ತಿರುವನಂತಪುರ: ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಫೆ. 27ರಂದು ಕೇರಳಕ್ಕೆ ಆಗಮಿಸಲಿದ್ದಾರೆ. ಇದು ಈ ವರ್ಷದಲ್ಲಿ ಅವರು ರಾಜ್ಯಕ್ಕೆ ಕೈಗೊಳ್ಳುವ ಮೂರನೇ ಪ್ರವಾಸವಾಗಿದೆ.
ಮಂಗಳವಾರ ರಾಜ್ಯ ರಾಜಧಾನಿ ತಿರುವನಂತಪುರಕ್ಕೆ ಆಗಮಿಸುವ ಅವರು, ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಇಲ್ಲಿನ ಸೆಂಟ್ರಲ್ ಮೈದಾನದಲ್ಲಿ ನಡೆಯುವ ರಾಜ್ಯ ಬಿಜೆಪಿ ಘಟಕದ ರಾಜ್ಯವ್ಯಾಪಿ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.