<p><strong>ನವದೆಹಲಿ: </strong>‘ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು, ತಜ್ಞರ ಸಹಾಯವನ್ನು ಪಡೆಯಬೇಕು. ಹಾಗಿದ್ದಲ್ಲಿ ಮಾತ್ರ ಭಾರತವನ್ನು ಕಟ್ಟಲು ಸಾಧ್ಯ. ತಮ್ಮ ತಪ್ಪುಗಳನ್ನು ನಿರಾಕರಿಸುವುದರಿಂದ ಏನೂ ಪರಿಹಾರ ಸಿಗುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.</p>.<p>ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಜಾಗತಿಕವಾಗಿ ಬಡತನ ಹೆಚ್ಚಾಗಿದ್ದು, ಇದರಲ್ಲಿ ಭಾರತ ಶೇಕಡ 57.3 ರಷ್ಟು ಪಾಲನ್ನು ಹೊಂದಿದೆ ಎಂದು ಉಲ್ಲೇಖಿಸಿರುವ ವಿಶ್ವಬ್ಯಾಂಕ್ನ ವರದಿಯೊಂದನ್ನು ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಕೋವಿಡ್ ನಿರ್ವಹಣೆಯಲ್ಲಿ ಭಾರತ ಸರ್ಕಾರ ಎಡವಿದೆ. ಇದು ಅದರದ್ದೇ ಫಲಿತಾಂಶ. ಆದರೆ ನಾವು ಈಗ ಭವಿಷ್ಯದ ಮೇಲೆ ಗಮನಹರಿಸಬೇಕು. ಪ್ರಧಾನಿ ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು, ಸಾಂಕ್ರಾಮಿಕ ನಿರ್ವಹಣೆಗೆ ತಜ್ಞರ ಸಹಾಯವನ್ನು ಪಡೆಯಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು, ತಜ್ಞರ ಸಹಾಯವನ್ನು ಪಡೆಯಬೇಕು. ಹಾಗಿದ್ದಲ್ಲಿ ಮಾತ್ರ ಭಾರತವನ್ನು ಕಟ್ಟಲು ಸಾಧ್ಯ. ತಮ್ಮ ತಪ್ಪುಗಳನ್ನು ನಿರಾಕರಿಸುವುದರಿಂದ ಏನೂ ಪರಿಹಾರ ಸಿಗುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.</p>.<p>ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಜಾಗತಿಕವಾಗಿ ಬಡತನ ಹೆಚ್ಚಾಗಿದ್ದು, ಇದರಲ್ಲಿ ಭಾರತ ಶೇಕಡ 57.3 ರಷ್ಟು ಪಾಲನ್ನು ಹೊಂದಿದೆ ಎಂದು ಉಲ್ಲೇಖಿಸಿರುವ ವಿಶ್ವಬ್ಯಾಂಕ್ನ ವರದಿಯೊಂದನ್ನು ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಕೋವಿಡ್ ನಿರ್ವಹಣೆಯಲ್ಲಿ ಭಾರತ ಸರ್ಕಾರ ಎಡವಿದೆ. ಇದು ಅದರದ್ದೇ ಫಲಿತಾಂಶ. ಆದರೆ ನಾವು ಈಗ ಭವಿಷ್ಯದ ಮೇಲೆ ಗಮನಹರಿಸಬೇಕು. ಪ್ರಧಾನಿ ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು, ಸಾಂಕ್ರಾಮಿಕ ನಿರ್ವಹಣೆಗೆ ತಜ್ಞರ ಸಹಾಯವನ್ನು ಪಡೆಯಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>