<p><strong>ಲಖನೌ:</strong> ಹಿಂದಿನ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಆ ಸರ್ಕಾರದ ತಪ್ಪು ನೀತಿಗಳು ಹಾಗೂ ದುರುದ್ದೇಶದಿಂದಾಗಿ ಬಡವರು ಸಂಕಷ್ಟ ಅನುಭವಿಸಿದ್ದರು’ ಎಂದಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ 6.1 ಲಕ್ಷ ಫಲಾನುಭವಿಗಳಿಗೆ ₹2,691 ಕೋಟಿ ಆರ್ಥಿಕ ನೆರವು ಬಿಡುಗಡೆಗೊಳಿಸಿದ ಮೋದಿ, ‘ತಮಗೊಂದು ಸೂರು ನಿರ್ಮಾಣ ಮಾಡಲು ಸರ್ಕಾರ ಸಹಾಯ ಮಾಡುತ್ತದೆ ಎನ್ನುವ ನಂಬಿಕೆ ಈ ಹಿಂದೆ ಜನರಿಗೆ ಇರಲಿಲ್ಲ. 2016ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಾರಂಭವಾದಾಗ ಇದರ ಲಾಭವನ್ನು ಪಡೆಯಲು ಅಂದು ರಾಜ್ಯದಲ್ಲಿ ಆಡಳಿತದಲ್ಲಿ ಇದ್ದ ಸಮಾಜವಾದಿ ಪಕ್ಷವು ಸಂಪೂರ್ಣ ವಿಫಲವಾಗಿತ್ತು’ ಎಂದು ಆರೋಪಿಸಿದರು.</p>.<p>‘ಕೇಂದ್ರ ಸರ್ಕಾರವು ಹಲವು ಬಾರಿ ಮನವಿ ಮಾಡಿದರೂ, ಅಂದು ಆಡಳಿತದಲ್ಲಿದ್ದ ಸಮಾಜವಾದಿ ಪಕ್ಷವು ಫಲಾನುಭವಿಗಳ ಪಟ್ಟಿಯನ್ನೇ ಕಳುಹಿಸಿಕೊಟ್ಟಿರಲಿಲ್ಲ. ನಾವು ಹಣಕಾಸು ನೆರವು ನೀಡಲು ತಯಾರಿದ್ದೆವು. ಆದರೆ ನಮ್ಮ ಮನವಿ, ಪತ್ರಗಳನ್ನು ಸರ್ಕಾರವು ನಿರ್ಲಕ್ಷಿಸಿತ್ತು. ಅಂದಿನ ಸರ್ಕಾರದ ಈ ನಡೆಯನ್ನು ಬಡಜನರು ಇನ್ನೂ ಮರೆತಿಲ್ಲ’ ಎಂದರು. ‘ಯೋಗಿ ಆದಿತ್ಯನಾಥ್ ಅವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದು, ಕೇಂದ್ರದ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸುವ ಮುಖಾಂತರ ರಾಜ್ಯಕ್ಕೆ ಹೊಸ ಗುರುತು ನೀಡಿದ್ದಾರೆ’ ಎಂದರು.</p>.<p>ಇದೇ ವೇಳೆ ಚಿತ್ರಕೂಟ, ವಾರಾಣಸಿ, ಅಯೋಧ್ಯೆ ಸೇರಿದಂತೆ ಹಲವು ಜಿಲ್ಲೆಗಳ ಫಲಾನುಭವಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮುಖಾಂತರವೇ ಮೋದಿ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಹಿಂದಿನ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಆ ಸರ್ಕಾರದ ತಪ್ಪು ನೀತಿಗಳು ಹಾಗೂ ದುರುದ್ದೇಶದಿಂದಾಗಿ ಬಡವರು ಸಂಕಷ್ಟ ಅನುಭವಿಸಿದ್ದರು’ ಎಂದಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ 6.1 ಲಕ್ಷ ಫಲಾನುಭವಿಗಳಿಗೆ ₹2,691 ಕೋಟಿ ಆರ್ಥಿಕ ನೆರವು ಬಿಡುಗಡೆಗೊಳಿಸಿದ ಮೋದಿ, ‘ತಮಗೊಂದು ಸೂರು ನಿರ್ಮಾಣ ಮಾಡಲು ಸರ್ಕಾರ ಸಹಾಯ ಮಾಡುತ್ತದೆ ಎನ್ನುವ ನಂಬಿಕೆ ಈ ಹಿಂದೆ ಜನರಿಗೆ ಇರಲಿಲ್ಲ. 2016ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಾರಂಭವಾದಾಗ ಇದರ ಲಾಭವನ್ನು ಪಡೆಯಲು ಅಂದು ರಾಜ್ಯದಲ್ಲಿ ಆಡಳಿತದಲ್ಲಿ ಇದ್ದ ಸಮಾಜವಾದಿ ಪಕ್ಷವು ಸಂಪೂರ್ಣ ವಿಫಲವಾಗಿತ್ತು’ ಎಂದು ಆರೋಪಿಸಿದರು.</p>.<p>‘ಕೇಂದ್ರ ಸರ್ಕಾರವು ಹಲವು ಬಾರಿ ಮನವಿ ಮಾಡಿದರೂ, ಅಂದು ಆಡಳಿತದಲ್ಲಿದ್ದ ಸಮಾಜವಾದಿ ಪಕ್ಷವು ಫಲಾನುಭವಿಗಳ ಪಟ್ಟಿಯನ್ನೇ ಕಳುಹಿಸಿಕೊಟ್ಟಿರಲಿಲ್ಲ. ನಾವು ಹಣಕಾಸು ನೆರವು ನೀಡಲು ತಯಾರಿದ್ದೆವು. ಆದರೆ ನಮ್ಮ ಮನವಿ, ಪತ್ರಗಳನ್ನು ಸರ್ಕಾರವು ನಿರ್ಲಕ್ಷಿಸಿತ್ತು. ಅಂದಿನ ಸರ್ಕಾರದ ಈ ನಡೆಯನ್ನು ಬಡಜನರು ಇನ್ನೂ ಮರೆತಿಲ್ಲ’ ಎಂದರು. ‘ಯೋಗಿ ಆದಿತ್ಯನಾಥ್ ಅವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದು, ಕೇಂದ್ರದ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸುವ ಮುಖಾಂತರ ರಾಜ್ಯಕ್ಕೆ ಹೊಸ ಗುರುತು ನೀಡಿದ್ದಾರೆ’ ಎಂದರು.</p>.<p>ಇದೇ ವೇಳೆ ಚಿತ್ರಕೂಟ, ವಾರಾಣಸಿ, ಅಯೋಧ್ಯೆ ಸೇರಿದಂತೆ ಹಲವು ಜಿಲ್ಲೆಗಳ ಫಲಾನುಭವಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮುಖಾಂತರವೇ ಮೋದಿ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>