<p><strong>ಚಂಡೀಗಢ:</strong> ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9ರಂದು ಪಂಜಾಬ್ಗೆ ಭೇಟಿ ನೀಡಲಿದ್ದು, ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಸುನಿಲ್ ಜಾಖಡ್ ಭಾನುವಾರ ತಿಳಿಸಿದ್ದಾರೆ.</p>.<p>ಪಂಜಾಬ್ನಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.</p>.<p>ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಪಂಜಾಬ್ಗೆ ಭೇಟಿ ನೀಡಿದ್ದು, ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. </p>.<p>ಸೆಪ್ಟೆಂಬರ್ 4ರಂದು ಇಲ್ಲಿನ (ಪಂಜಾಬ್) ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಚೌಹಾಣ್, ಬೆಳೆ ಹಾನಿಯ ಪ್ರಮಾಣವನ್ನು ಪರಿಶೀಲಿಸಿದ್ದಾರೆ. ಈ ಬಿಕ್ಕಟ್ಟಿನ ಸಮಯಲ್ಲಿ ರೈತರಿಗೆ ರಕ್ಷಣೆ ನೀಡಲು ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.</p>.<p>ಅಮೃತಸರ, ಗುರುದಾಸಪುರ ಮತ್ತು ಕಪುರ್ತಲಾ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಚೌಹಾಣ್ ಭೇಟಿ ನೀಡಿದ್ದರು.</p>.ಪ್ರವಾಹ ಪೀಡಿತ ಪಂಜಾಬ್ ಜನತೆ ಜತೆ ನಾವಿದ್ದೇವೆ ಎಂದ ಬಾಲಿವುಡ್ ತಾರೆಯರು.<p>ಭೀಕರ ಪ್ರವಾಹದಿಂದ ಪಂಜಾಬ್ ತತ್ತರಿಸಿದೆ. ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾದ ಕಾರಣ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪಂಜಾಬ್ನ ಹೆಚ್ಚಿನ ಪ್ರದೇಶಗಳು ಜಲಾವೃತವಾಗಿವೆ.</p>.<p>ಇದಲ್ಲದೆ, ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ.</p>.<p>ಪ್ರವಾಹದಿಂದಾಗಿ ರಾಜ್ಯದಲ್ಲಿ ಇದುವರೆಗೆ 46 ಜನ ಮೃತಪಟ್ಟಿದ್ದಾರೆ. 1.75 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಪ್ರವಾಹದಿಂದ ಪಂಜಾಬ್ ತತ್ತರ: ರಕ್ಷಣಾ ಕಾರ್ಯಕ್ಕಿಳಿದ ಭಾರತ ತಂಡದ ಹಾಕಿ ಆಟಗಾರರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9ರಂದು ಪಂಜಾಬ್ಗೆ ಭೇಟಿ ನೀಡಲಿದ್ದು, ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಸುನಿಲ್ ಜಾಖಡ್ ಭಾನುವಾರ ತಿಳಿಸಿದ್ದಾರೆ.</p>.<p>ಪಂಜಾಬ್ನಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.</p>.<p>ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಪಂಜಾಬ್ಗೆ ಭೇಟಿ ನೀಡಿದ್ದು, ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. </p>.<p>ಸೆಪ್ಟೆಂಬರ್ 4ರಂದು ಇಲ್ಲಿನ (ಪಂಜಾಬ್) ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಚೌಹಾಣ್, ಬೆಳೆ ಹಾನಿಯ ಪ್ರಮಾಣವನ್ನು ಪರಿಶೀಲಿಸಿದ್ದಾರೆ. ಈ ಬಿಕ್ಕಟ್ಟಿನ ಸಮಯಲ್ಲಿ ರೈತರಿಗೆ ರಕ್ಷಣೆ ನೀಡಲು ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.</p>.<p>ಅಮೃತಸರ, ಗುರುದಾಸಪುರ ಮತ್ತು ಕಪುರ್ತಲಾ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಚೌಹಾಣ್ ಭೇಟಿ ನೀಡಿದ್ದರು.</p>.ಪ್ರವಾಹ ಪೀಡಿತ ಪಂಜಾಬ್ ಜನತೆ ಜತೆ ನಾವಿದ್ದೇವೆ ಎಂದ ಬಾಲಿವುಡ್ ತಾರೆಯರು.<p>ಭೀಕರ ಪ್ರವಾಹದಿಂದ ಪಂಜಾಬ್ ತತ್ತರಿಸಿದೆ. ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾದ ಕಾರಣ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪಂಜಾಬ್ನ ಹೆಚ್ಚಿನ ಪ್ರದೇಶಗಳು ಜಲಾವೃತವಾಗಿವೆ.</p>.<p>ಇದಲ್ಲದೆ, ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ.</p>.<p>ಪ್ರವಾಹದಿಂದಾಗಿ ರಾಜ್ಯದಲ್ಲಿ ಇದುವರೆಗೆ 46 ಜನ ಮೃತಪಟ್ಟಿದ್ದಾರೆ. 1.75 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಪ್ರವಾಹದಿಂದ ಪಂಜಾಬ್ ತತ್ತರ: ರಕ್ಷಣಾ ಕಾರ್ಯಕ್ಕಿಳಿದ ಭಾರತ ತಂಡದ ಹಾಕಿ ಆಟಗಾರರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>