<p><strong>ಕೋಲ್ಕತ್ತ</strong>: ‘ಪ್ರಧಾನಿ ಮೋದಿ ಅವರ 'ಸಬ್ಕಾ ಸಾಥ್ ಸಬ್ಕಾ ವಿಕಾಸ್' ಮಂತ್ರವೇ ನಮ್ಮ ಸರ್ಕಾರದ ಸೂತ್ರವಾಗಿದೆ’ ಎಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸೋಮವಾರ ಹೇಳಿದ್ದಾರೆ.</p><p>ಸಾಲ್ಟ್ ಲೇಕ್ನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಸಂದರ್ಭದಲ್ಲಿ ನೀಡಲಾದ ಎಲ್ಲಾ ಭರವಸೆಗಳನ್ನು ಜಾರಿಗೆ ತರಲಾಗುವುದು’ ಎಂದು ಅವರು ಹೇಳಿದರು.</p><p>ಸುವೇಂದು ಅಧಿಕಾರಿ ಅವರಿಗೆ ಕಚೇರಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಕಚೇರಿಯನ್ನು ಹೂಗಳಿಂದ ಅಲಂಕರಿಸಿದ್ದು, ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಭಾರತ ಮಾತೆಯ ಚಿತ್ರಕ್ಕೆ ಪಕ್ಷದ ಮುಖ್ಯಸ್ಥರು ಪುಷ್ಟ ನಮನ ಸಲ್ಲಿಸಿದ್ದಾರೆ.</p><p>ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿರುವ ಸ್ಥಾನಗಳ ಸಂಖ್ಯೆಯನ್ನು ಸೂಚಿಸುವ ಸಂಕೇತವಾಗಿ ಕಾರ್ಯಕರ್ತರು ಸುವೇಂದು ಅವರಿಗೆ 207 ಕಮಲದ ಹೂವುಗಳನ್ನು ನೀಡಿ ಸ್ವಾಗತಿಸಿದ್ದಾರೆ.</p><p>ಈ ವೇಳೆ ಬಿಧಾನನಗರ ಶಾಸಕ ಶರದ್ವತ್ ಮುಖರ್ಜಿ ಸೇರಿದಂತೆ ಹಲವು ಬಿಜೆಪಿ ಶಾಸಕರು ಉಪಸ್ಥಿತರಿದ್ದರು.</p><p>ಇದಕ್ಕೂ ಮುನ್ನ ನ್ಯೂ ಟೌನ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿಗಳಿದ್ದು, ನಾವು ಜನರಿಗಾಗಿ ಕೆಲಸ ಮಾಡಬೇಕಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ‘ಪ್ರಧಾನಿ ಮೋದಿ ಅವರ 'ಸಬ್ಕಾ ಸಾಥ್ ಸಬ್ಕಾ ವಿಕಾಸ್' ಮಂತ್ರವೇ ನಮ್ಮ ಸರ್ಕಾರದ ಸೂತ್ರವಾಗಿದೆ’ ಎಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸೋಮವಾರ ಹೇಳಿದ್ದಾರೆ.</p><p>ಸಾಲ್ಟ್ ಲೇಕ್ನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಸಂದರ್ಭದಲ್ಲಿ ನೀಡಲಾದ ಎಲ್ಲಾ ಭರವಸೆಗಳನ್ನು ಜಾರಿಗೆ ತರಲಾಗುವುದು’ ಎಂದು ಅವರು ಹೇಳಿದರು.</p><p>ಸುವೇಂದು ಅಧಿಕಾರಿ ಅವರಿಗೆ ಕಚೇರಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಕಚೇರಿಯನ್ನು ಹೂಗಳಿಂದ ಅಲಂಕರಿಸಿದ್ದು, ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಭಾರತ ಮಾತೆಯ ಚಿತ್ರಕ್ಕೆ ಪಕ್ಷದ ಮುಖ್ಯಸ್ಥರು ಪುಷ್ಟ ನಮನ ಸಲ್ಲಿಸಿದ್ದಾರೆ.</p><p>ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿರುವ ಸ್ಥಾನಗಳ ಸಂಖ್ಯೆಯನ್ನು ಸೂಚಿಸುವ ಸಂಕೇತವಾಗಿ ಕಾರ್ಯಕರ್ತರು ಸುವೇಂದು ಅವರಿಗೆ 207 ಕಮಲದ ಹೂವುಗಳನ್ನು ನೀಡಿ ಸ್ವಾಗತಿಸಿದ್ದಾರೆ.</p><p>ಈ ವೇಳೆ ಬಿಧಾನನಗರ ಶಾಸಕ ಶರದ್ವತ್ ಮುಖರ್ಜಿ ಸೇರಿದಂತೆ ಹಲವು ಬಿಜೆಪಿ ಶಾಸಕರು ಉಪಸ್ಥಿತರಿದ್ದರು.</p><p>ಇದಕ್ಕೂ ಮುನ್ನ ನ್ಯೂ ಟೌನ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿಗಳಿದ್ದು, ನಾವು ಜನರಿಗಾಗಿ ಕೆಲಸ ಮಾಡಬೇಕಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>