ಉತ್ತರಾಖಂಡದ ಆದಿ ಕೈಲಾಸ ಮತ್ತು ಪಾರ್ವತಿ ಕುಂಡಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಚಿತ್ರವನ್ನು ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ಅಮಿತಾಬ್ ಬಚ್ಚನ್, ತಾವು ಈ ಸ್ಥಳಗಳಿಗೆ ಭೇಟಿ ನೀಡಲು ಆಗದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದರು. ಬಚ್ಚನ್ ಅವರ ಈ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ಮೋದಿ, ಗುಜರಾತ್ನ ಕಛ್ಗೆ ಭೇಟಿ ನೀಡುವಂತೆ ಹೇಳಿದ್ದಾರೆ.