ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಮೇಲೆ ದಾಳಿ ನಡೆಸಿರುವ ಪ್ರಧಾನಿ ಮೋದಿಯಿಂದ ದೇಶ ದುರ್ಬಲ: ರಾಹುಲ್‌ ಗಾಂಧಿ

Last Updated 25 ಜನವರಿ 2021, 8:52 IST
ಅಕ್ಷರ ಗಾತ್ರ

ಚೆನ್ನೈ: ರೈತರ ಮೇಲೆ ದಾಳಿ ನಡೆಸಿರುವ ಪ್ರಧಾನಿ ಮೋದಿ ದೇಶವನ್ನು ದುರ್ಬಲಗೊಳಿಸಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, 'ಕಳೆದ ಆರು ವರ್ಷಗಳಲ್ಲಿ ಪ್ರಧಾನಿ ಮೋದಿ ಭಾರತವನ್ನು ದುರ್ಬಲಗೊಳಿಸಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸಿದ್ಧಾಂತವು ದೇಶದಾದ್ಯಂತ ದ್ವೇಷ ಹರಡುತ್ತಿರುವುದನ್ನು ನಾವು ನೋಡುತ್ತಿದ್ದೇವೆ' ಎಂದು ಹರಿಹಾಯ್ದಿದ್ದಾರೆ.

'ಕೇಂದ್ರ ಸರ್ಕಾರವು ನಮ್ಮ ಆರ್ಥಿಕತೆಯನ್ನು ನಾಶಮಾಡಿದೆ. ನಮ್ಮ ಯುವಕರಿಗೆ ಕೆಲಸ ಸಿಗುತ್ತಿಲ್ಲ. ಇದು ನಮ್ಮ ಯುವಕರ ತಪ್ಪಲ್ಲ. ಪ್ರಧಾನಿ ಮೋದಿ ತೆಗೆದುಕೊಂಡ ತಪ್ಪು ನಿರ್ಧಾರಗಳಿಂದ ಈ ಸನ್ನಿವೇಶ ನಿರ್ಮಾಣವಾಗಿದೆ' ಎಂದು ರಾಹುಲ್‌ ಹೇಳಿದ್ದಾರೆ.

'ನಮ್ಮ ರೈತರ ಮೇಲೆ ಪ್ರಧಾನಿ ಮೋದಿ ದಾಳಿ ನಡೆಸಿದ್ದಾರೆ. ಭಾರತದ ಕೃಷಿ ಕ್ಷೇತ್ರವನ್ನು ದೊಡ್ಡ ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಸಲುವಾಗಿ ಮೂರು ಹೊಸ ಕಾಯ್ದೆಗಳನ್ನು ತಂದಿದ್ದಾರೆ. ರೈತರು ತಮ್ಮನ್ನು ರಕ್ಷಿಸಿಕೊಳ್ಳುವುದಕ್ಕೊಸ್ಕರ ನ್ಯಾಯಾಲಯಕ್ಕೆ ಹೋಗಲು ಸಾಧ್ಯವಿಲ್ಲ ಎಂಬುದಾಗಿ ಹೊಸ ಕಾಯ್ದೆಗಳು ಸ್ಪಷ್ಟವಾಗಿ ಹೇಳುತ್ತವೆ' ಎಂದು ಅವರು ತಿಳಿಸಿದ್ದಾರೆ.

ಭಾರತದ ಅಡಿಪಾಯ ನಾಶವಾಗುವುದಕ್ಕೆ ತಮ್ಮ ಪಕ್ಷ ಅವಕಾಶ ನೀಡುವುದಿಲ್ಲ ಎಂದಿರುವ ರಾಹುಲ್‌, 'ತಮಿಳುನಾಡಿನ ಚೈತನ್ಯ, ಭಾಷೆ, ಸಂಸ್ಕೃತಿ ಮತ್ತು ಇತಿಹಾಸ ಪ್ರಧಾನಿ ಮೋದಿಗೆ ಅರ್ಥವಾಗುತ್ತಿಲ್ಲ' ಎಂದು ಟೀಕಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT