<p><strong>ಚೆನ್ನೈ:</strong> ತಮಿಳುನಾಡಿನ ಪಿಎಂಕೆಯ ಡಾ. ಅನ್ಬುಮಣಿ ರಾಮದಾಸ್ ನೇತೃತ್ವದ ಬಣವು ಬುಧವಾರ ಎನ್ಡಿಎ ಮೈತ್ರಿಕೂಟಕ್ಕೆ ಸೇರಿತು. </p>.<p>ರಾಜ್ಯದಲ್ಲಿ ಎನ್ಡಿಎ ಮುನ್ನಡೆಸುತ್ತಿರುವ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ತಮ್ಮ ಮೈತ್ರಿಯನ್ನು ಬಲಪಡಿಸಿಕೊಂಡಿದ್ದಾರೆ.</p>.<p>ರಾಮದಾಸ್ ಅವರು ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡರು. ಬಿಜೆಪಿಯು ಸಹ ಇದೇ ಮೈತ್ರಿಕೂಟದಲ್ಲಿದೆ.</p>.<p>‘ಪಟ್ಟಾಳಿ ಮಕ್ಕಳ್ ಕಚ್ಚಿ(ಪಿಎಂಕೆ) ನಮ್ಮ ಮೈತ್ರಿಗೆ ಸೇರ್ಪಡೆಗೊಂಡಿದೆ. ಶೀಘ್ರದಲ್ಲೇ ಮತ್ತಷ್ಟು ಪಕ್ಷಗಳು ನಮ್ಮೊಂದಿಗೆ ಬರಲಿವೆ’ ಎಂದು ಪಳನಿಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಪಿಎಂಕೆಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ನಿರ್ಧರಿಸಲಾಗಿದ್ದು, ನಂತರ ತಿಳಿಸುತ್ತೇವೆ’ ಎಂದರು.</p>.<p>‘ಜನವಿರೋಧಿ ಆಗಿರುವ ಆಡಳಿತಾರೂಢ ಡಿಎಂಕೆ ಮೈತ್ರಿಕೂಟವನ್ನು ಮಣಿಸಲಿಕ್ಕಾಗಿಯೇ ಎನ್ಡಿಎ ಜೊತೆ ಕೈಜೋಡಿಸಿದ್ದೇನೆ’ ಎಂದು ಪಿಎಂಕೆ ಮುಖಂಡ ಅನ್ಬುಮಣಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನ ಪಿಎಂಕೆಯ ಡಾ. ಅನ್ಬುಮಣಿ ರಾಮದಾಸ್ ನೇತೃತ್ವದ ಬಣವು ಬುಧವಾರ ಎನ್ಡಿಎ ಮೈತ್ರಿಕೂಟಕ್ಕೆ ಸೇರಿತು. </p>.<p>ರಾಜ್ಯದಲ್ಲಿ ಎನ್ಡಿಎ ಮುನ್ನಡೆಸುತ್ತಿರುವ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ತಮ್ಮ ಮೈತ್ರಿಯನ್ನು ಬಲಪಡಿಸಿಕೊಂಡಿದ್ದಾರೆ.</p>.<p>ರಾಮದಾಸ್ ಅವರು ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡರು. ಬಿಜೆಪಿಯು ಸಹ ಇದೇ ಮೈತ್ರಿಕೂಟದಲ್ಲಿದೆ.</p>.<p>‘ಪಟ್ಟಾಳಿ ಮಕ್ಕಳ್ ಕಚ್ಚಿ(ಪಿಎಂಕೆ) ನಮ್ಮ ಮೈತ್ರಿಗೆ ಸೇರ್ಪಡೆಗೊಂಡಿದೆ. ಶೀಘ್ರದಲ್ಲೇ ಮತ್ತಷ್ಟು ಪಕ್ಷಗಳು ನಮ್ಮೊಂದಿಗೆ ಬರಲಿವೆ’ ಎಂದು ಪಳನಿಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಪಿಎಂಕೆಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ನಿರ್ಧರಿಸಲಾಗಿದ್ದು, ನಂತರ ತಿಳಿಸುತ್ತೇವೆ’ ಎಂದರು.</p>.<p>‘ಜನವಿರೋಧಿ ಆಗಿರುವ ಆಡಳಿತಾರೂಢ ಡಿಎಂಕೆ ಮೈತ್ರಿಕೂಟವನ್ನು ಮಣಿಸಲಿಕ್ಕಾಗಿಯೇ ಎನ್ಡಿಎ ಜೊತೆ ಕೈಜೋಡಿಸಿದ್ದೇನೆ’ ಎಂದು ಪಿಎಂಕೆ ಮುಖಂಡ ಅನ್ಬುಮಣಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>