<p><strong>ಶ್ರೀಶೈಲಂ:</strong> ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.</p><p>ಪ್ರಧಾನಿ ಅವರಿಗೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಅವರು ಸಾಥ್ ನೀಡಿದರು.</p><p>ಮೋದಿ ಅವರು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಿಯಲ್ಲಿ ಪಂಚಾಮೃತದೊಂದಿಗೆ ವಿಶೇಷ ರುದ್ರಾಭಿಷೇಕ ಪೂಜೆ ನೆರವೇರಿಸಿದರು.</p><p>ದೇಶದಲ್ಲಿರುವ 12 ಜ್ಯೋತೀರ್ಲಿಂಗಗಳಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವೂ ಒಂದು.</p><p>ಇದೇ ವೇಳೆ ಮೋದಿ ಅವರು ದೇವಾಲಯದ ಆವರಣದಲ್ಲಿ ನಿರ್ಮಿಸಿರುವ ಶಿವಾಜಿ ಸ್ಫೂರ್ತಿ ಕೇಂದ್ರಕ್ಕೆ ತೆರಳಿ ಧ್ಯಾನ ಮಾಡಿದರು. 1677ರಲ್ಲಿ ಮರಾಠ ದೊರೆ ಶಿವಾಜಿ ಅವರು ಈ ದೇವಸ್ಥಾನಕ್ಕೆ ಭೇಟಿ ನೀಡಿದ ಸ್ಮರಣಾರ್ಥ ಸ್ಫೂರ್ತಿ ಕೇಂದ್ರ ನಿರ್ಮಿಸಲಾಗಿದೆ.</p><p>ಕರ್ನೂಲ್ ಜಿಲ್ಲೆಯಲ್ಲಿ ಇಂದು ಆಂಧ್ರ ಸರ್ಕಾರದಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೋದಿ ಅವರು ಆಂಧ್ರ ಭೇಟಿ ಕೈಗೊಂಡಿದ್ದಾರೆ.</p><p>ದೇವಸ್ಥಾನಕ್ಕೂ ತೆರಳುವ ಮುನ್ನ ಕರ್ನೂಲ್ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಸಿಎಂ ನಾಯ್ಡು, ಡಿಸಿಎಂ ಸೇರಿದಂತೆ ಹಲವು ಗಣ್ಯರು ಬರಮಾಡಿಕೊಂಡರು.</p><p>ಜಿಎಸ್ಟಿ ಕಡಿತದ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಆಂಧ್ರ ಸರ್ಕಾರ ಕೈಗೊಂಡಿರುವ ವಿಶೇಷ ಅಭಿಯಾನವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀಶೈಲಂ:</strong> ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.</p><p>ಪ್ರಧಾನಿ ಅವರಿಗೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಅವರು ಸಾಥ್ ನೀಡಿದರು.</p><p>ಮೋದಿ ಅವರು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಿಯಲ್ಲಿ ಪಂಚಾಮೃತದೊಂದಿಗೆ ವಿಶೇಷ ರುದ್ರಾಭಿಷೇಕ ಪೂಜೆ ನೆರವೇರಿಸಿದರು.</p><p>ದೇಶದಲ್ಲಿರುವ 12 ಜ್ಯೋತೀರ್ಲಿಂಗಗಳಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವೂ ಒಂದು.</p><p>ಇದೇ ವೇಳೆ ಮೋದಿ ಅವರು ದೇವಾಲಯದ ಆವರಣದಲ್ಲಿ ನಿರ್ಮಿಸಿರುವ ಶಿವಾಜಿ ಸ್ಫೂರ್ತಿ ಕೇಂದ್ರಕ್ಕೆ ತೆರಳಿ ಧ್ಯಾನ ಮಾಡಿದರು. 1677ರಲ್ಲಿ ಮರಾಠ ದೊರೆ ಶಿವಾಜಿ ಅವರು ಈ ದೇವಸ್ಥಾನಕ್ಕೆ ಭೇಟಿ ನೀಡಿದ ಸ್ಮರಣಾರ್ಥ ಸ್ಫೂರ್ತಿ ಕೇಂದ್ರ ನಿರ್ಮಿಸಲಾಗಿದೆ.</p><p>ಕರ್ನೂಲ್ ಜಿಲ್ಲೆಯಲ್ಲಿ ಇಂದು ಆಂಧ್ರ ಸರ್ಕಾರದಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೋದಿ ಅವರು ಆಂಧ್ರ ಭೇಟಿ ಕೈಗೊಂಡಿದ್ದಾರೆ.</p><p>ದೇವಸ್ಥಾನಕ್ಕೂ ತೆರಳುವ ಮುನ್ನ ಕರ್ನೂಲ್ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಸಿಎಂ ನಾಯ್ಡು, ಡಿಸಿಎಂ ಸೇರಿದಂತೆ ಹಲವು ಗಣ್ಯರು ಬರಮಾಡಿಕೊಂಡರು.</p><p>ಜಿಎಸ್ಟಿ ಕಡಿತದ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಆಂಧ್ರ ಸರ್ಕಾರ ಕೈಗೊಂಡಿರುವ ವಿಶೇಷ ಅಭಿಯಾನವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>