ಮಥುರಾ: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಬೇಕು ಎಂಬ ಕನಸು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದಾಗಿ ನನಸಾಗುತ್ತಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಧಾಮಿ, ಪ್ರಧಾನಿ ಮೋದಿ ಅವರ ತ್ಯಾಗದಿಂದಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಾಧ್ಯವಾಗಿದೆ. ಇದು ಪ್ರತಿಯೊಬ್ಬ ರಾಮ ಭಕ್ತನ ಪಾಲಿಗೆ ಹೆಮ್ಮೆಯ ಸಂಗತಿ ಎಂದು ಹರ್ಷಿಸಿದ್ದಾರೆ.
ರಾಮ ಮಂದಿರ 2024ರ ಜನವರಿ 22ರಂದು ಉದ್ಘಾಟನೆಗೊಳ್ಳಲಿದೆ.
ಕಾಂಗ್ರೆಸ್ ಪಕ್ಷ ಮಣಿಪುರದಿಂದ ಮಹಾರಾಷ್ಟ್ರದವರೆಗೆ ನಡೆಸಲು ಉದ್ದೇಶಿಸಿರುವ 'ಭಾರತ ನ್ಯಾಯ ಯಾತ್ರೆ' ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಧಾಮಿ, 'ರಾಮಮಂದಿರ ನಿರ್ಮಾಣದ ಪ್ರಯತ್ನವನ್ನು ವಿಫಲಗೊಳಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಿದ ಇಂತಹ ವ್ಯಕ್ತಿಗಳ ಬಗ್ಗೆ ಜನರಿಗೆ ಗೊತ್ತಿದೆ' ಎಂದಿದ್ದಾರೆ.