<p><strong>ನವದೆಹಲಿ:</strong> ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಹಾಗೂ ಕಾರ್ಯಕರ್ತರು ಮಂಗಳವಾರ ಪ್ರತಿಭಟಿಸಿದರು.</p><p>ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕುವುದಕ್ಕಾಗಿ ಮೆರವಣಿಗೆಯಲ್ಲಿ ಹೊರಟಿದ್ದ ಪ್ರತಿಭಟನಕಾರರನ್ನು ಪೊಲೀಸರು ಪಟೇಲ್ ಚೌಕದಲ್ಲಿ ವಶಕ್ಕೆ ಪಡೆದರು. ಮೆರವಣಿಗೆಯುದ್ದಕ್ಕೂ ಪ್ರತಿಭಟನಕಾರರು ‘ಇನ್ಕ್ವಿಲಾಬ್ ಜಿಂದಾಬಾದ್’ ಹಾಗೂ ‘ಕೇಜ್ರಿವಾಲ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದರು.</p><p>ಎಎಪಿಯ ದೆಹಲಿ ಘಟಕದ ಸಂಚಾಲಕ ಗೋಪಾಲ್ ರಾಯ್, ಹಿರಿಯ ನಾಯಕರಾದ ಸೋಮನಾಥ್ ಭಾರ್ತಿ, ದೆಹಲಿ ವಿಧಾನ ಸಭೆಯ ಡೆಪ್ಯುಟಿ ಸ್ಪೀಕರ್ ರಾಖಿ ಬಿರ್ಲಾ, ಪಂಜಾಬ್ ಸಚಿವ ಹರ್ಜೋತ್ ಸಿಂಗ್ ಬೇಬ್ಸ್ ಮತ್ತಿತರರು ಪೊಲೀಸರು ವಶಕ್ಕೆ ತೆಗೆದುಕೊಂಡ ನಾಯಕರಲ್ಲಿ ಪ್ರಮುಖರು.</p><p>ನಂತರ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ದೆಹಲಿ ಘಟಕದ ಸಂಚಾಲಕ ಗೋಪಾಲ್ ರಾಯ್,‘ದೆಹಲಿಯಾದ್ಯಂತ ಕೇಂದ್ರ ಸರ್ಕಾರ ಸೆಕ್ಷನ್ 144ರಡಿ ನಿಷೇಧಾಜ್ಞೆ ಹೇರಿದೆ. ಈಗ ದೆಹಲಿ ‘ಪೊಲೀಸ್ ರಾಜ್ಯ’ವಾಗಿ ಪರಿವರ್ತನೆಯಾಗಿದೆ’ ಎಂದರು.</p><p>‘ಪೊಲೀಸ್ ಬಲ ಬಳಸಿಕೊಳ್ಳುವ ಮೂಲಕ ಈ ಚಳವಳಿಯನ್ನು ನಿಲ್ಲಿಸಲು ಸಾಧ್ಯ ಇಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಪಕ್ಷದ ಮಹಿಳಾ ಕಾರ್ಯಕರ್ತರನ್ನು ಸಹ ಎಳೆದಾಡಿ, ವಶಕ್ಕೆ ಪಡೆಯಲಾಗಿದೆ’ ಎಂದರು.</p><p>‘ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಪ್ರೀತಿಸುವವರು ಈ ದೇಶದಲ್ಲಿ ವಿಜೃಂಭಿಸುತ್ತಿರುವ ಸರ್ವಾಧಿಕಾರಿ ಧೋರಣೆಯ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 31ರಂದು ರಾಮಲೀಲಾ ಮೈದಾನದಲ್ಲಿ ‘ಮಹಾರ್ಯಾಲಿ’ ನಡೆಸುವುದಕ್ಕೆ ಸಿದ್ಧತೆಗಳು ನಡೆಯುತ್ತಿವೆ’ ಎಂದು ಹೇಳಿದರು.</p><p>‘ಈ ರ್ಯಾಲಿಯಲ್ಲಿ ಲಕ್ಷಾಂತರ ಜನರು, ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ನಾಯಕರು ಪಾಲ್ಗೊಂಡು, ಕೇಜ್ರಿವಾಲ್ ಬಂಧನದ ವಿರುದ್ಧ ಧ್ವನಿ ಎತ್ತಲಿದ್ದಾರೆ’ ಎಂದೂ ರಾಯ್ ಹೇಳಿದರು.</p><p>ಭಾರಿ ಭದ್ರತೆ: ಎಎಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.</p><p>ಅದರಲ್ಲೂ, ಪ್ರಧಾನಿ ನಿವಾಸ, ಕೇಂದ್ರೀಯ ದೆಹಲಿಯಲ್ಲಿ ಪೊಲೀಸರಲ್ಲದೇ, ಅರೆಸೇನಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.</p><p>ಲೋಕ ಕಲ್ಯಾಣ ಮಾರ್ಗದ ಮೆಟ್ರೊ ನಿಲ್ದಾಣವನ್ನು ಮುಚ್ಚಲಾಗಿತ್ತು. ಪಟೇಲ್ ಚೌಕ್ ಬಳಿಯ ಮೆಟ್ರೊ ನಿಲ್ದಾಣದಲ್ಲಿ ಪ್ರವೇಶ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿತ್ತು.</p><p>ಇದಕ್ಕೂ ಮುನ್ನ, ಪಟೇಲ್ ಚೌಕ್ ಬಳಿ ಪ್ರತಿಭಟನೆಗಾಗಿ ಜಮಾವಣೆಗೊಳ್ಳುವವರನ್ನು ಬಂಧಿಸಲಾಗುವುದು ಎಂದು ಡಿಸಿಪಿ (ನವದೆಹಲಿ) ದವೇಶ್ ಕುಮಾರ್ ಎಚ್ಚರಿಸಿದ್ದರು.</p>.ಇ.ಡಿ ಕಸ್ಟಡಿಯಿಂದ ಮತ್ತೊಂದು ನಿರ್ದೇಶನ ನೀಡಿದ ಕೇಜ್ರಿವಾಲ್ .ಕೇಜ್ರಿವಾಲ್ ಬಂಧನಕ್ಕೆ ಖಂಡನೆ: ಮೋದಿ ನಿವಾಸಕ್ಕೆ ಮುತ್ತಿಗೆ ಕರೆ, ಬಿಗಿ ಭದ್ರತೆ.ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಹರಿಯಾಣ ಘಟಕದಿಂದ ಪ್ರತಿಭಟನೆ.ಕೇಜ್ರಿವಾಲ್ ಬಂಧನ ಖಂಡಿಸಿ ಮಾ.26ಕ್ಕೆ ಪ್ರಧಾನಿ ನಿವಾಸಕ್ಕೆ ಘೇರಾವ್: ಎಎಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಹಾಗೂ ಕಾರ್ಯಕರ್ತರು ಮಂಗಳವಾರ ಪ್ರತಿಭಟಿಸಿದರು.</p><p>ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕುವುದಕ್ಕಾಗಿ ಮೆರವಣಿಗೆಯಲ್ಲಿ ಹೊರಟಿದ್ದ ಪ್ರತಿಭಟನಕಾರರನ್ನು ಪೊಲೀಸರು ಪಟೇಲ್ ಚೌಕದಲ್ಲಿ ವಶಕ್ಕೆ ಪಡೆದರು. ಮೆರವಣಿಗೆಯುದ್ದಕ್ಕೂ ಪ್ರತಿಭಟನಕಾರರು ‘ಇನ್ಕ್ವಿಲಾಬ್ ಜಿಂದಾಬಾದ್’ ಹಾಗೂ ‘ಕೇಜ್ರಿವಾಲ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದರು.</p><p>ಎಎಪಿಯ ದೆಹಲಿ ಘಟಕದ ಸಂಚಾಲಕ ಗೋಪಾಲ್ ರಾಯ್, ಹಿರಿಯ ನಾಯಕರಾದ ಸೋಮನಾಥ್ ಭಾರ್ತಿ, ದೆಹಲಿ ವಿಧಾನ ಸಭೆಯ ಡೆಪ್ಯುಟಿ ಸ್ಪೀಕರ್ ರಾಖಿ ಬಿರ್ಲಾ, ಪಂಜಾಬ್ ಸಚಿವ ಹರ್ಜೋತ್ ಸಿಂಗ್ ಬೇಬ್ಸ್ ಮತ್ತಿತರರು ಪೊಲೀಸರು ವಶಕ್ಕೆ ತೆಗೆದುಕೊಂಡ ನಾಯಕರಲ್ಲಿ ಪ್ರಮುಖರು.</p><p>ನಂತರ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ದೆಹಲಿ ಘಟಕದ ಸಂಚಾಲಕ ಗೋಪಾಲ್ ರಾಯ್,‘ದೆಹಲಿಯಾದ್ಯಂತ ಕೇಂದ್ರ ಸರ್ಕಾರ ಸೆಕ್ಷನ್ 144ರಡಿ ನಿಷೇಧಾಜ್ಞೆ ಹೇರಿದೆ. ಈಗ ದೆಹಲಿ ‘ಪೊಲೀಸ್ ರಾಜ್ಯ’ವಾಗಿ ಪರಿವರ್ತನೆಯಾಗಿದೆ’ ಎಂದರು.</p><p>‘ಪೊಲೀಸ್ ಬಲ ಬಳಸಿಕೊಳ್ಳುವ ಮೂಲಕ ಈ ಚಳವಳಿಯನ್ನು ನಿಲ್ಲಿಸಲು ಸಾಧ್ಯ ಇಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಪಕ್ಷದ ಮಹಿಳಾ ಕಾರ್ಯಕರ್ತರನ್ನು ಸಹ ಎಳೆದಾಡಿ, ವಶಕ್ಕೆ ಪಡೆಯಲಾಗಿದೆ’ ಎಂದರು.</p><p>‘ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಪ್ರೀತಿಸುವವರು ಈ ದೇಶದಲ್ಲಿ ವಿಜೃಂಭಿಸುತ್ತಿರುವ ಸರ್ವಾಧಿಕಾರಿ ಧೋರಣೆಯ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 31ರಂದು ರಾಮಲೀಲಾ ಮೈದಾನದಲ್ಲಿ ‘ಮಹಾರ್ಯಾಲಿ’ ನಡೆಸುವುದಕ್ಕೆ ಸಿದ್ಧತೆಗಳು ನಡೆಯುತ್ತಿವೆ’ ಎಂದು ಹೇಳಿದರು.</p><p>‘ಈ ರ್ಯಾಲಿಯಲ್ಲಿ ಲಕ್ಷಾಂತರ ಜನರು, ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ನಾಯಕರು ಪಾಲ್ಗೊಂಡು, ಕೇಜ್ರಿವಾಲ್ ಬಂಧನದ ವಿರುದ್ಧ ಧ್ವನಿ ಎತ್ತಲಿದ್ದಾರೆ’ ಎಂದೂ ರಾಯ್ ಹೇಳಿದರು.</p><p>ಭಾರಿ ಭದ್ರತೆ: ಎಎಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.</p><p>ಅದರಲ್ಲೂ, ಪ್ರಧಾನಿ ನಿವಾಸ, ಕೇಂದ್ರೀಯ ದೆಹಲಿಯಲ್ಲಿ ಪೊಲೀಸರಲ್ಲದೇ, ಅರೆಸೇನಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.</p><p>ಲೋಕ ಕಲ್ಯಾಣ ಮಾರ್ಗದ ಮೆಟ್ರೊ ನಿಲ್ದಾಣವನ್ನು ಮುಚ್ಚಲಾಗಿತ್ತು. ಪಟೇಲ್ ಚೌಕ್ ಬಳಿಯ ಮೆಟ್ರೊ ನಿಲ್ದಾಣದಲ್ಲಿ ಪ್ರವೇಶ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿತ್ತು.</p><p>ಇದಕ್ಕೂ ಮುನ್ನ, ಪಟೇಲ್ ಚೌಕ್ ಬಳಿ ಪ್ರತಿಭಟನೆಗಾಗಿ ಜಮಾವಣೆಗೊಳ್ಳುವವರನ್ನು ಬಂಧಿಸಲಾಗುವುದು ಎಂದು ಡಿಸಿಪಿ (ನವದೆಹಲಿ) ದವೇಶ್ ಕುಮಾರ್ ಎಚ್ಚರಿಸಿದ್ದರು.</p>.ಇ.ಡಿ ಕಸ್ಟಡಿಯಿಂದ ಮತ್ತೊಂದು ನಿರ್ದೇಶನ ನೀಡಿದ ಕೇಜ್ರಿವಾಲ್ .ಕೇಜ್ರಿವಾಲ್ ಬಂಧನಕ್ಕೆ ಖಂಡನೆ: ಮೋದಿ ನಿವಾಸಕ್ಕೆ ಮುತ್ತಿಗೆ ಕರೆ, ಬಿಗಿ ಭದ್ರತೆ.ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಹರಿಯಾಣ ಘಟಕದಿಂದ ಪ್ರತಿಭಟನೆ.ಕೇಜ್ರಿವಾಲ್ ಬಂಧನ ಖಂಡಿಸಿ ಮಾ.26ಕ್ಕೆ ಪ್ರಧಾನಿ ನಿವಾಸಕ್ಕೆ ಘೇರಾವ್: ಎಎಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>