ನೆರೆಯಿಂದಾಗಿ ಸಂಕಷ್ಟಕ್ಕೆ ಈಡಾಗಿರುವ ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳದಮುಖ್ಯಮಂತ್ರಿಗಳ ಜೊತೆ ಆನ್ಲೈನ್ ಮೂಲಕ ಮೋದಿ ಸಭೆ ನಡೆಸಿದರು. ಈ ವೇಳೆ, ಪ್ರಸ್ತುತ ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನವನ್ನು ಸೂಕ್ತವಾಗಿ ಬಳಸಿಕೊಂಡು ಭಾರಿ ಮಳೆ ಮುನ್ಸೂಚನೆ ಹಾಗೂ ಅನಾಹುತದ ಎಚ್ಚರಿಕೆಯನ್ನು ನೀಡಬೇಕಾಗಿದೆ ಎಂದು ಅಧಿಕಾರಿಗಳಿಗೆ ಮೋದಿ ಸೂಚಿಸಿದರು ಎಂದು ಪ್ರಧಾನಿಯವರ ಕಚೇರಿ ಪ್ರಕಟಣೆ ತಿಳಿಸಿದೆ.