ನವದೆಹಲಿ: ಕೋವಿಡ್ 19 ಪಾಸಿಟಿವ್ ಪ್ರಕರಣ ಹೆಚ್ಚಿರುವ ರಾಜ್ಯ ಮತ್ತು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಭೆ ನಡೆಸಲಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಮಾರ್ಗೋಪಾಯಗಳು, ಕೈಗೊಂಡ ಕ್ರಮಗಳು ಮತ್ತು ಮುಂದಿನ ಯೋಜನೆ ಕುರಿತು ಪ್ರಧಾನಿ ಜಿಲ್ಲಾಧಿಕಾರಿಗಳು ಚರ್ಚಿಸಲಿದ್ದಾರೆ. ನಗರ ಪ್ರದೇಶಕ್ಕಿಂತ, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸೋಂಕು ಪ್ರಕರಣ ವರದಿಯಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಕರ್ನಾಟಕ, ಬಿಹಾರ, ಅಸ್ಸಾಂ, ಚಂಡೀಗಢ, ತಮಿಳುನಾಡು, ಉತ್ತರಾಖಂಡ, ಮಧ್ಯ ಪ್ರದೇಶ, ಗೋವಾ, ಹಿಮಾಚಲ ಪ್ರದೇಶ ಮತ್ತು ದೆಹಲಿಯ ಜಿಲ್ಲಾಧಿಕಾರಿಗಳು ಪ್ರಧಾನಿ ಜತೆಗಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ.