ಚರ್ಚೆಯಲ್ಲಿ ಭಾಗವಹಿಸಲು ಪಂಥಾಹ್ವಾನವನ್ನು ಸ್ವೀಕರಿಸಿರುವ ರಾಹುಲ್ ಗಾಂಧಿ, ನಾವು ಸಿದ್ದವಾಗಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಯಲ್ಲಿ ಭಾಗವಹಿಸಬೇಕೆಂದು ದೇಶದ ಜನತೆ ನಿರೀಕ್ಷಿಸುತ್ತಿದ್ದಾರೆ ಎಂದು ಶನಿವಾರ ಹೇಳಿದ್ದರು.
ಲೋಕಸಭೆ ಚುನಾವಣೆಯ ಪ್ರಮುಖ ವಿಷಯಗಳ ಕುರಿತು ಚರ್ಚೆಯಲ್ಲಿ ಭಾಗಹಿಸುವಂತೆ ನಿವೃತ್ತ ನ್ಯಾಯಾಧೀಶರಾದ ಮದನ್ ಬಿ.ಲೋಕೂರ್ ಮತ್ತು ಅಜಿತ್ ಪಿ.ಶಾ ಮತ್ತಿತ್ತರರು ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಾರದ ಹಿಂದೆ ಪತ್ರ ಬರೆದು ಆಹ್ವಾನ ನೀಡಿದ್ದರು.