ಗುರುವಾರ ರಾತ್ರಿ ಬಿದ್ದು ಗಾಯಗೊಂಡಿರುವ ರಾವ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
‘ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರಿಗೆ ಗಾಯವಾಗಿದೆ ಎಂದು ತಿಳಿದು ಬೇಸರವಾಗಿದೆ. ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹೈದರಾಬಾದ್ನ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾವ್ ಅವರ ಮೂಳೆ ಮುರಿದಿರುವ ಶಂಕೆಗಳಿವೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.
69 ವರ್ಷದ ಬಿಆರ್ಎಸ್ ಅಧ್ಯಕ್ಷ ರಾವ್ ಅವರ ಸ್ಥಿತಿಯನ್ನು ವೈದ್ಯರು ಪರೀಕ್ಷಿಸುತ್ತಿದ್ದಾರೆ, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿರಬಹುದು ಎಂದು ಮೂಲಗಳು ಹೇಳಿವೆ.