ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿ ಸ್ಥಳಕ್ಕೆ ತೆರಳಿ ಗೌರವ ಸಮರ್ಪಿಸಿದ್ದಾರೆ.
ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 75ನೇ ವರ್ಷದ ಪುಣ್ಯತಿಥಿ. ಮಹಾತ್ಮ ಗಾಂಧಿ ಅವರನ್ನು 1948ರಲ್ಲಿ ಇದೇ ದಿನ ನಾಥೂರಾಂ ಗೋಡ್ಸೆ ಗುಂಡಿಕ್ಕಿ ಹತ್ಯೆ ಮಾಡಿದ್ದ. ಹೀಗಾಗಿ ಈ ದಿನವನ್ನು 'ಹುತಾತ್ಮರ ದಿನ'ವೆಂದು ಆಚರಿಸಲಾಗುತ್ತದೆ.
LIVE: President Droupadi Murmu attends Sarva Dharma Prarthana Sabha at Rajghat on Martyrs’ Day https://t.co/C3ireM2wci
— President of India (@rashtrapatibhvn) January 30, 2023
ಮಹಾತ್ಮ ಗಾಂಧಿ ಅವರನ್ನು ಸ್ಮರಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಾಪು (ಮಹಾತ್ಮ ಗಾಂಧಿ) ಅವರ ಚಿಂತನೆಗಳನ್ನು ಸ್ಮರಿಸುತ್ತೇನೆ. ದೇಶ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ. ಅವು ಅಭಿವೃದ್ಧಿಗಾಗಿ ದುಡಿಯುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತವೆ ಎಂದಿದ್ದಾರೆ.
I bow to Bapu on his Punya Tithi and recall his profound thoughts. I also pay homage to all those who have been martyred in the service of our nation. Their sacrifices will never be forgotten and will keep strengthening our resolve to work for a developed India.
— Narendra Modi (@narendramodi) January 30, 2023
ಸ್ವಾವಲಂಬಿ ಹಾಗೂ ಸ್ವದೇಶಿ ಮಾರ್ಗ ಅನುಸರಣೆ ಮೂಲಕ ಸ್ವಾವಲಂಬಿ ದೇಶ ನಿರ್ಮಾಣಕ್ಕೆ ಪ್ರೇರಣೆಯಾದ ಮಹಾತ್ಮ ಗಾಂಧಿ ಅವರಿಗೆ ಅವರ ಪುಣ್ಯಸ್ಮರಣೆಯಂದು ಕೋಟಿ ನಮಗಳನ್ನು ಸಲ್ಲಿಸುತ್ತೇನೆ. ಅವರ ಸ್ವಚ್ಛತೆ, ಸ್ವದೇಶಿ ಹಾಗೂ ಸ್ವ–ಭಾಷೆ (ಮಾತೃ ಭಾಷೆ) ಚಿಂತನೆಗಳನ್ನು ಅಳವಡಿಸಿಕೊಳ್ಳುವುದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಾಪುವಿಗೆ ತೋರುವ ನಿಜವಾದ ಗೌರವವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮೂಲಕ ಕರೆ ನೀಡಿದ್ದಾರೆ.
स्वदेशी और स्वावलंबन के मार्ग पर चलकर देश को आत्मनिर्भर बनाने की प्रेरणा देने वाले महात्मा गांधी जी की पुण्यतिथि पर उन्हें कोटि-कोटि नमन।
— Amit Shah (@AmitShah) January 30, 2023
आजादी के अमृतकाल में पूज्य बापू के स्वच्छता, स्वदेशी और स्वभाषा के विचारों को अपनाकर उन पर चलाना ही गाँधी जी को सच्ची श्रद्धांजलि होगी। pic.twitter.com/ZBYH3cUg0S
ಬಾಪು ಅವರ ಪುಣ್ಯತಿಥಿಯಂದು ವಿನಮ್ರ ಗೌರವಗಳನ್ನು ಸಲ್ಲಿಸುತ್ತೇನೆ. ವಿಶ್ವ ಶಾಂತಿ ಮತ್ತು ಭಾರತದ ಪ್ರಗತಿಗಾಗಿ ಅವರು ತೋರಿದ ಹಾದಿ ಇಂದಿಗೂ ಪ್ರಸ್ತುತ. ಅವರ ಪ್ರೇರಣೆಯಿಂದಾಗಿ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣವಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬರೆದುಕೊಂಡಿದ್ದಾರೆ.
पूज्य बापू की पुण्यतिथि पर मैं उन्हें नमन करते हुए अपनी विनम्र श्रद्धांजलि अर्पित करता हूँ। विश्व शांति और भारत की प्रगति का जो मार्ग उन्होंने दिखाया वह आज भी बहुत प्रासंगिक है। उनकी प्रेरणा से ही आज एक नए और आत्मनिर्भर भारत का निर्माण प्रगति पर है।
— Rajnath Singh (@rajnathsingh) January 30, 2023
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಬಾಪು ಇಡೀ ದೇಶ ಪ್ರೀತಿಯಿಂದ, ಸರ್ವಧರ್ಮಗಳು ಸಮಾನತೆಯಿಂದ ಬದುಕಲು ಹಾಗೂ ಸತ್ಯಕ್ಕಾಗಿ ಹೋರಾಟ ಮಾಡುವುದನ್ನು ಕಲಿಸಿದರು. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಅವರು ಹುತಾತ್ಮರಾದ ದಿನದಂದು ಕೋಟಿ ನಮನಗಳು ಎಂದು ಸ್ಮರಿಸಿದ್ದಾರೆ.
बापू ने पूरे देश को प्रेम, सर्वधर्म समभाव के साथ जीना और सत्य के लिए लड़ना सिखाया।
— Rahul Gandhi (@RahulGandhi) January 30, 2023
राष्ट्रपिता, महात्मा गांधी के शहीद दिवस पर उन्हें कोटि कोटि नमन।
#MartyrsDay | Vice President Jagdeep Dhankhar pays tribute at Raj Ghat in Delhi, on #MahatmaGandhiDeathAnniversary pic.twitter.com/smulbA0SsU
— ANI (@ANI) January 30, 2023
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.