<p><strong>ನವದೆಹಲಿ:</strong> ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧದ ವಾಗ್ದಾಳಿಯನ್ನು ಮಂಗಳವಾರವೂ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷದ ಕೆಲವರು 1947ರ ಬಳಿಕವೇ ಭಾರತ ಉದಯಿಸಿರುವುದಾಗಿ ಭಾವಿಸಿದ್ದಾರೆ ಎಂದು ಹೇಳಿದ್ದಾರೆ.</p>.<p>‘ಪ್ರಜಾಪ್ರಭುತ್ವ ಮತ್ತು ಚರ್ಚೆಗಳು ಶತಮಾನಗಳಿಂದ ಭಾರತದ ಅಂಗವಾಗಿವೆ. ಭಾರತ ಎಂಬುದು ಕಾಂಗ್ರೆಸ್ನ ಕೃಪೆಯಲ್ಲ’ ಎಂದು ಮೋದಿ ಹೇಳಿದ್ದಾರೆ.</p>.<p>ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿದ ಮೋದಿ, ಕುಟುಂಬ ರಾಜಕಾರಣವು ಪ್ರಜಾಪ್ರಭುತ್ವಕ್ಕೆ ತಗುಲಬಹುದಾದ ಅತಿಕೆಟ್ಟ ಅಂಶ. ದೇಶದ ಮೇಲೆ ಒಂದು ಕುಟುಂಬ ಪ್ರಾಬಲ್ಯ ಸಾಧಿಸಿದಾಗ ದೊಡ್ಡ ಅಪಾಯವಿದೆ ಎಂದು ಹೇಳಿದ್ದಾರೆ.</p>.<p><a href="https://www.prajavani.net/india-news/after-losing-so-many-elections-there-is-no-change-in-congress-ahankaar-ego-pm-modi-in-lok-sabha-908802.html" itemprop="url">ಚುನಾವಣೆಗಳಲ್ಲಿ ಸೋತರೂ ಕಾಂಗ್ರೆಸ್ನ ಅಹಂಕಾರ ಕಡಿಮೆಯಾಗಿಲ್ಲ: ಮೋದಿ </a></p>.<p>ತನ್ನ ಹಿರಿಯರು ಮಾಡಿರುವ ತಪ್ಪುಗಳ ಆಧಾರದಲ್ಲಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಪಕ್ಷವು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಮೋದಿ ಟೀಕಿಸಿದ್ದಾರೆ.</p>.<p>ಮೋದಿ ಅವರು ವಾಗ್ದಾಳಿ ಮುಂದುವರಿಸುತ್ತಿದ್ದಂತೆಯೇ, ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರನಡೆದರು.</p>.<p>ಸೋಮವಾರ ಲೋಕಭೆಯಲ್ಲಿಯೂ ಪ್ರಧಾನಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.</p>.<p>‘ಕಾಂಗ್ರೆಸ್ ಪಕ್ಷದ್ದು ಒಡೆದು ಆಳುವ ನೀತಿ. ಅದೇ ಕಾರಣಕ್ಕೆ ಈಗ ಅದು ‘ತುಕ್ಡೆ ತುಕ್ಡೆ ಗ್ಯಾಂಗ್’ಗೆ ನಾಯಕನಾಗಿದೆ. ಆ ಪಕ್ಷದ ಮುಖಂಡರ ಹೇಳಿಕೆ, ನಡವಳಿಕೆ ಗಮನಿಸಿದರೆ 100 ವರ್ಷ ಅಧಿಕಾರದಿಂದ ದೂರವಿರಲು ನಿರ್ಧರಿಸಿದಂತಿದೆ. ಹಲವು ಚುನಾವಣೆಗಳಲ್ಲಿ ಸೋತ ಬಳಿಕವೂ ಕಾಂಗ್ರೆಸ್ 'ಅಹಂಕಾರ'ದಲ್ಲಿ ಕಡಿಮೆ ಆಗಿಲ್ಲ‘ ಎಂದು ಲೋಕಸಭೆಯಲ್ಲಿ ಮೋದಿ ಹೇಳಿದ್ದರು.</p>.<p><a href="https://www.prajavani.net/india-news/pm-slams-cong-and-says-it-is-indulging-in-blind-opposition-908869.html" itemprop="url">ಕಾಂಗ್ರೆಸ್ ತುಕ್ಡೆ, ತುಕ್ಡೆ ಗ್ಯಾಂಗ್ನ ನಾಯಕ: ಲೋಕಸಭೆಯಲ್ಲಿ ಪ್ರಧಾನಿ ಟೀಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧದ ವಾಗ್ದಾಳಿಯನ್ನು ಮಂಗಳವಾರವೂ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷದ ಕೆಲವರು 1947ರ ಬಳಿಕವೇ ಭಾರತ ಉದಯಿಸಿರುವುದಾಗಿ ಭಾವಿಸಿದ್ದಾರೆ ಎಂದು ಹೇಳಿದ್ದಾರೆ.</p>.<p>‘ಪ್ರಜಾಪ್ರಭುತ್ವ ಮತ್ತು ಚರ್ಚೆಗಳು ಶತಮಾನಗಳಿಂದ ಭಾರತದ ಅಂಗವಾಗಿವೆ. ಭಾರತ ಎಂಬುದು ಕಾಂಗ್ರೆಸ್ನ ಕೃಪೆಯಲ್ಲ’ ಎಂದು ಮೋದಿ ಹೇಳಿದ್ದಾರೆ.</p>.<p>ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿದ ಮೋದಿ, ಕುಟುಂಬ ರಾಜಕಾರಣವು ಪ್ರಜಾಪ್ರಭುತ್ವಕ್ಕೆ ತಗುಲಬಹುದಾದ ಅತಿಕೆಟ್ಟ ಅಂಶ. ದೇಶದ ಮೇಲೆ ಒಂದು ಕುಟುಂಬ ಪ್ರಾಬಲ್ಯ ಸಾಧಿಸಿದಾಗ ದೊಡ್ಡ ಅಪಾಯವಿದೆ ಎಂದು ಹೇಳಿದ್ದಾರೆ.</p>.<p><a href="https://www.prajavani.net/india-news/after-losing-so-many-elections-there-is-no-change-in-congress-ahankaar-ego-pm-modi-in-lok-sabha-908802.html" itemprop="url">ಚುನಾವಣೆಗಳಲ್ಲಿ ಸೋತರೂ ಕಾಂಗ್ರೆಸ್ನ ಅಹಂಕಾರ ಕಡಿಮೆಯಾಗಿಲ್ಲ: ಮೋದಿ </a></p>.<p>ತನ್ನ ಹಿರಿಯರು ಮಾಡಿರುವ ತಪ್ಪುಗಳ ಆಧಾರದಲ್ಲಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಪಕ್ಷವು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಮೋದಿ ಟೀಕಿಸಿದ್ದಾರೆ.</p>.<p>ಮೋದಿ ಅವರು ವಾಗ್ದಾಳಿ ಮುಂದುವರಿಸುತ್ತಿದ್ದಂತೆಯೇ, ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರನಡೆದರು.</p>.<p>ಸೋಮವಾರ ಲೋಕಭೆಯಲ್ಲಿಯೂ ಪ್ರಧಾನಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.</p>.<p>‘ಕಾಂಗ್ರೆಸ್ ಪಕ್ಷದ್ದು ಒಡೆದು ಆಳುವ ನೀತಿ. ಅದೇ ಕಾರಣಕ್ಕೆ ಈಗ ಅದು ‘ತುಕ್ಡೆ ತುಕ್ಡೆ ಗ್ಯಾಂಗ್’ಗೆ ನಾಯಕನಾಗಿದೆ. ಆ ಪಕ್ಷದ ಮುಖಂಡರ ಹೇಳಿಕೆ, ನಡವಳಿಕೆ ಗಮನಿಸಿದರೆ 100 ವರ್ಷ ಅಧಿಕಾರದಿಂದ ದೂರವಿರಲು ನಿರ್ಧರಿಸಿದಂತಿದೆ. ಹಲವು ಚುನಾವಣೆಗಳಲ್ಲಿ ಸೋತ ಬಳಿಕವೂ ಕಾಂಗ್ರೆಸ್ 'ಅಹಂಕಾರ'ದಲ್ಲಿ ಕಡಿಮೆ ಆಗಿಲ್ಲ‘ ಎಂದು ಲೋಕಸಭೆಯಲ್ಲಿ ಮೋದಿ ಹೇಳಿದ್ದರು.</p>.<p><a href="https://www.prajavani.net/india-news/pm-slams-cong-and-says-it-is-indulging-in-blind-opposition-908869.html" itemprop="url">ಕಾಂಗ್ರೆಸ್ ತುಕ್ಡೆ, ತುಕ್ಡೆ ಗ್ಯಾಂಗ್ನ ನಾಯಕ: ಲೋಕಸಭೆಯಲ್ಲಿ ಪ್ರಧಾನಿ ಟೀಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>