<p><strong>ಛಪ್ರಾ:</strong> ಬಿಹಾರದ ‘ಡಬಲ್ ಎಂಜಿನ್ ಸರ್ಕಾರ’ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.</p>.<p>ಛಪ್ರಾದಲ್ಲಿ ಚುನಾವಣಾ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/kannada-rajyotsava-pm-narendra-modi-wishes-through-kannada-tweet-hails-contribution-of-karnataka-775462.html" itemprop="url">ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಾಶಯ ಕೋರಿದ ಪ್ರಧಾನಿ ಮೋದಿ</a></p>.<p>‘ಬಿಹಾರದ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದ್ದರೆ ಇಬ್ಬರು ‘ಯುವರಾಜ’ರು, ಈ ಪೈಕಿ ಒಬ್ಬ ‘ಜಂಗಲ್ ರಾಜ್’ನಿಂದ ಬಂದವರು, ತಮ್ಮದೇ ಸಿಂಹಾಸನ ರಕ್ಷಿಸಿಕೊಳ್ಳಲು ಹೋರಾಡುತ್ತಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.</p>.<p>‘3–4 ವರ್ಷಗಳ ಹಿಂದೆ ಉತ್ತರ ಪ್ರದೇಶ ಚುನಾವಣೆ ವೇಳೆ ಈ ಇಬ್ಬರು ಯುವರಾಜರು ಬಸ್ನ ಟಾಪ್ ಮೇಲೆ ಹತ್ತಿ, ಕಪ್ಪು ಜಾಕೆಟ್ಗಳನ್ನು ಧರಿಸಿಕೊಂಡು ಹಳ್ಳಿಗಳಿಗೆ ಭೇಟಿ ನೀಡಿದ್ದನ್ನು ನೀವು ನೋಡಿರಬಹುದು’ ಎಂದೂ ಮೋದಿ ವ್ಯಂಗ್ಯವಾಡಿದ್ದಾರೆ.</p>.<p>ಬಿಹಾರದಲ್ಲಿ ಎನ್ಡಿಎಯು ಮತ್ತೊಮ್ಮೆ ಸರ್ಕಾರ ರಚಿಸುವ ವಿಶ್ವಾಸವಿದೆ. ಮೊದಲ ಹಂತದ ಮತದಾನದ ಬಳಿಕ ಇದು ದೃಢಪಟ್ಟಿದೆ ಎಂದೂ ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/pm-on-pulwama-terror-strike-775370.html" itemprop="url">ಪುಲ್ವಾಮಾ ಟೀಕಾಕಾರರ ಬಣ್ಣ ಬಯಲು: ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ</a></p>.<p>‘ಬಿಹಾರದ ಜನತೆ ರಾಜಕೀಯ ಪಂಡಿತರ ಮಾತುಗಳನ್ನು ಸುಳ್ಳಾಗಿಸಿದ್ದಾರೆ. ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಮೊದಲ ಹಂತದಲ್ಲಿ ಅತ್ಯಧಿಕ ಮತದಾನವಾಗಿದೆ’ ಎಂದು ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛಪ್ರಾ:</strong> ಬಿಹಾರದ ‘ಡಬಲ್ ಎಂಜಿನ್ ಸರ್ಕಾರ’ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.</p>.<p>ಛಪ್ರಾದಲ್ಲಿ ಚುನಾವಣಾ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/kannada-rajyotsava-pm-narendra-modi-wishes-through-kannada-tweet-hails-contribution-of-karnataka-775462.html" itemprop="url">ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಾಶಯ ಕೋರಿದ ಪ್ರಧಾನಿ ಮೋದಿ</a></p>.<p>‘ಬಿಹಾರದ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದ್ದರೆ ಇಬ್ಬರು ‘ಯುವರಾಜ’ರು, ಈ ಪೈಕಿ ಒಬ್ಬ ‘ಜಂಗಲ್ ರಾಜ್’ನಿಂದ ಬಂದವರು, ತಮ್ಮದೇ ಸಿಂಹಾಸನ ರಕ್ಷಿಸಿಕೊಳ್ಳಲು ಹೋರಾಡುತ್ತಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.</p>.<p>‘3–4 ವರ್ಷಗಳ ಹಿಂದೆ ಉತ್ತರ ಪ್ರದೇಶ ಚುನಾವಣೆ ವೇಳೆ ಈ ಇಬ್ಬರು ಯುವರಾಜರು ಬಸ್ನ ಟಾಪ್ ಮೇಲೆ ಹತ್ತಿ, ಕಪ್ಪು ಜಾಕೆಟ್ಗಳನ್ನು ಧರಿಸಿಕೊಂಡು ಹಳ್ಳಿಗಳಿಗೆ ಭೇಟಿ ನೀಡಿದ್ದನ್ನು ನೀವು ನೋಡಿರಬಹುದು’ ಎಂದೂ ಮೋದಿ ವ್ಯಂಗ್ಯವಾಡಿದ್ದಾರೆ.</p>.<p>ಬಿಹಾರದಲ್ಲಿ ಎನ್ಡಿಎಯು ಮತ್ತೊಮ್ಮೆ ಸರ್ಕಾರ ರಚಿಸುವ ವಿಶ್ವಾಸವಿದೆ. ಮೊದಲ ಹಂತದ ಮತದಾನದ ಬಳಿಕ ಇದು ದೃಢಪಟ್ಟಿದೆ ಎಂದೂ ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/pm-on-pulwama-terror-strike-775370.html" itemprop="url">ಪುಲ್ವಾಮಾ ಟೀಕಾಕಾರರ ಬಣ್ಣ ಬಯಲು: ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ</a></p>.<p>‘ಬಿಹಾರದ ಜನತೆ ರಾಜಕೀಯ ಪಂಡಿತರ ಮಾತುಗಳನ್ನು ಸುಳ್ಳಾಗಿಸಿದ್ದಾರೆ. ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಮೊದಲ ಹಂತದಲ್ಲಿ ಅತ್ಯಧಿಕ ಮತದಾನವಾಗಿದೆ’ ಎಂದು ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>