<p><strong>ನವದೆಹಲಿ: </strong>‘ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಹರಡಿರುವ ಕುಟುಂಬದ ಪ್ರಾಬಲ್ಯವುಳ್ಳ ರಾಜಕೀಯ ಪಕ್ಷಗಳ ಬಗ್ಗೆ ಸಂವಿಧಾನಕ್ಕೆ ಬದ್ಧರಾಗಿರುವ ಜನರು ಪ್ರಮುಖವಾಗಿ ಚಿಂತನೆ ನಡೆಸಬೇಕಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅವರು, ‘ರಾಜಕೀಯ ಪಕ್ಷಗಳು ಪ್ರಜಾಸತ್ತಾತ್ಮಕವಾದ ಲಕ್ಷಣವನ್ನು ಕಳೆದುಕೊಂಡರೆ ಸಂವಿಧಾನದ ಧ್ಯೇಯ ಮತ್ತು ಉದ್ದೇಶಕ್ಕೇ ಧಕ್ಕೆಯಾಗಲಿದೆ’ ಎಂದು ಹೇಳಿದರು.</p>.<p>ಸಂಸತ್ತಿನ ಸೆಂಟ್ರಲ್ಹಾಲ್ನಲ್ಲಿ ನಡೆದ ‘ಸಂವಿಧಾನ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಜಾಸತ್ತಾತ್ಮಕವಾದ ಲಕ್ಷಣವನ್ನೇ ಕಳೆದುಕೊಂಡ ಪಕ್ಷಗಳು ಹೇಗೆ ತಾನೇ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>14 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು. ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಸಂಸದರು ಹಾಜರಿದ್ದರು.</p>.<p>‘ಕುಟುಂಬದ ಮತ್ತೊಬ್ಬ ಸದಸ್ಯ ಸೇರಿದಾಕ್ಷಣ ಒಂದು ರಾಜಕೀಯ ಪಕ್ಷ ಕುಟುಂಬ ಆಧಾರಿತವಾಗುವುದಿಲ್ಲ. ಆದರೆ, ಒಂದೇ ಕುಟುಂಬವು ನಿರ್ದಿಷ್ಟವಾಗಿ ಪಕ್ಷವನ್ನು ಮುನ್ನಡೆಸಿದಾಗ ಸಮಸ್ಯೆಗಳು ಶುರುವಾಗುತ್ತವೆ’ ಎಂದು ಮೋದಿ ವ್ಯಾಖ್ಯಾನಿಸಿದರು.</p>.<p>‘ಜನರು ಕೇವಲ ಸಂವಿಧಾನದ ಹಕ್ಕುಗಳ ಬಗ್ಗೆಯಷ್ಟೇ ಮಾತನಾಡಬಾರದು. ಸಾಂವಿಧಾನಿಕ ಜವಾಬ್ದಾರಿಯನ್ನೂ ನಿರ್ವಹಿಸಬೇಕು. ಸ್ವಾತಂತ್ರ್ಯ ಹೋರಾಟದ ವೇಳೆ ಜನರ ಜವಾಬ್ದಾರಿ ಕುರಿತು ಅರಿವು ಮೂಡಿಸಲು ಮಹಾತ್ಮಗಾಂಧಿ ಯತ್ನಿಸಿದ್ದರು. ಗಾಂಧೀಜಿ ಬಿತ್ತಿದ್ದ ಈ ಬೀಜಗಳು ಸ್ವಾತಂತ್ಯದ ನಂತರ ಹೆಮ್ಮರವಾಗಿ ಬೆಳೆಯಬೇಕಾಗಿತ್ತು. ದುರದೃಷ್ಟವಶಾತ್ ಹಾಗಾಗಲಿಲ್ಲ. ನಮ್ಮ ಹಕ್ಕುಗಳನ್ನು ಸರ್ಕಾರ ಮಾತ್ರವೇ ಈಡೇರಿಸಬಲ್ಲದು ಎಂದು ಜನರೂ ಭಾವಿಸತೊಡಗಿದರು’ ಎಂದು ಹೇಳಿದರು.</p>.<p><strong>14 ವಿರೋಧ ಪಕ್ಷಗಳಿಂದ ಬಹಿಷ್ಕಾರ</strong></p>.<p><strong>ನವದೆಹಲಿ:</strong> ಲೋಕಸಭೆಯು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮವನ್ನು ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದಂತೆ 14 ವಿರೋಧ ಪಕ್ಷಗಳು ಬಹಿಷ್ಕರಿಸಿದವು.</p>.<p>ಸಮಾಜವಾದಿ ಪಕ್ಷ, ಆಮ್ ಅದ್ಮಿ ಪಕ್ಷ, ಸಿಪಿಐ, ಸಿಪಿಎಂ, ಡಿಎಂಕೆ, ಶಿರೋಮಣಿ ಅಕಾಲಿ ದಳ, ಶಿವಸೇನೆ, ಎನ್ಸಿಪಿ, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ, ಆರ್ಎಸ್ಪಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತಿತರ ಪಕ್ಷಗಳು ಬಹಿಷ್ಕರಿಸಿದ್ದವು.</p>.<p>‘ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ, ರಾಜಕೀಯಯೇತರ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಪರಿಪಾಠ ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ’ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.</p>.<p><strong>ಸಂವಿಧಾನದ ಅಗೌರವ ಖಂಡಿಸಿ ಗೈರು–ಕಾಂಗ್ರೆಸ್</strong></p>.<p><strong>ನವದೆಹಲಿ:</strong> ಸಂವಿಧಾನವನ್ನು ಗೌರವಿಸಲಾಗುತ್ತಿಲ್ಲ, ಕಡೆಗಣಿಸಲಾಗುತ್ತದೆ ಎಂಬುದನ್ನು ದೇಶದ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದಲೇ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎಂದು ಕಾಂಗ್ರೆಸ್ ಹೇಳಿದೆ.</p>.<p>ಪಕ್ಷದ ವಕ್ತಾರ ಆನಂದ ಶರ್ಮಾ, ‘ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಯುತವಾಗಿ ಆಡಳಿತ ನಡೆಸುತ್ತಿದೆ. ಸಂಸದೀಯ ವ್ಯವಸ್ಥೆಗೆ ಅಪಮಾನಿಸಿ, ಸಂಸತ್ತನ್ನು ಉಲ್ಲಂಘಿಸಿ ಕಾಯ್ದೆ ರೂಪಿಸಲಾಗುತ್ತಿದೆ. ಇದನ್ನು ಪ್ರತಿಭಟಿಸುವುದು ಉದ್ದೇಶವಾಗಿತ್ತು’ ಎಂದರು.</p>.<p>ನಮ್ಮ ಪ್ರತಿಭಟನೆಯು ಮೂಲ ನೀತಿಯನ್ನು ಆಧರಿಸಿದ್ದಾಗಿತ್ತು. ಜನರಿಗೆ ಇದನ್ನು ಮನವರಿಕೆ ಮಾಡಿಕೊಡಬೇಕಿತ್ತು. ಕಾಯ್ದೆ ಸಮೂಹದ ಮೇಲೆ ಪರಿಣಾಮ ಬೀರಲಿದೆ. ಆದರೆ, ಸಂಸದೀಯ ನಿಯಮ ಪಾಲಿಸದೇ ಕಾಯ್ದೆ ರೂಪಿಸಲಾಗುತ್ತಿದೆ ಎಂದು ಹೇಳಿದರು.</p>.<p><strong>ಭಿನ್ನಾಭಿಪ್ರಾಯ ಅಡ್ಡಿಯಾಗದಿರಲಿ–ರಾಷ್ಟ್ರಪತಿ</strong></p>.<p><strong>ನವದೆಹಲಿ:</strong> ವಿರೋಧ ಪಕ್ಷಗಳು ಪ್ರಜಾಪ್ರಭುತ್ವದ ಪ್ರಮುಖ ಭಾಗ. ಆಡಳಿತ, ವಿರೋಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಇರಬಹುದು. ಅದರಿಂದ ಸಾರ್ವಜನಿಕ ಸೇವೆಯ ನಿಜ ಉದ್ದೇಶಕ್ಕೆ ಅಡ್ಡಿಯಾಗಬಾರದು ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದರು</p>.<p>‘ಸಂವಿಧಾನ ದಿನ’ ಕಾರ್ಯಕ್ರಮದಲ್ಲಿ ಅವರು,ಪರಿಣಾಮಕಾರಿ ವಿರೋಧಪಕ್ಷ ಇಲ್ಲದಿದ್ದರೆ ಪ್ರಜಾಪ್ರಭುತ್ವವು ಪರಿಣಾಮಕಾರಿ ಆಗದು. ಭಿನ್ನಮತದ ನಡುವೆಯೂ ಆಡಳಿತ, ವಿರೋಧ ಪಕ್ಷಗಳು ಜನರ ಹಿತದೃಷ್ಟಿಯಿಂದ ಒಗ್ಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ಯಾವುದೇ ಪಕ್ಷದವರಿರಲಿ, ಎಲ್ಲ ಸಂಸದರು ಸಂಸತ್ತಿನ ಘನತೆಯನ್ನು ಕಾಪಾಡಬೇಕು. ತಮ್ಮ ಜವಾಬ್ದಾರಿಯನ್ನು ಅರಿಯಬೇಕು ಹಾಗೂ ಸಂವಿಧಾನವನ್ನು ಬಲಪಡಿಸುವ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಹರಡಿರುವ ಕುಟುಂಬದ ಪ್ರಾಬಲ್ಯವುಳ್ಳ ರಾಜಕೀಯ ಪಕ್ಷಗಳ ಬಗ್ಗೆ ಸಂವಿಧಾನಕ್ಕೆ ಬದ್ಧರಾಗಿರುವ ಜನರು ಪ್ರಮುಖವಾಗಿ ಚಿಂತನೆ ನಡೆಸಬೇಕಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅವರು, ‘ರಾಜಕೀಯ ಪಕ್ಷಗಳು ಪ್ರಜಾಸತ್ತಾತ್ಮಕವಾದ ಲಕ್ಷಣವನ್ನು ಕಳೆದುಕೊಂಡರೆ ಸಂವಿಧಾನದ ಧ್ಯೇಯ ಮತ್ತು ಉದ್ದೇಶಕ್ಕೇ ಧಕ್ಕೆಯಾಗಲಿದೆ’ ಎಂದು ಹೇಳಿದರು.</p>.<p>ಸಂಸತ್ತಿನ ಸೆಂಟ್ರಲ್ಹಾಲ್ನಲ್ಲಿ ನಡೆದ ‘ಸಂವಿಧಾನ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಜಾಸತ್ತಾತ್ಮಕವಾದ ಲಕ್ಷಣವನ್ನೇ ಕಳೆದುಕೊಂಡ ಪಕ್ಷಗಳು ಹೇಗೆ ತಾನೇ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>14 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು. ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಸಂಸದರು ಹಾಜರಿದ್ದರು.</p>.<p>‘ಕುಟುಂಬದ ಮತ್ತೊಬ್ಬ ಸದಸ್ಯ ಸೇರಿದಾಕ್ಷಣ ಒಂದು ರಾಜಕೀಯ ಪಕ್ಷ ಕುಟುಂಬ ಆಧಾರಿತವಾಗುವುದಿಲ್ಲ. ಆದರೆ, ಒಂದೇ ಕುಟುಂಬವು ನಿರ್ದಿಷ್ಟವಾಗಿ ಪಕ್ಷವನ್ನು ಮುನ್ನಡೆಸಿದಾಗ ಸಮಸ್ಯೆಗಳು ಶುರುವಾಗುತ್ತವೆ’ ಎಂದು ಮೋದಿ ವ್ಯಾಖ್ಯಾನಿಸಿದರು.</p>.<p>‘ಜನರು ಕೇವಲ ಸಂವಿಧಾನದ ಹಕ್ಕುಗಳ ಬಗ್ಗೆಯಷ್ಟೇ ಮಾತನಾಡಬಾರದು. ಸಾಂವಿಧಾನಿಕ ಜವಾಬ್ದಾರಿಯನ್ನೂ ನಿರ್ವಹಿಸಬೇಕು. ಸ್ವಾತಂತ್ರ್ಯ ಹೋರಾಟದ ವೇಳೆ ಜನರ ಜವಾಬ್ದಾರಿ ಕುರಿತು ಅರಿವು ಮೂಡಿಸಲು ಮಹಾತ್ಮಗಾಂಧಿ ಯತ್ನಿಸಿದ್ದರು. ಗಾಂಧೀಜಿ ಬಿತ್ತಿದ್ದ ಈ ಬೀಜಗಳು ಸ್ವಾತಂತ್ಯದ ನಂತರ ಹೆಮ್ಮರವಾಗಿ ಬೆಳೆಯಬೇಕಾಗಿತ್ತು. ದುರದೃಷ್ಟವಶಾತ್ ಹಾಗಾಗಲಿಲ್ಲ. ನಮ್ಮ ಹಕ್ಕುಗಳನ್ನು ಸರ್ಕಾರ ಮಾತ್ರವೇ ಈಡೇರಿಸಬಲ್ಲದು ಎಂದು ಜನರೂ ಭಾವಿಸತೊಡಗಿದರು’ ಎಂದು ಹೇಳಿದರು.</p>.<p><strong>14 ವಿರೋಧ ಪಕ್ಷಗಳಿಂದ ಬಹಿಷ್ಕಾರ</strong></p>.<p><strong>ನವದೆಹಲಿ:</strong> ಲೋಕಸಭೆಯು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮವನ್ನು ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದಂತೆ 14 ವಿರೋಧ ಪಕ್ಷಗಳು ಬಹಿಷ್ಕರಿಸಿದವು.</p>.<p>ಸಮಾಜವಾದಿ ಪಕ್ಷ, ಆಮ್ ಅದ್ಮಿ ಪಕ್ಷ, ಸಿಪಿಐ, ಸಿಪಿಎಂ, ಡಿಎಂಕೆ, ಶಿರೋಮಣಿ ಅಕಾಲಿ ದಳ, ಶಿವಸೇನೆ, ಎನ್ಸಿಪಿ, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ, ಆರ್ಎಸ್ಪಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತಿತರ ಪಕ್ಷಗಳು ಬಹಿಷ್ಕರಿಸಿದ್ದವು.</p>.<p>‘ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ, ರಾಜಕೀಯಯೇತರ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಪರಿಪಾಠ ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ’ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.</p>.<p><strong>ಸಂವಿಧಾನದ ಅಗೌರವ ಖಂಡಿಸಿ ಗೈರು–ಕಾಂಗ್ರೆಸ್</strong></p>.<p><strong>ನವದೆಹಲಿ:</strong> ಸಂವಿಧಾನವನ್ನು ಗೌರವಿಸಲಾಗುತ್ತಿಲ್ಲ, ಕಡೆಗಣಿಸಲಾಗುತ್ತದೆ ಎಂಬುದನ್ನು ದೇಶದ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದಲೇ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎಂದು ಕಾಂಗ್ರೆಸ್ ಹೇಳಿದೆ.</p>.<p>ಪಕ್ಷದ ವಕ್ತಾರ ಆನಂದ ಶರ್ಮಾ, ‘ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಯುತವಾಗಿ ಆಡಳಿತ ನಡೆಸುತ್ತಿದೆ. ಸಂಸದೀಯ ವ್ಯವಸ್ಥೆಗೆ ಅಪಮಾನಿಸಿ, ಸಂಸತ್ತನ್ನು ಉಲ್ಲಂಘಿಸಿ ಕಾಯ್ದೆ ರೂಪಿಸಲಾಗುತ್ತಿದೆ. ಇದನ್ನು ಪ್ರತಿಭಟಿಸುವುದು ಉದ್ದೇಶವಾಗಿತ್ತು’ ಎಂದರು.</p>.<p>ನಮ್ಮ ಪ್ರತಿಭಟನೆಯು ಮೂಲ ನೀತಿಯನ್ನು ಆಧರಿಸಿದ್ದಾಗಿತ್ತು. ಜನರಿಗೆ ಇದನ್ನು ಮನವರಿಕೆ ಮಾಡಿಕೊಡಬೇಕಿತ್ತು. ಕಾಯ್ದೆ ಸಮೂಹದ ಮೇಲೆ ಪರಿಣಾಮ ಬೀರಲಿದೆ. ಆದರೆ, ಸಂಸದೀಯ ನಿಯಮ ಪಾಲಿಸದೇ ಕಾಯ್ದೆ ರೂಪಿಸಲಾಗುತ್ತಿದೆ ಎಂದು ಹೇಳಿದರು.</p>.<p><strong>ಭಿನ್ನಾಭಿಪ್ರಾಯ ಅಡ್ಡಿಯಾಗದಿರಲಿ–ರಾಷ್ಟ್ರಪತಿ</strong></p>.<p><strong>ನವದೆಹಲಿ:</strong> ವಿರೋಧ ಪಕ್ಷಗಳು ಪ್ರಜಾಪ್ರಭುತ್ವದ ಪ್ರಮುಖ ಭಾಗ. ಆಡಳಿತ, ವಿರೋಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಇರಬಹುದು. ಅದರಿಂದ ಸಾರ್ವಜನಿಕ ಸೇವೆಯ ನಿಜ ಉದ್ದೇಶಕ್ಕೆ ಅಡ್ಡಿಯಾಗಬಾರದು ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದರು</p>.<p>‘ಸಂವಿಧಾನ ದಿನ’ ಕಾರ್ಯಕ್ರಮದಲ್ಲಿ ಅವರು,ಪರಿಣಾಮಕಾರಿ ವಿರೋಧಪಕ್ಷ ಇಲ್ಲದಿದ್ದರೆ ಪ್ರಜಾಪ್ರಭುತ್ವವು ಪರಿಣಾಮಕಾರಿ ಆಗದು. ಭಿನ್ನಮತದ ನಡುವೆಯೂ ಆಡಳಿತ, ವಿರೋಧ ಪಕ್ಷಗಳು ಜನರ ಹಿತದೃಷ್ಟಿಯಿಂದ ಒಗ್ಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ಯಾವುದೇ ಪಕ್ಷದವರಿರಲಿ, ಎಲ್ಲ ಸಂಸದರು ಸಂಸತ್ತಿನ ಘನತೆಯನ್ನು ಕಾಪಾಡಬೇಕು. ತಮ್ಮ ಜವಾಬ್ದಾರಿಯನ್ನು ಅರಿಯಬೇಕು ಹಾಗೂ ಸಂವಿಧಾನವನ್ನು ಬಲಪಡಿಸುವ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>