ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣ್‌ ಉತ್ಸವ, ಏಕತಾ ಪ್ರತಿಮೆಗೆ ಭೇಟಿ ನೀಡುವಂತೆ ಅಮಿತಾಬ್‌ ಬಚ್ಚನ್‌ಗೆ ಮೋದಿ ಸಲಹೆ

Published 15 ಅಕ್ಟೋಬರ್ 2023, 15:20 IST
Last Updated 15 ಅಕ್ಟೋಬರ್ 2023, 15:20 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್‌ನಲ್ಲಿ ನಡೆಯಲಿರುವ ರಣ್‌ ಉತ್ಸವ ಮತ್ತು ಏಕತಾ ಪ್ರತಿಮೆಗೆ ಭೇಟಿ ನೀಡುವಂತೆ ಬಾಲಿವುಡ್‌ ನಟ ಅಮಿತಾಬ್‌ ಬಚ್ಚನ್‌ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಸಲಹೆ ನೀಡಿದ್ದಾರೆ.

ಉತ್ತರಾಖಂಡದ ಆದಿ ಕೈಲಾಸ ಮತ್ತು ಪಾರ್ವತಿ ಕುಂಡಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಚಿತ್ರವನ್ನು ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಅಮಿತಾಬ್‌ ಬಚ್ಚನ್‌, ತಾವು ಈ ಸ್ಥಳಗಳಿಗೆ ಭೇಟಿ ನೀಡಲು ಆಗದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದರು. ಬಚ್ಚನ್‌ ಅವರ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಮೋದಿ, ಗುಜರಾತ್‌ನ ಕಛ್‌ಗೆ ಭೇಟಿ ನೀಡುವಂತೆ ಹೇಳಿದ್ದಾರೆ. 

‘ಮುಂದಿನ ವಾರ ಕಛ್‌ನಲ್ಲಿ ರಣ್‌ ಉತ್ಸವ ನಡೆಯಲಿದೆ. ನೀವು ಅಲ್ಲಿಗೆ ಭೇಟಿ ನೀಡಬೇಕು. ಜತೆಗೆ ಏಕತಾ ಪ್ರತಿಮೆಗೆ ಭೇಟಿ ನೀಡುವುದೂ ಬಾಕಿ ಇದೆ‘ ಎಂದು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT