ನವದೆಹಲಿ: ಆಂಧ್ರ ಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಾಲಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದಾರೆ.
ದೇವಾಲಯದಲ್ಲಿ ಆರತಿ ಬೆಳಗಿ, ಪ್ರಾರ್ಥನೆ ಸಲ್ಲಿಸಿದ ಬಳಿಕ ಅಲ್ಲಿಯೇ ಕುಳಿತು ರಾಮ ಭಜನೆಯನ್ನು ಹಾಡಿದ್ದಾರೆ.
ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಗೂ ಮುನ್ನ ಮೋದಿ ಈ ಪ್ರವಾಸ ಕೈಗೊಂಡಿದ್ದಾರೆ. ಆಂಧ್ರಪ್ರದೇಶ ಮತ್ತು ಕೇರಳ ಪ್ರವಾಸದಲ್ಲಿರುವ ಮೋದಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬುಧವಾರ ಕೇರಳದ ಗುರುವಾಯೂರು ಮತ್ತು ತ್ರಿಪ್ರಯಾರದ ಶ್ರೀ ರಾಮಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.