<p><strong>ನವದೆಹಲಿ: </strong>ಪ್ರಧಾನಿ ನರೇಂದ್ರ ಮೋದಿಯವರ ಲಡಾಖ್ ಭೇಟಿಯು ಸಶಸ್ತ್ರ ಪಡೆಗಳ ಸ್ಥೈರ್ಯ ಹೆಚ್ಚಿಸಿದೆ ಎಂದು ಇಂಡೊ ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮುಖ್ಯಸ್ಥ ಎಸ್.ಎಸ್.ದೇಸ್ವಾಲ್ ಹೇಳಿದ್ದಾರೆ.</p>.<p>ಭಾರತದ ಸಶಸ್ತ್ರ ಪಡೆಗಳ ಆತ್ಮವಿಶ್ವಾಸ ಅತ್ಯುನ್ನತ ಮಟ್ಟದಲ್ಲಿದೆ. ಈ ಹಿಂದಿನಂತೆಯೇ ದೇಶಕ್ಕಾಗಿ ಜೀವ ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಅವರು ಹೇಳಿದ್ದಾರೆ. ಚೀನಾ ಜತೆಗಿನ ಗಡಿ ಸಂಘರ್ಷ ಉಲ್ಬಣಗೊಂಡಿರುವ ಸಂದರ್ಭದಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>‘ರಾಷ್ಟ್ರದ ನಾಯಕತ್ವ, ರಾಜಕೀಯ ನಾಯಕತ್ವ, ಸಶಸ್ತ್ರ ಪಡೆಗಳು ಮತ್ತು ಯೋಧರು ದೇಶಕ್ಕೆ ಸಮರ್ಪಿತರಾಗಿದ್ದಾರೆ. ಎಲ್ಲ ಪಡೆಗಳು ಗಡಿ ಭದ್ರತೆಗೆ ಕಟಿಬದ್ಧರಾಗಿವೆ. ಅದು ಭಾರತೀಯ ಸೇನೆ ಆಗಿರಲಿ, ವಾಯುಪಡೆ ಆಗಿರಲಿ ಅಥವಾ ಐಟಿಬಿಪಿ ಆಗಿರಲಿ ಎಂದು ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/pm-narendra-modi-meets-president-kovind-briefs-him-on-issues-of-national-international-importance-742323.html" itemprop="url">ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿಯಾಗಿ ಪ್ರಮುಖ ವಿದ್ಯಮಾನಗಳ ಮಾಹಿತಿ ನೀಡಿದ ಮೋದಿ</a></p>.<p>10 ಸಾವಿರ ಹಾಸಿಗೆ ಸಾಮರ್ಥ್ಯದ ಕೋವಿಡ್ ಸೆಂಟರ್ನ ಉದ್ಘಾಟನಾ ಸಮಾರಂಭದ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>ಚೀನಾ ಜತೆಗಿನ 3,488 ಕಿಲೋ ಮೀಟರ್ ಉದ್ದದ ನೈಜ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಎಸಿ) ಐಟಿಬಿಪಿ ಯೋಧರು ಇತರ ಸೇನಾ ಸಿಬ್ಬಂದಿ ಜತೆಗೂಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಡಾಖ್ನಲ್ಲಿ ಚೀನಾ ಜತೆಗಿನ ಗಡಿ ಸಂಘರ್ಷದ ಬಳಿಕ ಎಲ್ಎಸಿಯಲ್ಲಿ ಸುಮಾರು 3,000ದಷ್ಟು ಹೆಚ್ಚು ಐಟಿಬಿಪಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರಧಾನಿ ನರೇಂದ್ರ ಮೋದಿಯವರ ಲಡಾಖ್ ಭೇಟಿಯು ಸಶಸ್ತ್ರ ಪಡೆಗಳ ಸ್ಥೈರ್ಯ ಹೆಚ್ಚಿಸಿದೆ ಎಂದು ಇಂಡೊ ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮುಖ್ಯಸ್ಥ ಎಸ್.ಎಸ್.ದೇಸ್ವಾಲ್ ಹೇಳಿದ್ದಾರೆ.</p>.<p>ಭಾರತದ ಸಶಸ್ತ್ರ ಪಡೆಗಳ ಆತ್ಮವಿಶ್ವಾಸ ಅತ್ಯುನ್ನತ ಮಟ್ಟದಲ್ಲಿದೆ. ಈ ಹಿಂದಿನಂತೆಯೇ ದೇಶಕ್ಕಾಗಿ ಜೀವ ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಅವರು ಹೇಳಿದ್ದಾರೆ. ಚೀನಾ ಜತೆಗಿನ ಗಡಿ ಸಂಘರ್ಷ ಉಲ್ಬಣಗೊಂಡಿರುವ ಸಂದರ್ಭದಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>‘ರಾಷ್ಟ್ರದ ನಾಯಕತ್ವ, ರಾಜಕೀಯ ನಾಯಕತ್ವ, ಸಶಸ್ತ್ರ ಪಡೆಗಳು ಮತ್ತು ಯೋಧರು ದೇಶಕ್ಕೆ ಸಮರ್ಪಿತರಾಗಿದ್ದಾರೆ. ಎಲ್ಲ ಪಡೆಗಳು ಗಡಿ ಭದ್ರತೆಗೆ ಕಟಿಬದ್ಧರಾಗಿವೆ. ಅದು ಭಾರತೀಯ ಸೇನೆ ಆಗಿರಲಿ, ವಾಯುಪಡೆ ಆಗಿರಲಿ ಅಥವಾ ಐಟಿಬಿಪಿ ಆಗಿರಲಿ ಎಂದು ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/pm-narendra-modi-meets-president-kovind-briefs-him-on-issues-of-national-international-importance-742323.html" itemprop="url">ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿಯಾಗಿ ಪ್ರಮುಖ ವಿದ್ಯಮಾನಗಳ ಮಾಹಿತಿ ನೀಡಿದ ಮೋದಿ</a></p>.<p>10 ಸಾವಿರ ಹಾಸಿಗೆ ಸಾಮರ್ಥ್ಯದ ಕೋವಿಡ್ ಸೆಂಟರ್ನ ಉದ್ಘಾಟನಾ ಸಮಾರಂಭದ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>ಚೀನಾ ಜತೆಗಿನ 3,488 ಕಿಲೋ ಮೀಟರ್ ಉದ್ದದ ನೈಜ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಎಸಿ) ಐಟಿಬಿಪಿ ಯೋಧರು ಇತರ ಸೇನಾ ಸಿಬ್ಬಂದಿ ಜತೆಗೂಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಡಾಖ್ನಲ್ಲಿ ಚೀನಾ ಜತೆಗಿನ ಗಡಿ ಸಂಘರ್ಷದ ಬಳಿಕ ಎಲ್ಎಸಿಯಲ್ಲಿ ಸುಮಾರು 3,000ದಷ್ಟು ಹೆಚ್ಚು ಐಟಿಬಿಪಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>