<p><strong>ಲಕ್ನೊ:</strong> ‘ಕಬ್ಬು ಬೆಳೆಗಾರರ ಬಾಕಿ ಪಾವತಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹಣವಿಲ್ಲ, ಆದರೆ, ವಿಶ್ವ ಪ್ರವಾಸ ಮಾಡಲು ಎರಡು ವಿಮಾನಗಳನ್ನು ಖರೀದಿಸಲು ಅವರಲ್ಲಿ ಹಣವಿದೆ’ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಲೇವಡಿ ಮಾಡಿದ್ದಾರೆ.</p>.<p>ಉತ್ತರದ ಪ್ರದೇಶದ ಬಿಜನೋರ್ ಜಿಲ್ಲೆಯಲ್ಲಿ ಸೋಮವಾರ ಪಕ್ಷ ಆಯೋಜಿಸಿದ್ದ ‘ಕಿಸಾನ್ ಮಹಾಸಭಾ’ದಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>ದೇಶದ ರೈತರ ಕಬ್ಬಿನ ₹15 ಸಾವಿರ ಕೋಟಿಯನ್ನು ಬಾಕಿ ಉಳಿಸಿಕೊಂಡು, ಇನ್ನೂ ಪಾವತಿಸುತ್ತಿಲ್ಲ. ಆದರೆ, ಮೋದಿಯವರ ವಿಶ್ವ ಪ್ರವಾಸಕ್ಕೆ ಸುಮಾರು ₹16 ಸಾವಿರ ಕೋಟಿ ಮೊತ್ತದ ಎರಡು ವಿಮಾನಗಳನ್ನು ಸರ್ಕಾರ ಖರೀದಿಸಿದೆ. ಕಳೆದ ಎರಡು ಚುನಾವಣೆಗಳಲ್ಲಿ ಮೋದಿಯವರು ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸದೆ, ಜನರ ನಂಬಿಕೆಗೆ ದ್ರೋಹಬಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<p>‘ಮೋದಿಜೀಯವರು ನೀಡಿದ ಭರವಸೆಗಳನ್ನು ನಂಬಿದ ದೇಶದ ಜನತೆ ಅವರನ್ನು ಎರಡು ಬಾರಿ ಬೆಂಬಲಿಸಿದರು. ಆದರೆ, ಮೋದಿಜೀಯವರು ಜನತೆಯ ನಂಬಿಕೆಯನ್ನು ಹುಸಿಗೊಳಿಸಿಬಿಟ್ಟರು’ ಎಂದು ದೂರಿದರು.</p>.<p>ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳು ರೈತರ ಮರಣಶಾಸನ ಬರೆಯುವಂತಿವೆ ಎಂದು ಟೀಕಿಸಿದ ಪ್ರಿಯಾಂಕಾ, ‘ದೇವರುಗಳನ್ನು ಮಾರಾಟ ಮಾಡುವವರಿಗೆ ಮನುಷ್ಯರ ಬದುಕಿನ ಬೆಲೆ ಗೊತ್ತಾಗುವುದಿಲ್ಲ. ಹಾಗಾಗಿ ಕಬ್ಬು ಬಾಕಿ ಪಾವತಿಸದವರಿಗೆ ಜೀವನದ ಬೆಲೆಯೂ ಗೊತ್ತಾಗುತ್ತಿಲ್ಲ’ ಎಂದು ಪ್ರಧಾನಿ ವಿರುದ್ಧ ಹರಿಹಾಯ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/rahul-gandhi-slams-centre-over-lpg-cylinder-price-hike-805455.html" itemprop="url">ಕೇಂದ್ರ ಸರ್ಕಾರದಿಂದ ಜನ ಸಾಮಾನ್ಯರ ಲೂಟಿ: ರಾಹುಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ನೊ:</strong> ‘ಕಬ್ಬು ಬೆಳೆಗಾರರ ಬಾಕಿ ಪಾವತಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹಣವಿಲ್ಲ, ಆದರೆ, ವಿಶ್ವ ಪ್ರವಾಸ ಮಾಡಲು ಎರಡು ವಿಮಾನಗಳನ್ನು ಖರೀದಿಸಲು ಅವರಲ್ಲಿ ಹಣವಿದೆ’ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಲೇವಡಿ ಮಾಡಿದ್ದಾರೆ.</p>.<p>ಉತ್ತರದ ಪ್ರದೇಶದ ಬಿಜನೋರ್ ಜಿಲ್ಲೆಯಲ್ಲಿ ಸೋಮವಾರ ಪಕ್ಷ ಆಯೋಜಿಸಿದ್ದ ‘ಕಿಸಾನ್ ಮಹಾಸಭಾ’ದಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>ದೇಶದ ರೈತರ ಕಬ್ಬಿನ ₹15 ಸಾವಿರ ಕೋಟಿಯನ್ನು ಬಾಕಿ ಉಳಿಸಿಕೊಂಡು, ಇನ್ನೂ ಪಾವತಿಸುತ್ತಿಲ್ಲ. ಆದರೆ, ಮೋದಿಯವರ ವಿಶ್ವ ಪ್ರವಾಸಕ್ಕೆ ಸುಮಾರು ₹16 ಸಾವಿರ ಕೋಟಿ ಮೊತ್ತದ ಎರಡು ವಿಮಾನಗಳನ್ನು ಸರ್ಕಾರ ಖರೀದಿಸಿದೆ. ಕಳೆದ ಎರಡು ಚುನಾವಣೆಗಳಲ್ಲಿ ಮೋದಿಯವರು ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸದೆ, ಜನರ ನಂಬಿಕೆಗೆ ದ್ರೋಹಬಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<p>‘ಮೋದಿಜೀಯವರು ನೀಡಿದ ಭರವಸೆಗಳನ್ನು ನಂಬಿದ ದೇಶದ ಜನತೆ ಅವರನ್ನು ಎರಡು ಬಾರಿ ಬೆಂಬಲಿಸಿದರು. ಆದರೆ, ಮೋದಿಜೀಯವರು ಜನತೆಯ ನಂಬಿಕೆಯನ್ನು ಹುಸಿಗೊಳಿಸಿಬಿಟ್ಟರು’ ಎಂದು ದೂರಿದರು.</p>.<p>ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳು ರೈತರ ಮರಣಶಾಸನ ಬರೆಯುವಂತಿವೆ ಎಂದು ಟೀಕಿಸಿದ ಪ್ರಿಯಾಂಕಾ, ‘ದೇವರುಗಳನ್ನು ಮಾರಾಟ ಮಾಡುವವರಿಗೆ ಮನುಷ್ಯರ ಬದುಕಿನ ಬೆಲೆ ಗೊತ್ತಾಗುವುದಿಲ್ಲ. ಹಾಗಾಗಿ ಕಬ್ಬು ಬಾಕಿ ಪಾವತಿಸದವರಿಗೆ ಜೀವನದ ಬೆಲೆಯೂ ಗೊತ್ತಾಗುತ್ತಿಲ್ಲ’ ಎಂದು ಪ್ರಧಾನಿ ವಿರುದ್ಧ ಹರಿಹಾಯ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/rahul-gandhi-slams-centre-over-lpg-cylinder-price-hike-805455.html" itemprop="url">ಕೇಂದ್ರ ಸರ್ಕಾರದಿಂದ ಜನ ಸಾಮಾನ್ಯರ ಲೂಟಿ: ರಾಹುಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>