<p><strong>ತಿರುವನಂತಪುರ</strong>: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಕೇರಳದಲ್ಲಿ ಎರಡಂಕಿಯ ಸ್ಥಾನಗಳನ್ನು ಗಳಿಸಲಿದೆ ಎಂಬ ಮಹತ್ವಾಕಾಂಕ್ಷೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಇಲ್ಲಿನ ಸಂಸದ ಶಶಿ ತರೂರ್ ಮೂದಲಿಸಿದ್ದಾರೆ.</p><p>'ಕೇಸರಿ ಪಕ್ಷವು ದಕ್ಷಿಣ ಭಾರತದ ರಾಜ್ಯದಲ್ಲಿ ಅಂತಹ ಸಾಧನೆ ಮಾಡಲು ಇರುವ ಏಕೈಕ ಮಾರ್ಗವೆಂದರೆ ಎರಡು ಸೊನ್ನೆಗಳನ್ನು ಪಡೆಯುವುದು. ಇಲ್ಲವಾದರೆ ಕೇರಳದಲ್ಲಿ ಬಿಜೆಪಿಗೆ ಸಿಗುವುದು ಒಂದಂಕಿಯಷ್ಟೇ. ಅದು ಒಂದು ಸೊನ್ನೆ' ಎಂದು ಕಾಲೆಳೆದಿದ್ದಾರೆ.</p><p>ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ.ಸುಧಾಕನರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ನೃತೃತ್ವದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಯಾತ್ರೆಯ ಭಾಗವಾಗಿ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ತರೂರ್, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.</p><p>ಮಂಗಳವಾರ ಕೇರಳಕ್ಕೆ ಭೇಟಿ ನೀಡಿದ್ದ ಪ್ರಧಾನಿ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಎರಡಂಕಿಯಷ್ಟು ಸ್ಥಾನಗಳನ್ನು ನೀಡಿ ಆಶೀರ್ವಾದ ಮಾಡಿ ಎಂದು ಜನರಿಗೆ ಮನವಿ ಮಾಡಿದ್ದರು.</p><p>ಈ ಕುರಿತು ಮಾತನಾಡಿರುವ ತರೂರ್, ಕೇರಳ ಹಾಗೂ ಅದರ ಸಂಸ್ಕೃತಿ ಅಥವಾ ಇತಿಹಾಸವನ್ನು ಅರ್ಥಮಾಡಿಕೊಳ್ಳದಿರುವುದೇ ಬಿಜೆಪಿಯ ಸಮಸ್ಯೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಕೇರಳದಲ್ಲಿ ಎರಡಂಕಿಯ ಸ್ಥಾನಗಳನ್ನು ಗಳಿಸಲಿದೆ ಎಂಬ ಮಹತ್ವಾಕಾಂಕ್ಷೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಇಲ್ಲಿನ ಸಂಸದ ಶಶಿ ತರೂರ್ ಮೂದಲಿಸಿದ್ದಾರೆ.</p><p>'ಕೇಸರಿ ಪಕ್ಷವು ದಕ್ಷಿಣ ಭಾರತದ ರಾಜ್ಯದಲ್ಲಿ ಅಂತಹ ಸಾಧನೆ ಮಾಡಲು ಇರುವ ಏಕೈಕ ಮಾರ್ಗವೆಂದರೆ ಎರಡು ಸೊನ್ನೆಗಳನ್ನು ಪಡೆಯುವುದು. ಇಲ್ಲವಾದರೆ ಕೇರಳದಲ್ಲಿ ಬಿಜೆಪಿಗೆ ಸಿಗುವುದು ಒಂದಂಕಿಯಷ್ಟೇ. ಅದು ಒಂದು ಸೊನ್ನೆ' ಎಂದು ಕಾಲೆಳೆದಿದ್ದಾರೆ.</p><p>ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ.ಸುಧಾಕನರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ನೃತೃತ್ವದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಯಾತ್ರೆಯ ಭಾಗವಾಗಿ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ತರೂರ್, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.</p><p>ಮಂಗಳವಾರ ಕೇರಳಕ್ಕೆ ಭೇಟಿ ನೀಡಿದ್ದ ಪ್ರಧಾನಿ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಎರಡಂಕಿಯಷ್ಟು ಸ್ಥಾನಗಳನ್ನು ನೀಡಿ ಆಶೀರ್ವಾದ ಮಾಡಿ ಎಂದು ಜನರಿಗೆ ಮನವಿ ಮಾಡಿದ್ದರು.</p><p>ಈ ಕುರಿತು ಮಾತನಾಡಿರುವ ತರೂರ್, ಕೇರಳ ಹಾಗೂ ಅದರ ಸಂಸ್ಕೃತಿ ಅಥವಾ ಇತಿಹಾಸವನ್ನು ಅರ್ಥಮಾಡಿಕೊಳ್ಳದಿರುವುದೇ ಬಿಜೆಪಿಯ ಸಮಸ್ಯೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>