ಇತ್ತೀಚೆಗೆ ನಡೆದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ಸ್ವಚ್ಛತೆಗಾಗಿ ದೊಡ್ಡ ಕಾರ್ಯಕ್ರಮವೊಂದು ಭಾನುವಾರ (ಅ.1ರಂದು) ನಡೆಯಲಿದೆ. ನೀವು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ನೀವು ನಿಮ್ಮ ಬೀದಿಗಳಲ್ಲಿ, ನೆರೆಹೊರೆಯಲ್ಲಿ, ಉದ್ಯಾನದಲ್ಲಿ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಇದರಲ್ಲಿ ಭಾಗಿಯಾಗಬಹುದು’ ಎಂದು ಹೇಳಿದ್ದರು.
ಗಾಂಧಿ ಜಯಂತಿ ಸಂದರ್ಭದಲ್ಲಿ ಜನ ಖಾದಿ ಉತ್ಪನ್ನಗಳನ್ನು ಖರೀದಿಸಬೇಕು ಎಂದೂ ಮೋದಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು.