ಲಖನೌ: ನಾವೊಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ. ಅವರ ಆದರ್ಶನಗಳನ್ನು ನಾವು ಪಾಲಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶನಿವಾರ ರಾತ್ರಿ ನಿಧನರಾದ ಬಿಜೆಪಿ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಅವರ ಕುಟುಂಬದವರಿಗೆ ಮೋದಿ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಅಗಲಿದ ನಾಯಕನ ಗುಣಗಾನ ಮಾಡಿದರು.
‘ನಾವೊಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ. ಅವರು ಪಾಲಿಸಿಕೊಂಡು ಬಂದಿದ್ದ ಮೌಲ್ಯಗಳನ್ನು ಮತ್ತು ನಿರ್ಣಯಗಳನ್ನು ಅನುಸರಿಸುವ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕು. ಅವರ ಕನಸುಗಳು ಸಾಕಾರಗೊಳ್ಳುವಂತೆ ಮಾಡಬೇಕು’ ಎಂದು ಪ್ರಧಾನಿ ಹೇಳಿದ್ದಾರೆ.
‘ಪ್ರಭು ರಾಮನು ತನ್ನ ಚರಣಗಳಲ್ಲಿ ಕಲ್ಯಾಣ್ ಸಿಂಗ್ ಅವರಿಗೆ ಸ್ಥಾನ ನೀಡಲಿ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಹೇಳಿದ್ದಾರೆ.
#WATCH | Lucknow: PM Narendra Modi speaks on the demise of former UP CM Kalyan Singh. He says, "We have lost a capable leader. We should make maximum efforts by taking his values & resolutions to compensate for him; we should leave no stone unturned in fulfilling his dreams...." pic.twitter.com/I61qz8H0Yx