎಂದು ಹೇಳಿದ್ದಾರೆ.</p>.<p>ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ಲಸಿಕೆಯನ್ನು ತ್ವರಿತವಾಗಿ ನೀಡುವಂತೆ ರಾಜ್ಯಗಳನ್ನು ಒತ್ತಾಯಿಸಿದ ಮೋದಿ, ಅರ್ಹ ಮಕ್ಕಳಿಗೆ ಸಾಧ್ಯವಾದಷ್ಟು ಬೇಗ ಲಸಿಕೆ ವಿತರಿಸುವಂತೆ ಮನವಿ ಮಾಡಿದ್ದಾರೆ.</p>.<p>ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಕೆಲವು ನಿರ್ಬಂಧನೆಗಳನ್ನು ಜಾರಿಗೆ ತರಲಾಗಿದೆ.</p>.<p><strong>ಓದಿ...<a href="https://www.prajavani.net/india-news/covid-updates-india-records-2927-fresh-covid-casesand-32-deaths-in-a-day-931916.html" target="_blank">Covid Updates India: 2,927 ಹೊಸ ಪ್ರಕರಣಗಳು ದೃಢ, 32 ಮಂದಿ ಸಾವು</a></strong></p>.<p><strong>ಇಂಧನದ ಮೇಲಿನ ಅಬಕಾರಿ ಸುಂಕಕಡಿತ:</strong>ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವಂತೆ ನಾನು ರಾಜ್ಯಗಳನ್ನು ಒತ್ತಾಯಿಸಿದ್ದೇನೆ. ಆದರೆ, ಕೆಲವು ರಾಜ್ಯಗಳು ನಿಯಮ ಪಾಲಿಸಿಲ್ಲ ಎಂದು ಮೋದಿ ಹೇಳಿದ್ದಾರೆ.<br /><br />ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಜನರ ಮೇಲಿನ ಹೊರೆಯನ್ನು ನಿವಾರಿಸುವಉದ್ದೇಶದಿಂದ ರಾಜ್ಯಗಳು ಕೂಡಲೇ ಅಬಕಾರಿ ಸುಂಕವನ್ನು ಕಡಿತ ಮಾಡುವಂತೆ ಮೋದಿ ಅವರು ಪುನರುಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>