<p><strong>ನವದೆಹಲಿ</strong>: ‘ವಿಕಸಿತ ಭಾರತ–2047’ಕ್ಕೆ ಸಂಬಂಧಿಸಿದ ಕಾರ್ಯಸೂಚಿ ಸಿದ್ಧಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟದ ಸದಸ್ಯರ ಜೊತೆ ಭಾನುವಾರ ಇಡೀ ದಿನ ಸಭೆ ನಡೆಸಿದರು. ಮುಂದಿನ ಐದು ವರ್ಷಗಳಿಗೆ ಸಂಬಂಧಿಸಿದ ವಿಸ್ತೃತ ಕ್ರಿಯಾಯೋಜನೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಮೇ ತಿಂಗಳಲ್ಲಿ ಹೊಸ ಸರ್ಕಾರ ರಚನೆ ಆದ ನಂತರದಲ್ಲಿ ತಕ್ಷಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ‘100 ದಿನಗಳ ಕಾರ್ಯಸೂಚಿ’ ಕುರಿತು ಕೂಡ ಚರ್ಚೆ ನಡೆಯಿತು ಎಂದು ಸರ್ಕಾರದ ಮೂಲಗಳು ಹೇಳಿವೆ.</p>.<p>‘ವಿಕಸಿತ ಭಾರತ’ ಪರಿಕಲ್ಪನೆಯನ್ನು ಕಾರ್ಯರೂಪಕ್ಕೆ ತರಲು ಅಗತ್ಯವಿರುವ ಯೋಜನೆಯನ್ನು ಸಿದ್ಧಪಡಿಸಲು ಎರಡು ವರ್ಷಗಳಿಗೂ ಹೆಚ್ಚಿನ ಅವಧಿ ತೆಗೆದುಕೊಳ್ಳಲಾಗಿದೆ. ಎಲ್ಲ ಸಚಿವಾಲಯಗಳು, ರಾಜ್ಯ ಸರ್ಕಾರಗಳು, ಅಕಾಡೆಮಿಕ್ ವಲಯದ ವಿದ್ವಾಂಸರು, ಉದ್ಯಮಗಳ ಪ್ರಮುಖರು, ನಾಗರಿಕ ಸಮಾಜದ ಪ್ರತಿನಿಧಿಗಳು, ವಿಜ್ಞಾನಿಗಳು, ಯುವಕರಿಂದ ಇದಕ್ಕೆ ಸಲಹೆಗಳನ್ನು ಪಡೆಯಲಾಗಿದೆ.</p>.<p>‘2,700ಕ್ಕೂ ಹೆಚ್ಚಿನ ಸಭೆಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳನ್ನು ಹಲವು ಹಂತಗಳಲ್ಲಿ ನಡೆಸಲಾಗಿದೆ. 20 ಲಕ್ಷಕ್ಕೂ ಹೆಚ್ಚಿನ ಯುವಕರಿಂದ ಸಲಹೆಗಳನ್ನು ಪಡೆಯಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.</p>.<p>ಲೋಕಸಭಾ ಚುನಾವಣೆಯ ಘೋಷಣೆಗೂ ಮೊದಲು ನಡೆದ ಇಂತಹ ಕಡೆಯ ಸಭೆ ಇದಾಗಬಹುದು ಎನ್ನಲಾಗಿದೆ. ಈ ಸಭೆಯಲ್ಲಿ ಹಲವು ಸಚಿವಾಲಯಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವಿಕಸಿತ ಭಾರತ–2047’ಕ್ಕೆ ಸಂಬಂಧಿಸಿದ ಕಾರ್ಯಸೂಚಿ ಸಿದ್ಧಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟದ ಸದಸ್ಯರ ಜೊತೆ ಭಾನುವಾರ ಇಡೀ ದಿನ ಸಭೆ ನಡೆಸಿದರು. ಮುಂದಿನ ಐದು ವರ್ಷಗಳಿಗೆ ಸಂಬಂಧಿಸಿದ ವಿಸ್ತೃತ ಕ್ರಿಯಾಯೋಜನೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಮೇ ತಿಂಗಳಲ್ಲಿ ಹೊಸ ಸರ್ಕಾರ ರಚನೆ ಆದ ನಂತರದಲ್ಲಿ ತಕ್ಷಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ‘100 ದಿನಗಳ ಕಾರ್ಯಸೂಚಿ’ ಕುರಿತು ಕೂಡ ಚರ್ಚೆ ನಡೆಯಿತು ಎಂದು ಸರ್ಕಾರದ ಮೂಲಗಳು ಹೇಳಿವೆ.</p>.<p>‘ವಿಕಸಿತ ಭಾರತ’ ಪರಿಕಲ್ಪನೆಯನ್ನು ಕಾರ್ಯರೂಪಕ್ಕೆ ತರಲು ಅಗತ್ಯವಿರುವ ಯೋಜನೆಯನ್ನು ಸಿದ್ಧಪಡಿಸಲು ಎರಡು ವರ್ಷಗಳಿಗೂ ಹೆಚ್ಚಿನ ಅವಧಿ ತೆಗೆದುಕೊಳ್ಳಲಾಗಿದೆ. ಎಲ್ಲ ಸಚಿವಾಲಯಗಳು, ರಾಜ್ಯ ಸರ್ಕಾರಗಳು, ಅಕಾಡೆಮಿಕ್ ವಲಯದ ವಿದ್ವಾಂಸರು, ಉದ್ಯಮಗಳ ಪ್ರಮುಖರು, ನಾಗರಿಕ ಸಮಾಜದ ಪ್ರತಿನಿಧಿಗಳು, ವಿಜ್ಞಾನಿಗಳು, ಯುವಕರಿಂದ ಇದಕ್ಕೆ ಸಲಹೆಗಳನ್ನು ಪಡೆಯಲಾಗಿದೆ.</p>.<p>‘2,700ಕ್ಕೂ ಹೆಚ್ಚಿನ ಸಭೆಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳನ್ನು ಹಲವು ಹಂತಗಳಲ್ಲಿ ನಡೆಸಲಾಗಿದೆ. 20 ಲಕ್ಷಕ್ಕೂ ಹೆಚ್ಚಿನ ಯುವಕರಿಂದ ಸಲಹೆಗಳನ್ನು ಪಡೆಯಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.</p>.<p>ಲೋಕಸಭಾ ಚುನಾವಣೆಯ ಘೋಷಣೆಗೂ ಮೊದಲು ನಡೆದ ಇಂತಹ ಕಡೆಯ ಸಭೆ ಇದಾಗಬಹುದು ಎನ್ನಲಾಗಿದೆ. ಈ ಸಭೆಯಲ್ಲಿ ಹಲವು ಸಚಿವಾಲಯಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>