<p><strong>ವಿಲ್ಲುಪುರಂ</strong>: ನಮ್ಮ ಪಕ್ಷದ ಮೂಲತತ್ವಗಳಿಗೆ ವಿರುದ್ಧವಾಗಿ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡಿ ತಪ್ಪು ಎಸಗಿದೆ ಎಂದು ಹೇಳುವ ಮೂಲಕ ತಮಿಳುನಾಡಿನ ಪಟ್ಟಾಳಿ ಮಕ್ಕಳ್ ಕಚ್ಚಿ ಸಂಸ್ಥಾಪಕ ಎಸ್.ರಾಮದಾಸ್ ಗುರುವಾರ ಅಚ್ಚರಿ ಮೂಡಿಸಿದ್ದಾರೆ.</p>.<p>ಇತ್ತೀಚೆಗಷ್ಟೇ ತಮ್ಮ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ವಿಮುಕ್ತಿಗೊಳಿಸಿದ್ದ ಎಸ್.ರಾಮದಾಸ್, ಕಾರ್ಯಾಧ್ಯಕ್ಷ ಸ್ಥಾನವನ್ನು ನೀಡಿದ್ದರು.</p>.<p>ಥೈಲಪುರಂನಲ್ಲಿ ಮಾತನಾಡಿದ 85 ವರ್ಷದ ರಾಮದಾಸ್ ‘ಅನ್ಬುಮಣಿ 35 ವರ್ಷದವನಿದ್ದಾಗ ಅವರನ್ನು ಕೇಂದ್ರದಲ್ಲಿ ಮಂತ್ರಿ ಮಾಡಿ ತಪ್ಪು ಹೆಜ್ಜೆ ಇಟ್ಟಿದ್ದೆ. 2024ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ನನ್ನ ಮಗ ಬಲವಂತ ಮಾಡಿದ್ದ‘ ಎಂದು ಹೇಳಿದ್ದಾರೆ.</p>.<p>ಅಗತ್ಯ ಬಿದ್ದರೆ ಪಕ್ಷದ ಸಾಮಾನ್ಯ ಸಭೆ ಕರೆದು ಅನ್ಬುಮಣಿಯನ್ನು ಪಕ್ಷದ ಪದವಿಯಿಂದ ತಗೆದುಹಾಕುವುದಾಗಿಯೂ ಹೇಳಿದ್ದಾರೆ. ಅನ್ಬುಮಣಿ ಅವರು 2004 ಮತ್ತು 2009ರ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಲ್ಲುಪುರಂ</strong>: ನಮ್ಮ ಪಕ್ಷದ ಮೂಲತತ್ವಗಳಿಗೆ ವಿರುದ್ಧವಾಗಿ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡಿ ತಪ್ಪು ಎಸಗಿದೆ ಎಂದು ಹೇಳುವ ಮೂಲಕ ತಮಿಳುನಾಡಿನ ಪಟ್ಟಾಳಿ ಮಕ್ಕಳ್ ಕಚ್ಚಿ ಸಂಸ್ಥಾಪಕ ಎಸ್.ರಾಮದಾಸ್ ಗುರುವಾರ ಅಚ್ಚರಿ ಮೂಡಿಸಿದ್ದಾರೆ.</p>.<p>ಇತ್ತೀಚೆಗಷ್ಟೇ ತಮ್ಮ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ವಿಮುಕ್ತಿಗೊಳಿಸಿದ್ದ ಎಸ್.ರಾಮದಾಸ್, ಕಾರ್ಯಾಧ್ಯಕ್ಷ ಸ್ಥಾನವನ್ನು ನೀಡಿದ್ದರು.</p>.<p>ಥೈಲಪುರಂನಲ್ಲಿ ಮಾತನಾಡಿದ 85 ವರ್ಷದ ರಾಮದಾಸ್ ‘ಅನ್ಬುಮಣಿ 35 ವರ್ಷದವನಿದ್ದಾಗ ಅವರನ್ನು ಕೇಂದ್ರದಲ್ಲಿ ಮಂತ್ರಿ ಮಾಡಿ ತಪ್ಪು ಹೆಜ್ಜೆ ಇಟ್ಟಿದ್ದೆ. 2024ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ನನ್ನ ಮಗ ಬಲವಂತ ಮಾಡಿದ್ದ‘ ಎಂದು ಹೇಳಿದ್ದಾರೆ.</p>.<p>ಅಗತ್ಯ ಬಿದ್ದರೆ ಪಕ್ಷದ ಸಾಮಾನ್ಯ ಸಭೆ ಕರೆದು ಅನ್ಬುಮಣಿಯನ್ನು ಪಕ್ಷದ ಪದವಿಯಿಂದ ತಗೆದುಹಾಕುವುದಾಗಿಯೂ ಹೇಳಿದ್ದಾರೆ. ಅನ್ಬುಮಣಿ ಅವರು 2004 ಮತ್ತು 2009ರ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>