ಅಯೋಧ್ಯೆ (ಉತ್ತರ ಪ್ರದೇಶ): ದೀಪಾವಳಿ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ನಡೆಯುವ ದೀಪೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿಯಾಗಲಿದ್ದಾರೆ.
ದೀಪಾವಳಿಯ ಮುನ್ನಾದಿನ ಅಕ್ಟೋಬರ್ 23ರಂದು ಪ್ರಧಾನಿ ಮೋದಿಯವರು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಜನ್ಮಭೂಮಿಗೆ (ರಾಮ ಮಂದಿರ) ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿಗಳ ಕಚೇರಿ ಮಾಹಿತಿ ನೀಡಿದೆ.
PM Modi will witness aarti at New Ghat, Saryu river, which will be followed by the kickstart of the grand Deepotsav celebrations by the Prime Minister: PMO
ಈ ಬಾರಿಯ ದೀಪೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿರುವ ಉತ್ತರ ಪ್ರದೇಶ ಸರ್ಕಾರ, ಭರದ ಸಿದ್ಧತೆ ನಡೆಸಿದೆ.
ಗಿನ್ನಿಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ 12 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸುವ ಗುರಿಯನ್ನು ಹೊಂದಲಾಗಿದೆ. ಈ ಉದ್ದೇಶದಿಂದ ಅಯೋಧ್ಯೆ, ಲಖನೌ, ಗೊಂಡಾ ಮತ್ತಿತರ ಜಿಲ್ಲೆಗಳಿಂದ ಮಣ್ಣಿನ ದೀಪಗಳನ್ನು ತರಿಸಲಾಗುತ್ತಿದೆ
ಈಗಾಗಲೇ ದೀಪಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಬಾರಿ ದೀಪೋತ್ಸವವನ್ನು ಕಳೆದ ಐದು ವರ್ಷಗಳಿಗಿಂತ ಭಿನ್ನವಾಗಿ ಆಚರಿಸಲಾಗುತ್ತಿದೆ. ಈ ವರ್ಷ 30 ನಿಮಿಷಕ್ಕೂ ಹೆಚ್ಚು ಕಾಲ ದೀಪಗಳು ಉರಿಯಲಿವೆ. ಈಗ ಜನರು ದೀಪಗಳು ಹೆಚ್ಚು ಕಾಲ ಉರಿಯುವುದನ್ನು ವೀಕ್ಷಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಕಳೆದ ವರ್ಷ ದೀಪೋತ್ಸವದಲ್ಲಿ 9 ಲಕ್ಷ ದೀಪಗಳನ್ನು ಬೆಳಗಿಸಲಾಗಿತ್ತು.