<p>ನವದೆಹಲಿ: ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಮಾದರಿಯು ವಿಶ್ವ ಕಲ್ಯಾಣಕ್ಕೆ ಮಾರ್ಗದರ್ಶಿತತ್ವವಾಗಬಲ್ಲದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯು ಬಿಜೆಪಿ ಮತ್ತು ವಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.</p>.<p>ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಮೋದಿ ಅವರು ಈ ‘ಮಾದರಿ’ ಕುರಿತು ಪ್ರಸ್ತಾಪಿಸಿದ್ದರು.</p>.<p>‘ಈ ಹಿಂದಿನ 67 ವರ್ಷಗಳಿಗೆ ಹೋಲಿಸಿದಾಗ, ದೇಶದಲ್ಲಿ ಕಳೆದ 9 ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಣಬಹುದು’ ಎಂದು ಬಿಜೆಪಿ ಮುಖಂಡ ಅನಿಲ್ ಆಂಟನಿ ಹೇಳಿದ್ದಾರೆ.</p>.<p>‘ಇಂಡಿಯಾ’ ಗುಂಪಿನ ನಾಯಕರು ಪ್ರಧಾನಿಯನ್ನು ಟೀಕಿಸಿದ್ದಾರೆ. ‘ಜಿ–20 ಶೃಂಗಕ್ಕಾಗಿ ರಸ್ತೆಗಳನ್ನು ಅಂದಗೊಳಿಸಲಾಗುತ್ತಿದೆ. ಆದರೆ, ದೇಶದ ಯುವಕರು ಉದ್ಯೋಗ ಕೇಳುತ್ತಿದ್ದಾರೆ’ ಎಂದು ಕಾಂಗ್ರೆಸ್ ಸಂಸದೆ ರಂಜೀತ್ ರಂಜನ್ ಟೀಕಿಸಿದ್ದಾರೆ.</p>.<p>‘ಕಳೆದ 42 ವರ್ಷಗಳಲ್ಲೇ ನಿರುದ್ಯೋಗ ಪ್ರಮಾಣ ಗರಿಷ್ಠ ಮಟ್ಟ ತಲುಪಿದೆ. ಇಂಧನ, ಔಷಧಗಳ ಬೆಲೆಗಳು ಕೈಗೆಟುಕಲಾರದಷ್ಟು ಹೆಚ್ಚಿವೆ’ ಎಂದು ಎಎಪಿ ಸಂಸದ ಸಂಜಯಸಿಂಗ್ ಟೀಕಿಸಿದ್ದಾರೆ. ಆರ್ಜೆಡಿ ಸಂಸದ ಮನೋಜ್ ಝಾ ಅವರೂ ಮೋದಿ ಹೇಳಿಕೆಗಳನ್ನು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಮಾದರಿಯು ವಿಶ್ವ ಕಲ್ಯಾಣಕ್ಕೆ ಮಾರ್ಗದರ್ಶಿತತ್ವವಾಗಬಲ್ಲದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯು ಬಿಜೆಪಿ ಮತ್ತು ವಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.</p>.<p>ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಮೋದಿ ಅವರು ಈ ‘ಮಾದರಿ’ ಕುರಿತು ಪ್ರಸ್ತಾಪಿಸಿದ್ದರು.</p>.<p>‘ಈ ಹಿಂದಿನ 67 ವರ್ಷಗಳಿಗೆ ಹೋಲಿಸಿದಾಗ, ದೇಶದಲ್ಲಿ ಕಳೆದ 9 ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಣಬಹುದು’ ಎಂದು ಬಿಜೆಪಿ ಮುಖಂಡ ಅನಿಲ್ ಆಂಟನಿ ಹೇಳಿದ್ದಾರೆ.</p>.<p>‘ಇಂಡಿಯಾ’ ಗುಂಪಿನ ನಾಯಕರು ಪ್ರಧಾನಿಯನ್ನು ಟೀಕಿಸಿದ್ದಾರೆ. ‘ಜಿ–20 ಶೃಂಗಕ್ಕಾಗಿ ರಸ್ತೆಗಳನ್ನು ಅಂದಗೊಳಿಸಲಾಗುತ್ತಿದೆ. ಆದರೆ, ದೇಶದ ಯುವಕರು ಉದ್ಯೋಗ ಕೇಳುತ್ತಿದ್ದಾರೆ’ ಎಂದು ಕಾಂಗ್ರೆಸ್ ಸಂಸದೆ ರಂಜೀತ್ ರಂಜನ್ ಟೀಕಿಸಿದ್ದಾರೆ.</p>.<p>‘ಕಳೆದ 42 ವರ್ಷಗಳಲ್ಲೇ ನಿರುದ್ಯೋಗ ಪ್ರಮಾಣ ಗರಿಷ್ಠ ಮಟ್ಟ ತಲುಪಿದೆ. ಇಂಧನ, ಔಷಧಗಳ ಬೆಲೆಗಳು ಕೈಗೆಟುಕಲಾರದಷ್ಟು ಹೆಚ್ಚಿವೆ’ ಎಂದು ಎಎಪಿ ಸಂಸದ ಸಂಜಯಸಿಂಗ್ ಟೀಕಿಸಿದ್ದಾರೆ. ಆರ್ಜೆಡಿ ಸಂಸದ ಮನೋಜ್ ಝಾ ಅವರೂ ಮೋದಿ ಹೇಳಿಕೆಗಳನ್ನು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>