<p><strong>ಕೋಯಿಕ್ಕೋಡ್ (ಕೇರಳ)</strong>: ‘ಪ್ರಧಾನಿ ಮೋದಿ ಅವರು ಉದ್ಯಮಿ ಗೌತಮ್ ಅದಾನಿ ಅವರನ್ನು ಮಾತ್ರ ಭಿನ್ನವಾಗಿ ನಡೆಸಿಕೊಳ್ಳುತ್ತಾರೆ. ಭೂಕುಸಿತದ ಸಂತ್ರಸ್ತ ವಯನಾಡು ಜನರಿಗೆ ಯಾವುದೇ ನೆರವು ಕೊಡದೆ, ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ಮಾಡಿದ್ದಾರೆ.</p>.<p>ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ನಂತರ ತಮ್ಮ ಸಹೋದರಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಮೊದಲ ಬಾರಿಗೆ ಭೇಟಿ ನೀಡಿದ ರಾಹುಲ್, ಇಲ್ಲಿನ ಮುಕ್ಕಂನಲ್ಲಿ ನಡೆದ ಜಂಟಿ ಸಾರ್ವಜನಿಕ ಸಭೆಯಲ್ಲಿ ಮೋದಿ ವಿರುದ್ಧ ಕಿಡಿಕಾರಿದರು. </p>.<p>‘ಅಮೆರಿಕದಲ್ಲಿ ಏನೇ ಆದರೂ ಪರವಾಗಿಲ್ಲ. ಭಾರತದಲ್ಲಿ ನಾವು ಅದಾನಿ ಮೇಲೆ ದೋಷಾರೋಪಣೆ ಮಾಡುವುದಿಲ್ಲ ಎಂಬ ನಿಲುವನ್ನು ಮೋದಿ ತಳೆದಿದ್ದಾರೆ’ ಎಂದು ರಾಹುಲ್ ಆರೋಪಿಸಿದರು.</p>.<p>‘ದುರದೃಷ್ಟವಶಾತ್, ನಾವು ಅಧಿಕಾರದಲ್ಲಿಲ್ಲ. ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವಯನಾಡು ಭೂಕುಸಿತದ ಸಂತ್ರಸ್ತರ ಕುಟುಂಬಗಳಿಗೆ ನೆರವು ಒದಗಿಸಲು ಕೇರಳ ಸರ್ಕಾರದ ಮೇಲೆ ಕಾಂಗ್ರೆಸ್ ಹಾಗೂ ಯುಡಿಎಫ್ ಒತ್ತಡ ಹೇರುವಂತೆ ಸಹೋದರಿ ಪ್ರಿಯಾಂಕಾ, ಕೆ.ಸಿ.ವೇಣುಗೋಪಾಲ್ ಅವರಿಗೆ ಹೇಳಿದ್ದೇನೆ' ಎಂದು ತಿಳಿಸಿದರು.</p>.<p><strong>ಬಿಜೆಪಿ ಪ್ರಜಾಪ್ರಭುತ್ವದ ನೀತಿ–ನಿಯಮ ಪಾಲಿಸಲ್ಲ: ಪ್ರಿಯಾಂಕಾ ಕಿಡಿ</strong></p><p>‘ಬಿಜೆಪಿಯು ರಾಜಕೀಯ ಹೋರಾಟದಲ್ಲಿ ಪ್ರಜಾಪ್ರಭುತ್ವದ ಯಾವುದೇ ನೀತಿ ನಿಯಮಗಳನ್ನು ಪಾಲಿಸುತ್ತಿಲ್ಲ’ ಎಂದು ವಯನಾಡ್ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಕಿರಿಕಾರಿದ್ದಾರೆ. ‘ಒತ್ತಡಕ್ಕೆ ಒಳಗಾಗದ ನ್ಯಾಯಯುತ ಸಮತೋಲಿತ ಮತ್ತು ಬಲವಾದ ನ್ಯಾಯಾಂಗದ ಅವಶ್ಯಕತೆಯೂ ದೇಶಕ್ಕೆ ಇದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. </p><p>ವಯನಾಡ್ ಕ್ಷೇತ್ರದಿಂದ ಚೊಚ್ಚಲ ಚುನಾವಣಾ ಗೆಲುವಿನ ನಂತರ ಕೇರಳಕ್ಕೆ ಶನಿವಾರ ಎರಡು ದಿನಗಳ ಭೇಟಿ ನೀಡಿರುವ ಅವರು ಮುಕ್ಕಂನಲ್ಲಿ ಸಹೋದರ ರಾಹುಲ್ ಗಾಂಧಿ ಜತೆ ಸಾರ್ವಜನಿಕ ಜಂಟಿ ಸಭೆಯಲ್ಲಿ ಮಾತನಾಡಿದರು. </p><p> ‘ಅವರು (ಬಿಜೆಪಿ) ನಕಾರಾತ್ಮಕ ಮತ್ತು ವಿನಾಶಕಾರಿ ಕಾರ್ಯಸೂಚಿ ಹೊಂದಿದ್ದಾರೆ. ದೇಶದಲ್ಲಿ ಸಂಸ್ಥೆಗಳು ನಾಶವಾಗುತ್ತಿವೆ. ಇದು ಚುನಾವಣಾ ಪ್ರಕ್ರಿಯೆಯಲ್ಲಿ ಜನರ ಮೂಲಭೂತ ನಂಬಿಕೆ ಮತ್ತು ನಮ್ಮ ದೇಶವನ್ನು ಒಟ್ಟಾಗಿರಿಸಿರುವ ಸಂಸ್ಥೆಗಳು ಕ್ಷೀಣಿಸಲು ಕಾರಣವಾಗುತ್ತದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದರು. </p><p>‘ವಯನಾಡ್ ಜನರ ಉತ್ತಮ ಭವಿಷ್ಯಕ್ಕಾಗಿ ನನ್ನಿಂದ ಸಾಧ್ಯವಿರುವ ಎಲ್ಲವನ್ನು ಮಾಡಲು ಸಿದ್ಧಳಿದ್ದೇನೆ’ ಎಂದೂ ಪ್ರಿಯಾಂಕಾ ತಿಳಿಸಿದರು. ಮಲಪ್ಪುರ ಜಿಲ್ಲೆಯ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕರುಲೈನಲ್ಲಿ ಪ್ರಿಯಾಂಕಾ ಅವರಿಗೆ ಜನರು ಭವ್ಯ ಸ್ವಾಗತ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಯಿಕ್ಕೋಡ್ (ಕೇರಳ)</strong>: ‘ಪ್ರಧಾನಿ ಮೋದಿ ಅವರು ಉದ್ಯಮಿ ಗೌತಮ್ ಅದಾನಿ ಅವರನ್ನು ಮಾತ್ರ ಭಿನ್ನವಾಗಿ ನಡೆಸಿಕೊಳ್ಳುತ್ತಾರೆ. ಭೂಕುಸಿತದ ಸಂತ್ರಸ್ತ ವಯನಾಡು ಜನರಿಗೆ ಯಾವುದೇ ನೆರವು ಕೊಡದೆ, ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ಮಾಡಿದ್ದಾರೆ.</p>.<p>ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ನಂತರ ತಮ್ಮ ಸಹೋದರಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಮೊದಲ ಬಾರಿಗೆ ಭೇಟಿ ನೀಡಿದ ರಾಹುಲ್, ಇಲ್ಲಿನ ಮುಕ್ಕಂನಲ್ಲಿ ನಡೆದ ಜಂಟಿ ಸಾರ್ವಜನಿಕ ಸಭೆಯಲ್ಲಿ ಮೋದಿ ವಿರುದ್ಧ ಕಿಡಿಕಾರಿದರು. </p>.<p>‘ಅಮೆರಿಕದಲ್ಲಿ ಏನೇ ಆದರೂ ಪರವಾಗಿಲ್ಲ. ಭಾರತದಲ್ಲಿ ನಾವು ಅದಾನಿ ಮೇಲೆ ದೋಷಾರೋಪಣೆ ಮಾಡುವುದಿಲ್ಲ ಎಂಬ ನಿಲುವನ್ನು ಮೋದಿ ತಳೆದಿದ್ದಾರೆ’ ಎಂದು ರಾಹುಲ್ ಆರೋಪಿಸಿದರು.</p>.<p>‘ದುರದೃಷ್ಟವಶಾತ್, ನಾವು ಅಧಿಕಾರದಲ್ಲಿಲ್ಲ. ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವಯನಾಡು ಭೂಕುಸಿತದ ಸಂತ್ರಸ್ತರ ಕುಟುಂಬಗಳಿಗೆ ನೆರವು ಒದಗಿಸಲು ಕೇರಳ ಸರ್ಕಾರದ ಮೇಲೆ ಕಾಂಗ್ರೆಸ್ ಹಾಗೂ ಯುಡಿಎಫ್ ಒತ್ತಡ ಹೇರುವಂತೆ ಸಹೋದರಿ ಪ್ರಿಯಾಂಕಾ, ಕೆ.ಸಿ.ವೇಣುಗೋಪಾಲ್ ಅವರಿಗೆ ಹೇಳಿದ್ದೇನೆ' ಎಂದು ತಿಳಿಸಿದರು.</p>.<p><strong>ಬಿಜೆಪಿ ಪ್ರಜಾಪ್ರಭುತ್ವದ ನೀತಿ–ನಿಯಮ ಪಾಲಿಸಲ್ಲ: ಪ್ರಿಯಾಂಕಾ ಕಿಡಿ</strong></p><p>‘ಬಿಜೆಪಿಯು ರಾಜಕೀಯ ಹೋರಾಟದಲ್ಲಿ ಪ್ರಜಾಪ್ರಭುತ್ವದ ಯಾವುದೇ ನೀತಿ ನಿಯಮಗಳನ್ನು ಪಾಲಿಸುತ್ತಿಲ್ಲ’ ಎಂದು ವಯನಾಡ್ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಕಿರಿಕಾರಿದ್ದಾರೆ. ‘ಒತ್ತಡಕ್ಕೆ ಒಳಗಾಗದ ನ್ಯಾಯಯುತ ಸಮತೋಲಿತ ಮತ್ತು ಬಲವಾದ ನ್ಯಾಯಾಂಗದ ಅವಶ್ಯಕತೆಯೂ ದೇಶಕ್ಕೆ ಇದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. </p><p>ವಯನಾಡ್ ಕ್ಷೇತ್ರದಿಂದ ಚೊಚ್ಚಲ ಚುನಾವಣಾ ಗೆಲುವಿನ ನಂತರ ಕೇರಳಕ್ಕೆ ಶನಿವಾರ ಎರಡು ದಿನಗಳ ಭೇಟಿ ನೀಡಿರುವ ಅವರು ಮುಕ್ಕಂನಲ್ಲಿ ಸಹೋದರ ರಾಹುಲ್ ಗಾಂಧಿ ಜತೆ ಸಾರ್ವಜನಿಕ ಜಂಟಿ ಸಭೆಯಲ್ಲಿ ಮಾತನಾಡಿದರು. </p><p> ‘ಅವರು (ಬಿಜೆಪಿ) ನಕಾರಾತ್ಮಕ ಮತ್ತು ವಿನಾಶಕಾರಿ ಕಾರ್ಯಸೂಚಿ ಹೊಂದಿದ್ದಾರೆ. ದೇಶದಲ್ಲಿ ಸಂಸ್ಥೆಗಳು ನಾಶವಾಗುತ್ತಿವೆ. ಇದು ಚುನಾವಣಾ ಪ್ರಕ್ರಿಯೆಯಲ್ಲಿ ಜನರ ಮೂಲಭೂತ ನಂಬಿಕೆ ಮತ್ತು ನಮ್ಮ ದೇಶವನ್ನು ಒಟ್ಟಾಗಿರಿಸಿರುವ ಸಂಸ್ಥೆಗಳು ಕ್ಷೀಣಿಸಲು ಕಾರಣವಾಗುತ್ತದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದರು. </p><p>‘ವಯನಾಡ್ ಜನರ ಉತ್ತಮ ಭವಿಷ್ಯಕ್ಕಾಗಿ ನನ್ನಿಂದ ಸಾಧ್ಯವಿರುವ ಎಲ್ಲವನ್ನು ಮಾಡಲು ಸಿದ್ಧಳಿದ್ದೇನೆ’ ಎಂದೂ ಪ್ರಿಯಾಂಕಾ ತಿಳಿಸಿದರು. ಮಲಪ್ಪುರ ಜಿಲ್ಲೆಯ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕರುಲೈನಲ್ಲಿ ಪ್ರಿಯಾಂಕಾ ಅವರಿಗೆ ಜನರು ಭವ್ಯ ಸ್ವಾಗತ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>