<p><strong>ಕಾನ್ಪುರ:</strong> ‘ಮುಂದಿನ 25 ವರ್ಷಗಳಲ್ಲಿ ಭಾರತ ಯಾವ ರೀತಿ ಅಭಿವೃದ್ಧಿ ಹೊಂದಬೇಕು ಎಂದು ಬಯಸುತ್ತಿರೋ, ಅದನ್ನು ಸಾಧಿಸುವ ನಿಟ್ಟಿನಲ್ಲಿ ಈಗಿನಿಂದಲೇ ಐಐಟಿ ಪದವೀಧರರು ಕಾರ್ಯಪ್ರವೃತ್ತರಾಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.</p>.<p>ಐಐಟಿ–ಕಾನ್ಪುರದ 54ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಸಮಯವನ್ನು ವ್ಯರ್ಥ ಮಾಡಲಾಗಿದೆ. ನವ ಪದವೀಧರರುಅನುಕೂಲಗಳ ಬದಲಾಗಿ ಸವಾಲುಗಳನ್ನು ಆಯ್ಕೆ ಮಾಡಿಕೊಂಡು, ದೇಶದ ಚುಕ್ಕಾಣಿ ಹಿಡಿಯಲು ಮುಂದಾಗಬೇಕು’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/photo-of-pm-on-vaccination-certificate-in-wider-public-interest-goi-896792.html" itemprop="url">ಸಾರ್ವಜನಿಕ ಹಿತಾಸಕ್ತಿಗಾಗಿ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ: ಕೇಂದ್ರ </a></p>.<p>‘ಸ್ವಾತಂತ್ರ್ಯ ನಂತರ ಭಾರತವೂ ಹೊಸ ಪಯಣ ಆರಂಭಿಸಿದೆ. ಮುಂದಿನ 25 ವರ್ಷಗಳ ನಂತರ ದೇಶ ಸಂಪೂರ್ಣ ಸ್ವಾವಲಂಬಿಯಾಗಬೇಕು. ಈ ಗುರಿ ಸಾಧನೆಗೆ ಸಾಕಷ್ಟು ಕಾರ್ಯವಾಗಬೇಕಾಗುತ್ತದೆ. ಆದರೆ, ಎರಡು ಪೀಳಿಗೆಗಳನ್ನು ಕಂಡಿರುವ ದೇಶ, ಸಾಕಷ್ಟು ಸಮಯವನ್ನೂ ವ್ಯರ್ಥ ಮಾಡಿದೆ. ಇನ್ನು ಮುಂದೆ ಎರಡು ನಿಮಿಷವನ್ನು ಸಹ ನಾವು ವ್ಯರ್ಥ ಮಾಡಬಾರದು’ ಎಂದು ಅವರು ಹೇಳಿದರು.</p>.<p>‘ದೇಶವು ಈಗ ವಿಪುಲ ಅವಕಾಶಗಳ ಹೊಸ್ತಿಲಲ್ಲಿದೆ. ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಹೊತ್ತುಕೊಳ್ಳಬೇಕು’ ಎಂದೂ ಪ್ರಧಾನಿ ಹೇಳಿದರು.</p>.<p>ಇದೇ ವೇಳೆ ಅವರು, ಬ್ಲಾಕ್ಚೈನ್ ಆಧಾರಿತ ಡಿಜಿಟಲ್ ವಿಷಯಗಳ ಪದವಿ ಕೋರ್ಸ್ಗಳಿಗೆ ಚಾಲನೆ ನೀಡಿದರು.</p>.<p>ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಪುರ:</strong> ‘ಮುಂದಿನ 25 ವರ್ಷಗಳಲ್ಲಿ ಭಾರತ ಯಾವ ರೀತಿ ಅಭಿವೃದ್ಧಿ ಹೊಂದಬೇಕು ಎಂದು ಬಯಸುತ್ತಿರೋ, ಅದನ್ನು ಸಾಧಿಸುವ ನಿಟ್ಟಿನಲ್ಲಿ ಈಗಿನಿಂದಲೇ ಐಐಟಿ ಪದವೀಧರರು ಕಾರ್ಯಪ್ರವೃತ್ತರಾಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.</p>.<p>ಐಐಟಿ–ಕಾನ್ಪುರದ 54ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಸಮಯವನ್ನು ವ್ಯರ್ಥ ಮಾಡಲಾಗಿದೆ. ನವ ಪದವೀಧರರುಅನುಕೂಲಗಳ ಬದಲಾಗಿ ಸವಾಲುಗಳನ್ನು ಆಯ್ಕೆ ಮಾಡಿಕೊಂಡು, ದೇಶದ ಚುಕ್ಕಾಣಿ ಹಿಡಿಯಲು ಮುಂದಾಗಬೇಕು’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/photo-of-pm-on-vaccination-certificate-in-wider-public-interest-goi-896792.html" itemprop="url">ಸಾರ್ವಜನಿಕ ಹಿತಾಸಕ್ತಿಗಾಗಿ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ: ಕೇಂದ್ರ </a></p>.<p>‘ಸ್ವಾತಂತ್ರ್ಯ ನಂತರ ಭಾರತವೂ ಹೊಸ ಪಯಣ ಆರಂಭಿಸಿದೆ. ಮುಂದಿನ 25 ವರ್ಷಗಳ ನಂತರ ದೇಶ ಸಂಪೂರ್ಣ ಸ್ವಾವಲಂಬಿಯಾಗಬೇಕು. ಈ ಗುರಿ ಸಾಧನೆಗೆ ಸಾಕಷ್ಟು ಕಾರ್ಯವಾಗಬೇಕಾಗುತ್ತದೆ. ಆದರೆ, ಎರಡು ಪೀಳಿಗೆಗಳನ್ನು ಕಂಡಿರುವ ದೇಶ, ಸಾಕಷ್ಟು ಸಮಯವನ್ನೂ ವ್ಯರ್ಥ ಮಾಡಿದೆ. ಇನ್ನು ಮುಂದೆ ಎರಡು ನಿಮಿಷವನ್ನು ಸಹ ನಾವು ವ್ಯರ್ಥ ಮಾಡಬಾರದು’ ಎಂದು ಅವರು ಹೇಳಿದರು.</p>.<p>‘ದೇಶವು ಈಗ ವಿಪುಲ ಅವಕಾಶಗಳ ಹೊಸ್ತಿಲಲ್ಲಿದೆ. ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಹೊತ್ತುಕೊಳ್ಳಬೇಕು’ ಎಂದೂ ಪ್ರಧಾನಿ ಹೇಳಿದರು.</p>.<p>ಇದೇ ವೇಳೆ ಅವರು, ಬ್ಲಾಕ್ಚೈನ್ ಆಧಾರಿತ ಡಿಜಿಟಲ್ ವಿಷಯಗಳ ಪದವಿ ಕೋರ್ಸ್ಗಳಿಗೆ ಚಾಲನೆ ನೀಡಿದರು.</p>.<p>ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>