‘ಭವಿಷ್ಯದ ಪೀಳಿಗೆಗೆ ಉಪಯುಕ್ತವಾಗಿರುವ ಆಸ್ತಿಗಳು ಪ್ರತಿಭಟನಕಾರರ ಆಕ್ರೋಶಕ್ಕೆ ತುತ್ತಾಗಿವೆ. ಉತ್ತಮ ರಸ್ತೆಗಳು ಜನರ ಹಕ್ಕಾಗಿದ್ದರೆ ಅವುಗಳನ್ನು ರಕ್ಷಿಸುವುದೂ ಅವರ ಕರ್ತವ್ಯವಾಗಿದೆ. ಶಿಕ್ಷಣವು ಜನರ ಹಕ್ಕಾಗಿದ್ದರೆ, ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಕರ ಸುರಕ್ಷತೆಯನ್ನು ಖಾತರಿಪಡಿಸುವುದು ಅವರ ಕರ್ತವ್ಯ’ ಎಂದು ಹೇಳುವ ಮೂಲಕ ಪ್ರಧಾನಿಯು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ನಡೆದ ಹಿಂಸಾಚಾರವನ್ನು ಉಲ್ಲೇಖಿಸಿದರು.