<p><strong>ಇಂದೋರ್:</strong> ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರಂಭಿಸಿದ ‘ಏಕ್ ಪೇಡ್ ಮಾ ಕೆ ನಾಮ್' (ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನವು ಹವಾಮಾನ ಬದಲಾವಣೆಯ ಸವಾಲುಗಳಿಗೆ ಸೂಕ್ತ ಉತ್ತರವಾಗಿದೆ ಎಂದು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.</p>.<p>‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದ ಭಾಗವಾಗಿ, ಮಧ್ಯಪ್ರದೇಶದ ಇಂದೋರ್ನಲ್ಲಿ ಒಂದೇ ದಿನ 11 ಲಕ್ಷ ಸಸಿಗಳನ್ನು ನೆಡುವ ಮೂಲಕ ವಿಶ್ವದಾಖಲೆ ನಿರ್ಮಿಸುವ ಗುರಿಯ ಕಾರ್ಯಕ್ರಮದಲ್ಲಿ ಶಾ ಅವರು ಪಾಲ್ಗೊಂಡರು. </p>.<p>‘ಪರಿಸರ ಸಂರಕ್ಷಣೆ ಮೋದಿ ಸರ್ಕಾರದ ದೊಡ್ಡ ಆದ್ಯತೆಗಳಲ್ಲಿ ಒಂದಾಗಿದೆ, ಇದು ಸಸಿಗಳನ್ನು ನೆಡುವುದು ಸಾರ್ವಜನಿಕ ಜಾಗೃತಿಯ ವಿಷಯವನ್ನಾಗಿ ಮಾಡಿದೆ. ಪರಿಸರ ಕಾಳಜಿ ದೇಶಕ್ಕೆ ಮಾತ್ರವಲ್ಲ, ಕಾರ್ಬನ್ ಡೈಆಕ್ಸೈಡ್ ಮತ್ತು ಮಾನಾಕ್ಸೈಡ್ಗಳಿಂದ ಓಝೋನ್ ಪದರದ ರಕ್ಷಣೆಗೂ ಮುಖ್ಯವಾಗಿದೆ’ ಎಂದು ಶಾ ಹೇಳಿದರು.</p>.<p>ಜೂನ್ 5ರಂದು ವಿಶ್ವ ಪರಿಸರ ದಿನದಂದು ಮೋದಿ ಅವರು ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನ ಪ್ರಾರಂಭಿಸಿದರು. ಇದರ ಅಡಿಯಲ್ಲಿ ಮಧ್ಯಪ್ರದೇಶದಲ್ಲಿ 5.5 ಕೋಟಿ ಸೇರಿದಂತೆ ದೇಶದಾದ್ಯಂತ ಸುಮಾರು 140 ಕೋಟಿ ಮರಗಳನ್ನು ನೆಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರಂಭಿಸಿದ ‘ಏಕ್ ಪೇಡ್ ಮಾ ಕೆ ನಾಮ್' (ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನವು ಹವಾಮಾನ ಬದಲಾವಣೆಯ ಸವಾಲುಗಳಿಗೆ ಸೂಕ್ತ ಉತ್ತರವಾಗಿದೆ ಎಂದು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.</p>.<p>‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದ ಭಾಗವಾಗಿ, ಮಧ್ಯಪ್ರದೇಶದ ಇಂದೋರ್ನಲ್ಲಿ ಒಂದೇ ದಿನ 11 ಲಕ್ಷ ಸಸಿಗಳನ್ನು ನೆಡುವ ಮೂಲಕ ವಿಶ್ವದಾಖಲೆ ನಿರ್ಮಿಸುವ ಗುರಿಯ ಕಾರ್ಯಕ್ರಮದಲ್ಲಿ ಶಾ ಅವರು ಪಾಲ್ಗೊಂಡರು. </p>.<p>‘ಪರಿಸರ ಸಂರಕ್ಷಣೆ ಮೋದಿ ಸರ್ಕಾರದ ದೊಡ್ಡ ಆದ್ಯತೆಗಳಲ್ಲಿ ಒಂದಾಗಿದೆ, ಇದು ಸಸಿಗಳನ್ನು ನೆಡುವುದು ಸಾರ್ವಜನಿಕ ಜಾಗೃತಿಯ ವಿಷಯವನ್ನಾಗಿ ಮಾಡಿದೆ. ಪರಿಸರ ಕಾಳಜಿ ದೇಶಕ್ಕೆ ಮಾತ್ರವಲ್ಲ, ಕಾರ್ಬನ್ ಡೈಆಕ್ಸೈಡ್ ಮತ್ತು ಮಾನಾಕ್ಸೈಡ್ಗಳಿಂದ ಓಝೋನ್ ಪದರದ ರಕ್ಷಣೆಗೂ ಮುಖ್ಯವಾಗಿದೆ’ ಎಂದು ಶಾ ಹೇಳಿದರು.</p>.<p>ಜೂನ್ 5ರಂದು ವಿಶ್ವ ಪರಿಸರ ದಿನದಂದು ಮೋದಿ ಅವರು ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನ ಪ್ರಾರಂಭಿಸಿದರು. ಇದರ ಅಡಿಯಲ್ಲಿ ಮಧ್ಯಪ್ರದೇಶದಲ್ಲಿ 5.5 ಕೋಟಿ ಸೇರಿದಂತೆ ದೇಶದಾದ್ಯಂತ ಸುಮಾರು 140 ಕೋಟಿ ಮರಗಳನ್ನು ನೆಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>